r ashok
ಬೆಂಗಳೂರು : ತಮಿಳುನಾಡಿದ ಕರೂರುನಲ್ಲಿ ಶನಿವಾರ ಸಂಜೆ ಸಂಭವಿಸಿದ ಭೀಕರ ಕಾಲ್ತುಳಿತ ದುರಂತಕ್ಕೆ ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರವೇ ನೇರ ಕಾರಣ ಎಂದ ಕರ್ನಾಟಕದ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ, ತಮಿಳುನಾಡಿನ ಕರೂರಿನಲ್ಲಾದ ಕಾಲ್ತುಳಿತದ ಘಟನೆಯಿಂದ ಇಡೀ ದೇಶ ಬೆಚ್ಚಿಬಿದ್ದಿದೆ. ವಿಧಾನಸೌಧದ ಮುಂಭಾಗ ಕಾಂಗ್ರೆಸ್ ಸರ್ಕಾರದಿಂದ ನಡೆದಿದ್ದ ಆರ್ಸಿಬಿ ಸಂಭ್ರಮಾಚರಣೆಯಲ್ಲಾದ ಕಾಲ್ತುಳಿತ ಘಟನೆಯಿಂದಲೇ ನಾವೆಲ್ಲರೂ ದುಃಖಕ್ಕೊಳಗಾಗಿದ್ದೆವು. ತಮಿಳುನಾಡಿನಲ್ಲಿ ನಡೆದಿರುವ ದುರ್ಘಟನೆ ಇದಕ್ಕಿಂತಲೂ ದೊಡ್ಡದಾಗಿದೆ ಎಂದರು.
ಇದನ್ನೂ ಓದಿ:-ಪೊಲೀಸ್ ನೇಮಕ ವಯೋಮಿತಿ ಹೆಚ್ಚಳದ ಸುಳಿವು ನೀಡಿದ ಪರಮೇಶ್ವರ್
ತಮಿಳುನಾಡಿನ ಡಿಎಂಕೆ ಸರ್ಕಾರ ನಟ ವಿಜಯ್ ವಿರುದ್ಧ ಪ್ರಕರಣ ದಾಖಲಿಸಲು ಮುಂದಾಗಿದೆ. ಡಿಎಂಕೆ ಸರ್ಕಾರ 10 ಸಾವಿರ ಜನರಿಗೆ ಅನುಮತಿ ನೀಡಿದೆ. ಆದರೆ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಿಲ್ಲ. ಈ ಹಿಂದೆಯೇ ಸರ್ಕಾರಕ್ಕೆ ಕೋರ್ಟ್ ಸೂಚನೆ ನೀಡಿದ್ದರೂ, ಅದನ್ನು ಸರ್ಕಾರ ಧಿಕ್ಕರಿಸಿದೆ. ಈ ಅನಾಹುತಕ್ಕೆ ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರವೇ ನೇರ ಕಾರಣ ಎಂದರು.
ನಟ ವಿಜಯ್ ಕೂಡಲೇ ಕ್ಷಮಾಪಣೆ ಕೇಳಿ, ಆಸ್ಪತ್ರೆಗೆ ಭೇಟಿ ನೀಡಬೇಕಿತ್ತು. ಅದನ್ನು ವಿಜಯ್ ಮಾಡಿಲ್ಲ. ಈ ಪ್ರಕರಣವನ್ನು ನಿವೃತ್ತ ನ್ಯಾಯಮೂರ್ತಿಯ ಸಮಿತಿಗೆ ತನಿಖೆಗೆ ನೀಡಬೇಕೆಂದು ಕರ್ನಾಟಕದ ಬಿಜೆಪಿ ಘಟಕ ಆಗ್ರಹಿಸುತ್ತಿದೆ ಎಂದರು.
ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…
ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…
ಕೊಡಗು: ಎಲಿಫೆಂಟ್ ಬಾತಿಂಗ್ ವೇಳೆ ಆನೆಯ ಅಡಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ. ಚೆನ್ನೈ…
ಕಾಂಗೋ: ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿಯಾಗಿದ್ದು, WHO ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಆಫ್ರಿಕಾದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ…
ಮೈಸೂರು: ಪರಪುರುಷನ ಸಂಗ ಮಾಡಿದ್ದ ತಾಯಿಯನ್ನು ಮಗ ಕೊಲೆ ಮಾಡಿರುವ ಘಟನೆ ಮೈಸೂರು ತಾಲ್ಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಧಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್…