ರಾಜ್ಯ

ನನ್ನ ಒಬ್ಬನಿಗೆ ಸಮೀಕ್ಷೆ ಮಾಡಲು ಇಷ್ಟೊಂದು ಜನರು ಬೇಕಾ?: ಸಚಿವ ವಿ.ಸೋಮಣ್ಣ ಕ್ಲಾಸ್‌

ಬೆಂಗಳೂರು: ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸುತ್ತಿರುವ ಶೈಕ್ಷಣಿಕ, ಸಾಮಾಜಿಕ ಸಮೀಕ್ಷೆ ವೇಳೆ ಗಣತಿದಾರರು ನಿಮ್ಮದು ಉಪಜಾತಿ ಯಾವುದು ಎಂದು ಕೇಳಿದಾಗ, ಅದೆಲ್ಲ ಯಾಕೆ ಬೇಕು? ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿ ಎಂದು ಬರೆದುಕೊಳ್ಳಿ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದ ಪ್ರಸಂಗ ಜರುಗಿದೆ.

ಇಂದು ಗಣತಿದಾರರು ವಿಜಯನಗರದಲ್ಲಿರುವ ಸೋಮಣ್ಣ ಅವರ ನಿವಾಸಕ್ಕೆ ತೆರಳಿದ್ದರು. ಜಾತಿ ಗಣತಿ ಸಮೀಕ್ಷೆ ಕುರಿತ ಪ್ರಶ್ನೆಗಳಿಗೆ ಸರಿಯಾಗಿ ಉತ್ತರ ಕೊಡಲಿಲ್ಲ. ಅಲ್ಲದೆ, ಉಪಜಾತಿ ಯಾವುದು ಎಂದು ಕೇಳಿದಾಗ, ಅದೆಲ್ಲ ಯಾಕೆ ಬೇಕು? ಸಿದ್ದರಾಮಯ್ಯ ಜಾತಿ ಎಂದು ಬರೆದುಕೊಳ್ಳಿ ಎನ್ನುತ್ತಲೇ ಗರಂ ಆಗಿದ್ದಾರೆ.

ಮದುವೆ ಆದಾಗ ಎಷ್ಟು ವರ್ಷ ಎಂದು ಕೇಳಿದ ಪ್ರಶ್ನೆಗೂ, ಅದೆಲ್ಲಾ ಏಕೆ ಬೇಕು? ನಮ್ಮ ಅಪ್ಪ ಅಮ್ಮನ ಕೇಳಬೇಕು. ಆಗ ನನ್ನ ವಯಸ್ಸು 26 ಎಂದು ಬರೆದುಕೊಳ್ಳಿ ಇದೆಲ್ಲಾ ಮುಖ್ಯಮಂತ್ರಿ ಸಿದ್ದರಾಮಯ್ಯ ವೋಟ್‍ಗಾಗಿ ಮಾಡುತ್ತಿರುವ ನಾಟಕ ಎಂದು ಕಿಡಿಕಾರಿದರು.

ಇನ್ನು ಅನೇಕ ಪ್ರಶ್ನೆಗಳಿಗೆ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹೆಸರನ್ನೇ ಹಾಕಿಕೊಳ್ಳಿ ಎಂದು ರೇಗಾಡಿದ ಸೋಮಣ್ಣ , ಯಾವ್ ತಲೆ ಕೆಟ್ಟಿರೋರು ಈ ರೀತಿ ಪ್ರಶ್ನೆಗಳನ್ನೆಲ್ಲಾ ಹಾಕಿದ್ದು? ಅವರನ್ನೇ ಕರೀಬೇಕು. ಎಲ್ಲಿ ಕೆಲಸ ಮಾಡೋದು ಎಂಬ ಪ್ರಶ್ನೆಗೆ ಉತ್ತರ ಕೊಡಲು ಆಗುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದರು.

ಇದನ್ನೂ ಓದಿ:-ನಾಡಿನಿಂದ ಕಾಡಿಗೆ ಮರಳಿದ ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ ದಸರಾ ಗಜಪಡೆ

ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರಿಗೆ ಯಾವ ಗ್ರೂಪ್ ಎಂದು ಹಾಕುತ್ತೀರಿ? ಆದಾಯ ಎಷ್ಟು? ಎಂಬ ಪ್ರಶ್ನೆ ಇದೆ. ಇದಕ್ಕೆ ಆದಾಯ ಇಲಾಖೆ ಕೇಳಿದರೆ, ಉತ್ತರ ಕೊಡುತ್ತಾರೆ. ಸಿದ್ದರಾಮಯ್ಯ ಕೆಲಸಕ್ಕೆ ಬಾರದ ಕೆಲಸ ಸೃಷ್ಟಿ ಮಾಡಿದ್ದಾರೆ. ಇದು ಅವೈಜ್ಞಾನಿಕ ಸಮೀಕ್ಷೆ ಆಗಿದೆ. ಸುಮಾರು 1 ಗಂಟೆ 4 ನಿಮಿಷಗಳ ಕಾಲ ನನ್ನ ಮಾಹಿತಿ ಪಡೆದಿದ್ದಾರೆ. ತಾಂತ್ರಿಕ ಸಮಸ್ಯೆಯಿಂದ ಕೂಡಿದೆ. ಇನ್ನೊಂದು ಕಾಂತರಾಜ್ ಸಮಿತಿ ವರದಿ ಆಗುತ್ತೆ ಅಷ್ಟೇ ಎಂದು ಸಿಡಿಮಿಡಿಗೊಂಡಿದ್ದಾರೆ.

