ಬೆಂಗಳೂರು: ಹಾಸನ ಪೆನ್ಡ್ರೈವ್ ಪ್ರಕರಣ ಹಾಗೂ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ(ಮೇ.13) ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಗೊಂಡ ಶಾಸಕ ಎಚ್.ಡಿ ರೇವಣ್ಣ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಮಾತನಾಡಿದ್ದಾರೆ.
ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಎಚ್ಡಿ ರೇವಣ್ಣ ಅವರಿಗೆ ಜಾಮೀನು ದೊರೆತಿರುವುದರಿಂದ ನನಗೆ ಖುಷಿಯಾಗಿಲ್ಲ. ಇದು ಸಂತಸ ಪಡುವ ಸಮಯವಲ್ಲ. ನಾನು ಸಂತೋಷಪಡುತ್ತೇನೆ ಎಂದು ಭಾವಿಸಬೇಡಿ ಇದೊಂದು ರಾಜ್ಯವೇ ತಲೆ ತಗ್ಗಿಸುವ ಕೆಲಸವಾಗಿದೆ ಎಂದು ಎಚ್ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ನಾನು ರೇವಣ್ಣ ಕುಟುಂಬ ಮುಗಿಸಲು ಪ್ಲಾನ್ ಮಾಡುತ್ತಿದ್ದೇನೆ ಎಂದು ಹಲವರು ಹೇಳುತ್ತಿದ್ದಾರೆ. ನಾನು ಯಾವಾಗಲೂ ಸತ್ಯದ ಕಡೆ ಇರುತ್ತೇನೆ. ಮಹಿಳಾ ಸಂತ್ರಸ್ತೆಯರ ಪರವಾಗಿ ನಾನು ಹೋರಾಟ ಮಾಡುತ್ತೇನೆ. ಯಾವುದೇ ಮುಲಾಜಿಲ್ಲದೇ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಪೆನ್ಡ್ರೈವ್ ಪ್ರಕರಣ ದೊಡ್ಡ ಮಟ್ಟದಲ್ಲಿ ನಡೆದಿದ್ದು, ಇನ್ನೂ ಸಮಯಾವಕಾಶ ಇದೆ ನಾನು ದುಡುಕಲ್ಲ ಎಂದು ಎಚ್ಡಿಕೆ ಎಚ್ಚರಿಸಿದ್ದಾರೆ.
ಎಸ್ಐಟಿ ವರದಿ ಮಾಹಿತಿ ಸೋರಿಕೆ ಸಂಬಂಧ, ಪೆನ್ಡ್ರೈವ್ ಪ್ರಕರಣ ಸಂಬಂಧ ಕಾಂಗ್ರೆಸ್ ಸರ್ಕಾರದ ಭಾಗವಾಗಿ ದೊಡ್ಡ ತಿಮಿಂಗಲದ ಪಾತ್ರವಿದೆ. ಅದನ್ನು ಹಿಡಿದರೆ ಎಲ್ಲಾ ಪ್ರಕರಣ ಹೊರಗೆ ಬರಲಿದೆ ಎಂದು ಹೇಳಿದರು.
ಎಸ್ಐಟಿ ಅಧಿಕಾರಿಗಳ ಮೇಲೂ ಸಿಟ್ಟಾಗಿರುವ ಎಚ್ಡಿಕೆ, ನಿಮಗೂ ತಂದೆ ತಾಯಿ, ಸಹೋದರರಿದ್ದಾರೆ. ಈವರೆಗೆ ನೀವು ಪೆನ್ಡ್ರೈವ್ ಹಂಚಿದವರ ವಿರುದ್ಧ ಯಾಕೆ ಪ್ರಕರಣ ದಾಖಲಿಸಿಲ್ಲ ಎಂದು ಪ್ರಶ್ನೆ ಮಾಡಿದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…