ರಾಜ್ಯ

ಚನ್ನಪಟ್ಟಣದ ಜನರೇ ನನ್ನ ಮೇಲೆ ಅನುಮಾನ ಪಡಬೇಡಿ ಎಂದ ನಿಖಿಲ್‌ ಕುಮಾರಸ್ವಾಮಿ

ಚನ್ನಪಟ್ಟಣ: ಜಾತ್ಯಾತೀತ ಜನತಾ ದಳದ ಕಾರ್ಯಕರ್ತರ ಜೊತೆಗೂಡಿ ಇಡೀ ರಾಜ್ಯ ಸರ್ಕಾರವನ್ನು ಎದುರಿಸಿದ್ದೇನೆ. ಯಾರೂ ಕೂಡ ನನ್ನ ಮೇಲೆ ಅನುಮಾನ ಪಡುವ ಅಗತ್ಯವಿಲ್ಲ. ಮುಂದೆಯೂ ನಿಮ್ಮ ಜೊತೆ ಕೆಲಸ ಮಾಡುತ್ತೇನೆ ಎಂದು ನಿಖಿಲ್‌ ಕುಮಾರಸ್ವಾಮಿ ಭಾವುಕರಾಗಿದ್ದಾರೆ.

ರಾಮನಗರದಲ್ಲಿಂದು ನಡೆದ ಕೃತಜ್ಞತಾ ಸಭೆಯಲ್ಲಿ ಭಾವುಕರಾಗಿ ಮಾತನಾಡಿದ ನಿಖಿಲ್‌ ಕುಮಾರಸ್ವಾಮಿ ಅವರು, ಈ ಉಪಚಾನಾವಣೆಯಲ್ಲಿ ತಾವುಗಳು ತೋರಿಸಿದ ಪ್ರೀತಿಗೆ ನಿಮ್ಮ ಪಾದದ ಮೇಲೆ ಆಣೆ ಮಾಡಿ ನಿಮಗೆ ಧನ್ಯವಾದ ಹೇಳುತ್ತೇನೆ ಎಂದರು.

ಈ ಜಿಲ್ಲೆಯಿಂದ ಕುಮಾರಸ್ವಾಮಿಯವರು 2 ಬಾರಿ ಮುಖ್ಯಮಂತ್ರಿ ಆಗಿದ್ದಾರೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷದ ಸಂದಿಗ್ಧ ಕಾಲದಲ್ಲಿ ಮಂಡ್ಯ ಕ್ಷೇತ್ರದ ಜನತೆ ತೋರಿಸಿದ ಪ್ರೀತಿಯಿಂದ ಸಂಸದರಾಗಿ ಆಯ್ಕೆಯಾಗಿ ಕೇಂದ್ರ ಸಚಿವರು ಕೂಡ ಆಗಿದ್ದಾರೆ. ಇದಕ್ಕೆ ಮಂಡ್ಯದ ಜನರು ಹಾಗೂ ರಾಮನಗರ ಜಿಲ್ಲೆಯ ಜನರಿಗೆ ಕೃತಜ್ಞತೆ ಸಲ್ಲಿಸಬೇಕು ಎಂದರು.

ಕಳೆದ 2019ರ ಲೋಕಸಭೆ ಚುನಾವಣೆ ಕಾರಣ ಅಂಬೇಡ್ಕರ್‌ ಭವನದಲ್ಲಿ ನಡೆದಿದ್ದ ಕಾರ್ಯಕರ್ತರ, ಮುಖಂಡರ ಸಭೆಯಲ್ಲಿ ನನ್ನನ್ನು ಗೆಲ್ಲಿಸುವ ಮೂಲಕ ವಿರೋಧಿಗಳಿಗೆ ಉತ್ತರ ನೀಡಬೇಕು ಎಂದು ನಿಮ್ಮಗಳ ಅಪೇಕ್ಷೆ ಇತ್ತು. ಆದರೆ ಕೆಲವು ಕಾರಣಗಳಿಂದ ನನಗೆ ಅಲ್ಲೂ ಕೂಡ ಹಿನ್ನಡೆಯಾಯಿತು. ಇದಕ್ಕೆ ಜನಸಾಮನ್ಯರು ಕಾರಣ ಅಲ್ಲ. ಈಗ ಅದರ ಬಗ್ಗೆ ಚರ್ಚೆ ಮಾಡುವ ಅಗತ್ಯವಿಲ್ಲ ಎಂದರು.