ಸಮೀಕ್ಷೆ ಸರಳೀಕರಣ ಮಾಡಿ: ಇದರಲ್ಲಿ ಸರ್ಕಾರ ಯಾವ ಸಾಧನೆಯನ್ನೂ ಮಾಡಲು ಆಗವುದಿಲ್ಲ. ಅವೈಜ್ಞಾನಿಕ ಗಣತಿಯಿಂದ ಮಾಹಿತಿ ಸಿಗಲ್ಲ. ಅಧಿಕಾರಿಗಳಿಗೆ ಸರಿಯಾದ ಮಾಹಿತಿ ಗೊತ್ತಿಲ್ಲ. ಅಧಿಕಾರಿಗಳು ಕೇಳಿದ ಸುಮಾರು ಮಾಹಿತಿ ಅನವಶ್ಯಕವಾಗಿತ್ತು. ಇದರಿಂದ ಜನರು ಗೊಂದಲಗೊಳ್ಳುತ್ತಿದ್ದಾರೆ. ಸಮೀಕ್ಷೆ ಸರಳೀಕರಣ ಮಾಡಿ ಎಂದು ಸಲಹೆ ನೀಡಿದರು.

ಇದನ್ನು ಮುಗಿಸಲು ಕನಿಷ್ಠ ಪಕ್ಷ 6 ತಿಂಗಳು ಬೇಕು. ಇದು ಕಾಂತರಾಜ್ ಸಮಿತಿಗಿಂತಲೂ ಕೆಟ್ಟದಾಗಿ ಆಗುತ್ತದೆ. ಈ ಸರ್ಕಾರಕ್ಕೆ ಜಾತಿ ಬಿಟ್ಟರೆ ಬೇರೆ ಅವಶ್ಯಕತೆ ಇಲ್ಲ. ಯಾವ ಸಮಾಜಕ್ಕೆ ಅನ್ಯಾಯ ಮಾಡಬೇಕು ಎಂಬುದು ನಿಮ ತಲೆಯಲ್ಲಿ ಇದೆ. ಸಿದ್ದರಾಮಯ್ಯರ ಬಗ್ಗೆ ಕಾಂಗ್ರೆಸ್ ಅವರೇ ಮಾತನಾಡುತ್ತಿದ್ದಾರೆ. ಇದು ನಿಮಗೆ ಇದು ಶೋಭೆ ತರಲ್ಲ. ಈ ರೀತಿಯಾಗಿ ಮಾಡಲು ಹೋದರೆ, ಒಂದು ವರ್ಷ ಬೇಕು. ಈಗಲೇ ಸಮೀಕ್ಷೆ ರದ್ದುಗೊಳಿಸಿ ಎಂದು ಸೋಮಣ್ಣ ತುಸು ಆಕ್ರೋಶದಿಂದಲೇ ಅಸಮಾಧಾನ ಹೊರಹಾಕಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸಾಂಘಿಕ ಪ್ರದರ್ಶನದಿಂದ ಭಾರತದ ಮುಡಿಗೆ ಟಿ-೨೦ ವಿಶ್ವಕಪ್

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್…

4 hours ago

ಓದುಗರ ಪತ್ರ: ಅನುಭವಿ ಮೌಲ್ಯಮಾಪಕರಿಗೆ ಆದ್ಯತೆ ನೀಡಿ

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ…

4 hours ago

ಓದುಗರ ಪತ್ರ: ಆಟೋ ಚಾಲಕರಿಂದ ಅರವಟ್ಟಿಗೆ ಸೌಲಭ್ಯ

ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಬಿಸಿಲಿನ ತಾಪ ಹೆಚ್ಚಾಗಿ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಮೈಸೂರಿನ ರಾಮಸ್ವಾಮಿ…

4 hours ago

ಓದುಗರ ಪತ್ರ: ಯುದ್ಧ: ಎಂಎಲ್‌ಸಿಗೆ ಸ್ಪಂದಿಸದ ಕೇಂದ್ರ ಸರ್ಕಾರ?

ಇಸ್ರೇಲ್- ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಭಾರತದಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಂದ ಕಾರ್ಯನಿಮಿತ್ತ…

4 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಸ್ಲಮ್ ವಾಸಿಗಳಿಗೆ ಬದುಕು ಕಟ್ಟಿ ಕೊಟ್ಟ ಆರ್ಕಿಟೆಕ್ಟ್‌

ಕೊಳೆಗೇರಿಗಳ ೨೭,೦೦೦ ಮನೆಗಳಿಗೆ ಶೌಚಾಲಯ ಸೌಲಭ್ಯ ಪೂನಾದ ಇಂದಿರಾ ವಸಾಹತ್ ಎಂಬ ಪ್ರದೇಶದ ಒಂದು ಸ್ಲಮ್ಮಿನಲ್ಲಿ ವಾಸಿಸುವ ಲತಾ ರತನ್…

4 hours ago

ಮರಿಗಳೊಂದಿಗೆ ಹುಲಿ ಕಂಡು ಪುಳಕಿತರಾದ ಪ್ರವಾಸಿಗರು

ಮಹೇಂದ್ರ ಹಸಗೂಲಿ ತಾಯಿ ಹುಲಿ ನಾಪತ್ತೆಯಾಗಿದ್ದರಿಂದ ಮರಿಗಳನ್ನು ಪಾಲನೆ ಮಾಡಿದ್ದ ಅರಣ್ಯ ಇಲಾಖೆ  ಗುಂಡ್ಲುಪೇಟೆ: ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು…

4 hours ago