ರಾಜ್ಯ

ನನ್ನ ಒಬ್ಬನಿಗೆ ಸಮೀಕ್ಷೆ ಮಾಡಲು ಇಷ್ಟೊಂದು ಜನರು ಬೇಕಾ?: ಸಚಿವ ವಿ.ಸೋಮಣ್ಣ ಕ್ಲಾಸ್‌

ಬೆಂಗಳೂರು: ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸುತ್ತಿರುವ ಶೈಕ್ಷಣಿಕ, ಸಾಮಾಜಿಕ ಸಮೀಕ್ಷೆ ವೇಳೆ ಗಣತಿದಾರರು ನಿಮ್ಮದು ಉಪಜಾತಿ ಯಾವುದು ಎಂದು ಕೇಳಿದಾಗ, ಅದೆಲ್ಲ ಯಾಕೆ ಬೇಕು? ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿ ಎಂದು ಬರೆದುಕೊಳ್ಳಿ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದ ಪ್ರಸಂಗ ಜರುಗಿದೆ.

ಇಂದು ಗಣತಿದಾರರು ವಿಜಯನಗರದಲ್ಲಿರುವ ಸೋಮಣ್ಣ ಅವರ ನಿವಾಸಕ್ಕೆ ತೆರಳಿದ್ದರು. ಜಾತಿ ಗಣತಿ ಸಮೀಕ್ಷೆ ಕುರಿತ ಪ್ರಶ್ನೆಗಳಿಗೆ ಸರಿಯಾಗಿ ಉತ್ತರ ಕೊಡಲಿಲ್ಲ. ಅಲ್ಲದೆ, ಉಪಜಾತಿ ಯಾವುದು ಎಂದು ಕೇಳಿದಾಗ, ಅದೆಲ್ಲ ಯಾಕೆ ಬೇಕು? ಸಿದ್ದರಾಮಯ್ಯ ಜಾತಿ ಎಂದು ಬರೆದುಕೊಳ್ಳಿ ಎನ್ನುತ್ತಲೇ ಗರಂ ಆಗಿದ್ದಾರೆ.

ಮದುವೆ ಆದಾಗ ಎಷ್ಟು ವರ್ಷ ಎಂದು ಕೇಳಿದ ಪ್ರಶ್ನೆಗೂ, ಅದೆಲ್ಲಾ ಏಕೆ ಬೇಕು? ನಮ್ಮ ಅಪ್ಪ ಅಮ್ಮನ ಕೇಳಬೇಕು. ಆಗ ನನ್ನ ವಯಸ್ಸು 26 ಎಂದು ಬರೆದುಕೊಳ್ಳಿ ಇದೆಲ್ಲಾ ಮುಖ್ಯಮಂತ್ರಿ ಸಿದ್ದರಾಮಯ್ಯ ವೋಟ್‍ಗಾಗಿ ಮಾಡುತ್ತಿರುವ ನಾಟಕ ಎಂದು ಕಿಡಿಕಾರಿದರು.

ಇನ್ನು ಅನೇಕ ಪ್ರಶ್ನೆಗಳಿಗೆ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹೆಸರನ್ನೇ ಹಾಕಿಕೊಳ್ಳಿ ಎಂದು ರೇಗಾಡಿದ ಸೋಮಣ್ಣ , ಯಾವ್ ತಲೆ ಕೆಟ್ಟಿರೋರು ಈ ರೀತಿ ಪ್ರಶ್ನೆಗಳನ್ನೆಲ್ಲಾ ಹಾಕಿದ್ದು? ಅವರನ್ನೇ ಕರೀಬೇಕು. ಎಲ್ಲಿ ಕೆಲಸ ಮಾಡೋದು ಎಂಬ ಪ್ರಶ್ನೆಗೆ ಉತ್ತರ ಕೊಡಲು ಆಗುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದರು.

