ರಾಜ್ಯ

ನನ್ನ ಒಬ್ಬನಿಗೆ ಸಮೀಕ್ಷೆ ಮಾಡಲು ಇಷ್ಟೊಂದು ಜನರು ಬೇಕಾ?: ಸಚಿವ ವಿ.ಸೋಮಣ್ಣ ಕ್ಲಾಸ್‌

ಬೆಂಗಳೂರು: ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸುತ್ತಿರುವ ಶೈಕ್ಷಣಿಕ, ಸಾಮಾಜಿಕ ಸಮೀಕ್ಷೆ ವೇಳೆ ಗಣತಿದಾರರು ನಿಮ್ಮದು ಉಪಜಾತಿ ಯಾವುದು ಎಂದು ಕೇಳಿದಾಗ, ಅದೆಲ್ಲ ಯಾಕೆ ಬೇಕು? ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿ ಎಂದು ಬರೆದುಕೊಳ್ಳಿ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದ ಪ್ರಸಂಗ ಜರುಗಿದೆ.

ಇಂದು ಗಣತಿದಾರರು ವಿಜಯನಗರದಲ್ಲಿರುವ ಸೋಮಣ್ಣ ಅವರ ನಿವಾಸಕ್ಕೆ ತೆರಳಿದ್ದರು. ಜಾತಿ ಗಣತಿ ಸಮೀಕ್ಷೆ ಕುರಿತ ಪ್ರಶ್ನೆಗಳಿಗೆ ಸರಿಯಾಗಿ ಉತ್ತರ ಕೊಡಲಿಲ್ಲ. ಅಲ್ಲದೆ, ಉಪಜಾತಿ ಯಾವುದು ಎಂದು ಕೇಳಿದಾಗ, ಅದೆಲ್ಲ ಯಾಕೆ ಬೇಕು? ಸಿದ್ದರಾಮಯ್ಯ ಜಾತಿ ಎಂದು ಬರೆದುಕೊಳ್ಳಿ ಎನ್ನುತ್ತಲೇ ಗರಂ ಆಗಿದ್ದಾರೆ.

ಮದುವೆ ಆದಾಗ ಎಷ್ಟು ವರ್ಷ ಎಂದು ಕೇಳಿದ ಪ್ರಶ್ನೆಗೂ, ಅದೆಲ್ಲಾ ಏಕೆ ಬೇಕು? ನಮ್ಮ ಅಪ್ಪ ಅಮ್ಮನ ಕೇಳಬೇಕು. ಆಗ ನನ್ನ ವಯಸ್ಸು 26 ಎಂದು ಬರೆದುಕೊಳ್ಳಿ ಇದೆಲ್ಲಾ ಮುಖ್ಯಮಂತ್ರಿ ಸಿದ್ದರಾಮಯ್ಯ ವೋಟ್‍ಗಾಗಿ ಮಾಡುತ್ತಿರುವ ನಾಟಕ ಎಂದು ಕಿಡಿಕಾರಿದರು.

ಇನ್ನು ಅನೇಕ ಪ್ರಶ್ನೆಗಳಿಗೆ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹೆಸರನ್ನೇ ಹಾಕಿಕೊಳ್ಳಿ ಎಂದು ರೇಗಾಡಿದ ಸೋಮಣ್ಣ , ಯಾವ್ ತಲೆ ಕೆಟ್ಟಿರೋರು ಈ ರೀತಿ ಪ್ರಶ್ನೆಗಳನ್ನೆಲ್ಲಾ ಹಾಕಿದ್ದು? ಅವರನ್ನೇ ಕರೀಬೇಕು. ಎಲ್ಲಿ ಕೆಲಸ ಮಾಡೋದು ಎಂಬ ಪ್ರಶ್ನೆಗೆ ಉತ್ತರ ಕೊಡಲು ಆಗುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದರು.