2004ರಲ್ಲಿ ಜೆಡಿಎಸ್‌ಗೆ 58 ಸ್ಥಾನಗಳು ಬಂದಿದ್ದವು. ಆ ಸಮಯದಲ್ಲಿ ದೊಡ್ಡ ದೊಡ್ಡ ಸಮುದಾಯದ ನಾಯಕರು ಪಕ್ಷದಲ್ಲಿ ಇದ್ದರು. ಆದರೆ ಅವರು ಪಕ್ಷ ತ್ಯಜಿಸಿದ ನಂತರ ಏಕಾಂಗಿಯಾಗಿ ಸನ್ಮಾನ್ಯ ಕುಮಾರಣ್ಣನವರು ಕಳೆದ 20-25 ವರ್ಷಗಳಿಂದ ಪಕ್ಷದ ಉಸ್ತುವಾರಿ ನೋಡಿಕೊಂಡಿದ್ದಾರೆ.

ಸಮೃದ್ಧ ಕರ್ನಾಟಕವನ್ನು ಮಾಡಬೇಕು ಎಂದು ಕುಮಾರಸ್ವಾಮಿ ತಮ್ಮ ಆರೋಗ್ಯದ ಮೇಲೂ ಗಮನಕೊಡದೆ ದುಡಿಯುತ್ತಿದ್ದಾರೆ. ದೇವೇಗೌಡರ ನೀರಾವರಿ ಕೊಡುಗೆ ರಾಜ್ಯಕ್ಕೆ ತುಂಬಾ ಉಪಯೋಗವಾಗಿದೆ ಎಂದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

ಬೆಂಗಳೂರು: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಶೇ.86ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ https:karresults.nic.in ನಲ್ಲಿ…

12 mins ago

ಇಸ್ರೇಲ್‌ ದಾಳಿಗೆ ಹಿಜ್ಬುಲ್ಲಾ ಮುಖ್ಯಸ್ಥನ ಸಹಾಯಕ ಸಾವು

ಟೆಲ್‌ಅವೀವ್:‌ ಕದನ ವಿರಾಮದ ನಡುವೆಯೂ ಲೆಬನಾನ್‌ನಲ್ಲಿ ಇಸ್ರೇಲ್‌ ಏರ್‌ಸ್ಟೈಕ್‌ ನಡೆಸಿ ಹಿಜ್ಬುಲ್ಲಾ ಮುಖ್ಯಸ್ಥ ನಯಿಮ್‌ ಕಾಸೆಮ್‌ನ ಸೋದರಳಿಯ ಯೂಸುಫ್‌ ಹರ್ಷಿಯನ್ನು…

26 mins ago

ಹಾರ್ಮುಜ್‌ ಸಂಚಾರಕ್ಕೆ 2 ಹೊಸ ಮಾರ್ಗ ಪ್ರಕಟಿಸಿದ ಐಆರ್‌ಜಿಸಿ

ಟೆಹ್ರಾನ್‌ : ಅಮೆರಿಕ ಮತ್ತು ಇರಾನ್‌ ಮಧ್ಯೆ ಕದನ ವಿರಾಮ ಘೋಷಣೆಯಾದ ಬಳಿಕ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್…

35 mins ago

ಯೋಗೇಶ್‌ ಗೌಡ ಕೊಲೆ ಪ್ರಕರಣ: ಏಪ್ರಿಲ್.‌15ಕ್ಕೆ ಅಂತಿಮ ತೀರ್ಪು

ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್‌ ಸದಸ್ಯ ಯೋಗೇಶ್‌ ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಏಪ್ರಿಲ್.‌15ಕ್ಕೆ ಮುಂದೂಡಿಕೆಯಾಗಿದೆ. ಜನಪ್ರತಿನಿಧಿಗಳ ವಿಶೇಷ…

46 mins ago

ಇನ್ನೂ ಪತ್ತೆಯಾಗದ ಬಾಲಕಿ ಶ್ರೀನಂದಾ ; ಚಂದ್ರದ್ರೋಣ ಬೆಟ್ಟದಲ್ಲಿ ಮುಂದುವರೆದ ಶೋಧ ಕಾರ್ಯ

ಚಿಕ್ಕಮಗಳೂರು : ಜಿಲ್ಲೆಯ ದತ್ತಪೀಠದ ತಪ್ಪಲಿನ ಮಾಣಿಕ್ಯಾಧಾರಕ್ಕೆ ಕುಟುಂಬದ ಜೊತೆ ಬಂದಿದ್ದ 15 ವರ್ಷದ ಬಾಲಕಿ ಶ್ರೀನಂದಾ ಇದ್ದಕ್ಕಿದ್ದಂತೆ ಆ…

1 hour ago

ಉಪ ಚುನಾವಣೆ | 1ಗಂಟೆ ವೇಳೆಗೆ ಬಾಗಲಕೋಟೆ ಶೇ.43, ದಾವಣಗೆರೆ ಶೇ.28ರಷ್ಟು ಮತದಾನ

ದಾವಣಗೆರೆ : ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ಹಣಾಹಣಿಗೆ ಸಾಕ್ಷಿಯಾಗಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ…

2 hours ago