ಇದನ್ನೂ ಓದಿ:-ನಾಡಿನಿಂದ ಕಾಡಿಗೆ ಮರಳಿದ ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ ದಸರಾ ಗಜಪಡೆ

ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರಿಗೆ ಯಾವ ಗ್ರೂಪ್ ಎಂದು ಹಾಕುತ್ತೀರಿ? ಆದಾಯ ಎಷ್ಟು? ಎಂಬ ಪ್ರಶ್ನೆ ಇದೆ. ಇದಕ್ಕೆ ಆದಾಯ ಇಲಾಖೆ ಕೇಳಿದರೆ, ಉತ್ತರ ಕೊಡುತ್ತಾರೆ. ಸಿದ್ದರಾಮಯ್ಯ ಕೆಲಸಕ್ಕೆ ಬಾರದ ಕೆಲಸ ಸೃಷ್ಟಿ ಮಾಡಿದ್ದಾರೆ. ಇದು ಅವೈಜ್ಞಾನಿಕ ಸಮೀಕ್ಷೆ ಆಗಿದೆ. ಸುಮಾರು 1 ಗಂಟೆ 4 ನಿಮಿಷಗಳ ಕಾಲ ನನ್ನ ಮಾಹಿತಿ ಪಡೆದಿದ್ದಾರೆ. ತಾಂತ್ರಿಕ ಸಮಸ್ಯೆಯಿಂದ ಕೂಡಿದೆ. ಇನ್ನೊಂದು ಕಾಂತರಾಜ್ ಸಮಿತಿ ವರದಿ ಆಗುತ್ತೆ ಅಷ್ಟೇ ಎಂದು ಸಿಡಿಮಿಡಿಗೊಂಡಿದ್ದಾರೆ.

ಸಮೀಕ್ಷೆ ಸರಳೀಕರಣ ಮಾಡಿ: ಇದರಲ್ಲಿ ಸರ್ಕಾರ ಯಾವ ಸಾಧನೆಯನ್ನೂ ಮಾಡಲು ಆಗವುದಿಲ್ಲ. ಅವೈಜ್ಞಾನಿಕ ಗಣತಿಯಿಂದ ಮಾಹಿತಿ ಸಿಗಲ್ಲ. ಅಧಿಕಾರಿಗಳಿಗೆ ಸರಿಯಾದ ಮಾಹಿತಿ ಗೊತ್ತಿಲ್ಲ. ಅಧಿಕಾರಿಗಳು ಕೇಳಿದ ಸುಮಾರು ಮಾಹಿತಿ ಅನವಶ್ಯಕವಾಗಿತ್ತು. ಇದರಿಂದ ಜನರು ಗೊಂದಲಗೊಳ್ಳುತ್ತಿದ್ದಾರೆ. ಸಮೀಕ್ಷೆ ಸರಳೀಕರಣ ಮಾಡಿ ಎಂದು ಸಲಹೆ ನೀಡಿದರು.

ಇದನ್ನು ಮುಗಿಸಲು ಕನಿಷ್ಠ ಪಕ್ಷ 6 ತಿಂಗಳು ಬೇಕು. ಇದು ಕಾಂತರಾಜ್ ಸಮಿತಿಗಿಂತಲೂ ಕೆಟ್ಟದಾಗಿ ಆಗುತ್ತದೆ. ಈ ಸರ್ಕಾರಕ್ಕೆ ಜಾತಿ ಬಿಟ್ಟರೆ ಬೇರೆ ಅವಶ್ಯಕತೆ ಇಲ್ಲ. ಯಾವ ಸಮಾಜಕ್ಕೆ ಅನ್ಯಾಯ ಮಾಡಬೇಕು ಎಂಬುದು ನಿಮ ತಲೆಯಲ್ಲಿ ಇದೆ. ಸಿದ್ದರಾಮಯ್ಯರ ಬಗ್ಗೆ ಕಾಂಗ್ರೆಸ್ ಅವರೇ ಮಾತನಾಡುತ್ತಿದ್ದಾರೆ. ಇದು ನಿಮಗೆ ಇದು ಶೋಭೆ ತರಲ್ಲ. ಈ ರೀತಿಯಾಗಿ ಮಾಡಲು ಹೋದರೆ, ಒಂದು ವರ್ಷ ಬೇಕು. ಈಗಲೇ ಸಮೀಕ್ಷೆ ರದ್ದುಗೊಳಿಸಿ ಎಂದು ಸೋಮಣ್ಣ ತುಸು ಆಕ್ರೋಶದಿಂದಲೇ ಅಸಮಾಧಾನ ಹೊರಹಾಕಿದರು.