ಇದನ್ನೂ ಓದಿ:-ನಾಡಿನಿಂದ ಕಾಡಿಗೆ ಮರಳಿದ ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ ದಸರಾ ಗಜಪಡೆ

ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರಿಗೆ ಯಾವ ಗ್ರೂಪ್ ಎಂದು ಹಾಕುತ್ತೀರಿ? ಆದಾಯ ಎಷ್ಟು? ಎಂಬ ಪ್ರಶ್ನೆ ಇದೆ. ಇದಕ್ಕೆ ಆದಾಯ ಇಲಾಖೆ ಕೇಳಿದರೆ, ಉತ್ತರ ಕೊಡುತ್ತಾರೆ. ಸಿದ್ದರಾಮಯ್ಯ ಕೆಲಸಕ್ಕೆ ಬಾರದ ಕೆಲಸ ಸೃಷ್ಟಿ ಮಾಡಿದ್ದಾರೆ. ಇದು ಅವೈಜ್ಞಾನಿಕ ಸಮೀಕ್ಷೆ ಆಗಿದೆ. ಸುಮಾರು 1 ಗಂಟೆ 4 ನಿಮಿಷಗಳ ಕಾಲ ನನ್ನ ಮಾಹಿತಿ ಪಡೆದಿದ್ದಾರೆ. ತಾಂತ್ರಿಕ ಸಮಸ್ಯೆಯಿಂದ ಕೂಡಿದೆ. ಇನ್ನೊಂದು ಕಾಂತರಾಜ್ ಸಮಿತಿ ವರದಿ ಆಗುತ್ತೆ ಅಷ್ಟೇ ಎಂದು ಸಿಡಿಮಿಡಿಗೊಂಡಿದ್ದಾರೆ.

ಸಮೀಕ್ಷೆ ಸರಳೀಕರಣ ಮಾಡಿ: ಇದರಲ್ಲಿ ಸರ್ಕಾರ ಯಾವ ಸಾಧನೆಯನ್ನೂ ಮಾಡಲು ಆಗವುದಿಲ್ಲ. ಅವೈಜ್ಞಾನಿಕ ಗಣತಿಯಿಂದ ಮಾಹಿತಿ ಸಿಗಲ್ಲ. ಅಧಿಕಾರಿಗಳಿಗೆ ಸರಿಯಾದ ಮಾಹಿತಿ ಗೊತ್ತಿಲ್ಲ. ಅಧಿಕಾರಿಗಳು ಕೇಳಿದ ಸುಮಾರು ಮಾಹಿತಿ ಅನವಶ್ಯಕವಾಗಿತ್ತು. ಇದರಿಂದ ಜನರು ಗೊಂದಲಗೊಳ್ಳುತ್ತಿದ್ದಾರೆ. ಸಮೀಕ್ಷೆ ಸರಳೀಕರಣ ಮಾಡಿ ಎಂದು ಸಲಹೆ ನೀಡಿದರು.

ಇದನ್ನು ಮುಗಿಸಲು ಕನಿಷ್ಠ ಪಕ್ಷ 6 ತಿಂಗಳು ಬೇಕು. ಇದು ಕಾಂತರಾಜ್ ಸಮಿತಿಗಿಂತಲೂ ಕೆಟ್ಟದಾಗಿ ಆಗುತ್ತದೆ. ಈ ಸರ್ಕಾರಕ್ಕೆ ಜಾತಿ ಬಿಟ್ಟರೆ ಬೇರೆ ಅವಶ್ಯಕತೆ ಇಲ್ಲ. ಯಾವ ಸಮಾಜಕ್ಕೆ ಅನ್ಯಾಯ ಮಾಡಬೇಕು ಎಂಬುದು ನಿಮ ತಲೆಯಲ್ಲಿ ಇದೆ. ಸಿದ್ದರಾಮಯ್ಯರ ಬಗ್ಗೆ ಕಾಂಗ್ರೆಸ್ ಅವರೇ ಮಾತನಾಡುತ್ತಿದ್ದಾರೆ. ಇದು ನಿಮಗೆ ಇದು ಶೋಭೆ ತರಲ್ಲ. ಈ ರೀತಿಯಾಗಿ ಮಾಡಲು ಹೋದರೆ, ಒಂದು ವರ್ಷ ಬೇಕು. ಈಗಲೇ ಸಮೀಕ್ಷೆ ರದ್ದುಗೊಳಿಸಿ ಎಂದು ಸೋಮಣ್ಣ ತುಸು ಆಕ್ರೋಶದಿಂದಲೇ ಅಸಮಾಧಾನ ಹೊರಹಾಕಿದರು.

ಆಂದೋಲನ ಡೆಸ್ಕ್

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

6 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

8 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

9 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

11 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

16 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

23 hours ago