ರಾಜ್ಯ

ನನ್ನ ಒಬ್ಬನಿಗೆ ಸಮೀಕ್ಷೆ ಮಾಡಲು ಇಷ್ಟೊಂದು ಜನರು ಬೇಕಾ?: ಸಚಿವ ವಿ.ಸೋಮಣ್ಣ ಕ್ಲಾಸ್‌

ಬೆಂಗಳೂರು: ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸುತ್ತಿರುವ ಶೈಕ್ಷಣಿಕ, ಸಾಮಾಜಿಕ ಸಮೀಕ್ಷೆ ವೇಳೆ ಗಣತಿದಾರರು ನಿಮ್ಮದು ಉಪಜಾತಿ ಯಾವುದು ಎಂದು ಕೇಳಿದಾಗ, ಅದೆಲ್ಲ ಯಾಕೆ ಬೇಕು? ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿ ಎಂದು ಬರೆದುಕೊಳ್ಳಿ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದ ಪ್ರಸಂಗ ಜರುಗಿದೆ.

ಇಂದು ಗಣತಿದಾರರು ವಿಜಯನಗರದಲ್ಲಿರುವ ಸೋಮಣ್ಣ ಅವರ ನಿವಾಸಕ್ಕೆ ತೆರಳಿದ್ದರು. ಜಾತಿ ಗಣತಿ ಸಮೀಕ್ಷೆ ಕುರಿತ ಪ್ರಶ್ನೆಗಳಿಗೆ ಸರಿಯಾಗಿ ಉತ್ತರ ಕೊಡಲಿಲ್ಲ. ಅಲ್ಲದೆ, ಉಪಜಾತಿ ಯಾವುದು ಎಂದು ಕೇಳಿದಾಗ, ಅದೆಲ್ಲ ಯಾಕೆ ಬೇಕು? ಸಿದ್ದರಾಮಯ್ಯ ಜಾತಿ ಎಂದು ಬರೆದುಕೊಳ್ಳಿ ಎನ್ನುತ್ತಲೇ ಗರಂ ಆಗಿದ್ದಾರೆ.

ಮದುವೆ ಆದಾಗ ಎಷ್ಟು ವರ್ಷ ಎಂದು ಕೇಳಿದ ಪ್ರಶ್ನೆಗೂ, ಅದೆಲ್ಲಾ ಏಕೆ ಬೇಕು? ನಮ್ಮ ಅಪ್ಪ ಅಮ್ಮನ ಕೇಳಬೇಕು. ಆಗ ನನ್ನ ವಯಸ್ಸು 26 ಎಂದು ಬರೆದುಕೊಳ್ಳಿ ಇದೆಲ್ಲಾ ಮುಖ್ಯಮಂತ್ರಿ ಸಿದ್ದರಾಮಯ್ಯ ವೋಟ್‍ಗಾಗಿ ಮಾಡುತ್ತಿರುವ ನಾಟಕ ಎಂದು ಕಿಡಿಕಾರಿದರು.

ಇನ್ನು ಅನೇಕ ಪ್ರಶ್ನೆಗಳಿಗೆ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹೆಸರನ್ನೇ ಹಾಕಿಕೊಳ್ಳಿ ಎಂದು ರೇಗಾಡಿದ ಸೋಮಣ್ಣ , ಯಾವ್ ತಲೆ ಕೆಟ್ಟಿರೋರು ಈ ರೀತಿ ಪ್ರಶ್ನೆಗಳನ್ನೆಲ್ಲಾ ಹಾಕಿದ್ದು? ಅವರನ್ನೇ ಕರೀಬೇಕು. ಎಲ್ಲಿ ಕೆಲಸ ಮಾಡೋದು ಎಂಬ ಪ್ರಶ್ನೆಗೆ ಉತ್ತರ ಕೊಡಲು ಆಗುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದರು.

ಇದನ್ನೂ ಓದಿ:-ನಾಡಿನಿಂದ ಕಾಡಿಗೆ ಮರಳಿದ ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ ದಸರಾ ಗಜಪಡೆ

ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರಿಗೆ ಯಾವ ಗ್ರೂಪ್ ಎಂದು ಹಾಕುತ್ತೀರಿ? ಆದಾಯ ಎಷ್ಟು? ಎಂಬ ಪ್ರಶ್ನೆ ಇದೆ. ಇದಕ್ಕೆ ಆದಾಯ ಇಲಾಖೆ ಕೇಳಿದರೆ, ಉತ್ತರ ಕೊಡುತ್ತಾರೆ. ಸಿದ್ದರಾಮಯ್ಯ ಕೆಲಸಕ್ಕೆ ಬಾರದ ಕೆಲಸ ಸೃಷ್ಟಿ ಮಾಡಿದ್ದಾರೆ. ಇದು ಅವೈಜ್ಞಾನಿಕ ಸಮೀಕ್ಷೆ ಆಗಿದೆ. ಸುಮಾರು 1 ಗಂಟೆ 4 ನಿಮಿಷಗಳ ಕಾಲ ನನ್ನ ಮಾಹಿತಿ ಪಡೆದಿದ್ದಾರೆ. ತಾಂತ್ರಿಕ ಸಮಸ್ಯೆಯಿಂದ ಕೂಡಿದೆ. ಇನ್ನೊಂದು ಕಾಂತರಾಜ್ ಸಮಿತಿ ವರದಿ ಆಗುತ್ತೆ ಅಷ್ಟೇ ಎಂದು ಸಿಡಿಮಿಡಿಗೊಂಡಿದ್ದಾರೆ.

ಸಮೀಕ್ಷೆ ಸರಳೀಕರಣ ಮಾಡಿ: ಇದರಲ್ಲಿ ಸರ್ಕಾರ ಯಾವ ಸಾಧನೆಯನ್ನೂ ಮಾಡಲು ಆಗವುದಿಲ್ಲ. ಅವೈಜ್ಞಾನಿಕ ಗಣತಿಯಿಂದ ಮಾಹಿತಿ ಸಿಗಲ್ಲ. ಅಧಿಕಾರಿಗಳಿಗೆ ಸರಿಯಾದ ಮಾಹಿತಿ ಗೊತ್ತಿಲ್ಲ. ಅಧಿಕಾರಿಗಳು ಕೇಳಿದ ಸುಮಾರು ಮಾಹಿತಿ ಅನವಶ್ಯಕವಾಗಿತ್ತು. ಇದರಿಂದ ಜನರು ಗೊಂದಲಗೊಳ್ಳುತ್ತಿದ್ದಾರೆ. ಸಮೀಕ್ಷೆ ಸರಳೀಕರಣ ಮಾಡಿ ಎಂದು ಸಲಹೆ ನೀಡಿದರು.

ಇದನ್ನು ಮುಗಿಸಲು ಕನಿಷ್ಠ ಪಕ್ಷ 6 ತಿಂಗಳು ಬೇಕು. ಇದು ಕಾಂತರಾಜ್ ಸಮಿತಿಗಿಂತಲೂ ಕೆಟ್ಟದಾಗಿ ಆಗುತ್ತದೆ. ಈ ಸರ್ಕಾರಕ್ಕೆ ಜಾತಿ ಬಿಟ್ಟರೆ ಬೇರೆ ಅವಶ್ಯಕತೆ ಇಲ್ಲ. ಯಾವ ಸಮಾಜಕ್ಕೆ ಅನ್ಯಾಯ ಮಾಡಬೇಕು ಎಂಬುದು ನಿಮ ತಲೆಯಲ್ಲಿ ಇದೆ. ಸಿದ್ದರಾಮಯ್ಯರ ಬಗ್ಗೆ ಕಾಂಗ್ರೆಸ್ ಅವರೇ ಮಾತನಾಡುತ್ತಿದ್ದಾರೆ. ಇದು ನಿಮಗೆ ಇದು ಶೋಭೆ ತರಲ್ಲ. ಈ ರೀತಿಯಾಗಿ ಮಾಡಲು ಹೋದರೆ, ಒಂದು ವರ್ಷ ಬೇಕು. ಈಗಲೇ ಸಮೀಕ್ಷೆ ರದ್ದುಗೊಳಿಸಿ ಎಂದು ಸೋಮಣ್ಣ ತುಸು ಆಕ್ರೋಶದಿಂದಲೇ ಅಸಮಾಧಾನ ಹೊರಹಾಕಿದರು.

ಆಂದೋಲನ ಡೆಸ್ಕ್

Recent Posts

ಹೆಚ್ಚುತ್ತಿರುವ ಯುವತಿಯರ ಆತ್ಮಹತ್ಯೆ ; ಯುವತಿಯರಿಗೆ ಕಂಗನಾ ರಣಾವತ್ ಕಿವಿಮಾತು

ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…

3 hours ago

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…

5 hours ago

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ : ಈಶ್ವರ ಖಂಡ್ರೆ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು :  ರಾಜ್ಯದ ಐದು ಹುಲಿ…

6 hours ago

ಮ.ಬೆಟ್ಟ | ಮರದ ಕೊಂಬೆ ಬಿದ್ದು ಮೂವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…

8 hours ago

ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ

ಬೆಂಗಳೂರು: ಆನ್‍ಲೈನ್‍ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಮಿಶ್ರ…

11 hours ago

ಯಳಂದೂರು: ಬೋನಿಗೆ ಬಿದ್ದ ಚಿರತೆ

ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…

12 hours ago