ಆಂದೋಲನ ಡೆಸ್ಕ್

Recent Posts

ಭಾರತದಲ್ಲಿ ಟೆಲಿಗ್ರಾಂ ನಿಷೇಧ ತೆರವು

ನವದೆಹಲಿ: ನೀಟ್‌ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್‌ ಹಾಗೂ…

45 mins ago

ಓದುಗರ ಪತ್ರ: ಫಿಜಿಯೋ ಥೆರಪಿ ಸೌಲಭ್ಯ ಕಲ್ಪಿಸಿ

ಹೆಗ್ಗಡದೇವನಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಫಿಜಿಯೋಥೆರಪಿ ಸೌಲಭ್ಯವಿಲ್ಲದೇ ತಾಲ್ಲೂಕಿನ ಗ್ರಾಮಸ್ಥರು ಫಿಜಿಯೋ ಥೆರಪಿಗಾಗಿ ಖಾಸಗಿ ಆಸ್ಪತ್ರೆಗೆ ತೆರಳುವುದು ಅನಿವಾರ್ಯವಾಗಿದೆ. ಹಣವಿದ್ದವರು ಖಾಸಗಿ…

4 hours ago

ಓದುಗರ ಪತ್ರ: ಮರಗಳ ಗಣತಿ ಸ್ವಾಗತಾರ್ಹ

ಮೈಸೂರಿನಲ್ಲಿ ಭೇರುಂಡ ಫೌಂಡೇಷನ್ ಮುಖ್ಯಸ್ಥರಾದ ರಾಜವಂಶಸ್ಥೆ ತ್ರಿಷಿಕಾ ಕುಮಾರಿ ಒಡೆಯರ್ ಅವರ ನೇತೃತ್ವದಲ್ಲಿ ‘ನಮ್ಮ ಮರಗಳ ಗಣತಿ’ ಯ ಹೆಸರಿನಲ್ಲಿ…

4 hours ago

ಓದುಗರ ಪತ್ರ: ವಿದ್ಯುತ್ ವಿತರಣೆ ಖಾಸಗೀಕರಣ ಸಲ್ಲದು

ರಾಜ್ಯದಲ್ಲಿ ವಿದ್ಯುತ್ ವಿತರಣಾ ಪರವಾನಿಗೆಗಾಗಿ ಟಾಟಾ ಪವರ್ ಕಂಪೆನಿ ಅರ್ಜಿ ಸಲ್ಲಿಸಿದ್ದು, ಇದರ ವಿರುದ್ಧ ರೈತರು ಹಾಗೂ ಸಾರ್ವಜನಿಕರು ಪ್ರತಿಭಟನೆ…

4 hours ago

ದಂಡ ರಿಯಾಯಿತಿ: ನಿಯಮ ಉಲ್ಲಂಘನೆಗೆ ಸ್ಛೂರ್ತಿ?

‘ಸಂಚಾರ ನಿಯಂತ್ರಣ ಪೊಲೀಸರ ಆದ್ಯ ಕರ್ತವ್ಯ ಆಗಲಿ’  ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಬೆಂಗಳೂರಿನ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರ…

7 hours ago

ಮಳೆ ಕ್ಷೀಣ; ಕುಸಿದ ಹಾರಂಗಿ ಒಳಹರಿವು

ಕೆ.ಬಿ.ಶಂಶುದ್ಧೀನ್ ನಿರೀಕ್ಷಿತ ಪ್ರಮಾಣದಲ್ಲಿ ಬೀಳದ ಮಳೆ; ರೈತರಲ್ಲಿ ಹೆಚ್ಚಿದ ಆತಂಕ ಕುಶಾಲನಗರ: ಮುಂಗಾರು ಮಳೆ ಕೊರತೆಯಿಂದ ಕೊಡಗು ಜಿಲ್ಲೆಯ ಹಾರಂಗಿ…

7 hours ago