ರಾಜ್ಯ

ಎಚ್‌ಡಿ ರೇವಣ್ಣ ಬಿಡುಗಡೆಗೆ ಸಂಭ್ರಮಿಸುವ ಅಗತ್ಯವಿಲ್ಲ: ಎಚ್‌ಡಿಕೆ

ಬೆಂಗಳೂರು: ಹಾಸನ ಪೆನ್‌ಡ್ರೈವ್‌ ಪ್ರಕರಣ ಹಾಗೂ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ(ಮೇ.13) ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಗೊಂಡ ಶಾಸಕ ಎಚ್‌.ಡಿ ರೇವಣ್ಣ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರು ಮಾತನಾಡಿದ್ದಾರೆ.

ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಎಚ್‌ಡಿ ರೇವಣ್ಣ ಅವರಿಗೆ ಜಾಮೀನು ದೊರೆತಿರುವುದರಿಂದ ನನಗೆ ಖುಷಿಯಾಗಿಲ್ಲ. ಇದು ಸಂತಸ ಪಡುವ ಸಮಯವಲ್ಲ. ನಾನು ಸಂತೋಷಪಡುತ್ತೇನೆ ಎಂದು ಭಾವಿಸಬೇಡಿ ಇದೊಂದು ರಾಜ್ಯವೇ ತಲೆ ತಗ್ಗಿಸುವ ಕೆಲಸವಾಗಿದೆ ಎಂದು ಎಚ್‌ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ನಾನು ರೇವಣ್ಣ ಕುಟುಂಬ ಮುಗಿಸಲು ಪ್ಲಾನ್‌ ಮಾಡುತ್ತಿದ್ದೇನೆ ಎಂದು ಹಲವರು ಹೇಳುತ್ತಿದ್ದಾರೆ. ನಾನು ಯಾವಾಗಲೂ ಸತ್ಯದ ಕಡೆ ಇರುತ್ತೇನೆ. ಮಹಿಳಾ ಸಂತ್ರಸ್ತೆಯರ ಪರವಾಗಿ ನಾನು ಹೋರಾಟ ಮಾಡುತ್ತೇನೆ. ಯಾವುದೇ ಮುಲಾಜಿಲ್ಲದೇ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಪೆನ್‌ಡ್ರೈವ್‌ ಪ್ರಕರಣ ದೊಡ್ಡ ಮಟ್ಟದಲ್ಲಿ ನಡೆದಿದ್ದು, ಇನ್ನೂ ಸಮಯಾವಕಾಶ ಇದೆ ನಾನು ದುಡುಕಲ್ಲ ಎಂದು ಎಚ್‌ಡಿಕೆ ಎಚ್ಚರಿಸಿದ್ದಾರೆ.

ಎಸ್‌ಐಟಿ ವರದಿ ಮಾಹಿತಿ ಸೋರಿಕೆ ಸಂಬಂಧ, ಪೆನ್‌ಡ್ರೈವ್‌ ಪ್ರಕರಣ ಸಂಬಂಧ ಕಾಂಗ್ರೆಸ್‌ ಸರ್ಕಾರದ ಭಾಗವಾಗಿ ದೊಡ್ಡ ತಿಮಿಂಗಲದ ಪಾತ್ರವಿದೆ. ಅದನ್ನು ಹಿಡಿದರೆ ಎಲ್ಲಾ ಪ್ರಕರಣ ಹೊರಗೆ ಬರಲಿದೆ ಎಂದು ಹೇಳಿದರು.

ಎಸ್‌ಐಟಿ ಅಧಿಕಾರಿಗಳ ಮೇಲೂ ಸಿಟ್ಟಾಗಿರುವ ಎಚ್‌ಡಿಕೆ, ನಿಮಗೂ ತಂದೆ ತಾಯಿ, ಸಹೋದರರಿದ್ದಾರೆ. ಈವರೆಗೆ ನೀವು ಪೆನ್‌ಡ್ರೈವ್‌ ಹಂಚಿದವರ ವಿರುದ್ಧ ಯಾಕೆ ಪ್ರಕರಣ ದಾಖಲಿಸಿಲ್ಲ ಎಂದು ಪ್ರಶ್ನೆ ಮಾಡಿದರು.

 

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

1 hour ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

1 hour ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

1 hour ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

1 hour ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

2 hours ago