ರಾಜ್ಯ

ಚನ್ನಪಟ್ಟಣದ ಜನರೇ ನನ್ನ ಮೇಲೆ ಅನುಮಾನ ಪಡಬೇಡಿ ಎಂದ ನಿಖಿಲ್‌ ಕುಮಾರಸ್ವಾಮಿ

ಚನ್ನಪಟ್ಟಣ: ಜಾತ್ಯಾತೀತ ಜನತಾ ದಳದ ಕಾರ್ಯಕರ್ತರ ಜೊತೆಗೂಡಿ ಇಡೀ ರಾಜ್ಯ ಸರ್ಕಾರವನ್ನು ಎದುರಿಸಿದ್ದೇನೆ. ಯಾರೂ ಕೂಡ ನನ್ನ ಮೇಲೆ ಅನುಮಾನ ಪಡುವ ಅಗತ್ಯವಿಲ್ಲ. ಮುಂದೆಯೂ ನಿಮ್ಮ ಜೊತೆ ಕೆಲಸ ಮಾಡುತ್ತೇನೆ ಎಂದು ನಿಖಿಲ್‌ ಕುಮಾರಸ್ವಾಮಿ ಭಾವುಕರಾಗಿದ್ದಾರೆ.

ರಾಮನಗರದಲ್ಲಿಂದು ನಡೆದ ಕೃತಜ್ಞತಾ ಸಭೆಯಲ್ಲಿ ಭಾವುಕರಾಗಿ ಮಾತನಾಡಿದ ನಿಖಿಲ್‌ ಕುಮಾರಸ್ವಾಮಿ ಅವರು, ಈ ಉಪಚಾನಾವಣೆಯಲ್ಲಿ ತಾವುಗಳು ತೋರಿಸಿದ ಪ್ರೀತಿಗೆ ನಿಮ್ಮ ಪಾದದ ಮೇಲೆ ಆಣೆ ಮಾಡಿ ನಿಮಗೆ ಧನ್ಯವಾದ ಹೇಳುತ್ತೇನೆ ಎಂದರು.

ಈ ಜಿಲ್ಲೆಯಿಂದ ಕುಮಾರಸ್ವಾಮಿಯವರು 2 ಬಾರಿ ಮುಖ್ಯಮಂತ್ರಿ ಆಗಿದ್ದಾರೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷದ ಸಂದಿಗ್ಧ ಕಾಲದಲ್ಲಿ ಮಂಡ್ಯ ಕ್ಷೇತ್ರದ ಜನತೆ ತೋರಿಸಿದ ಪ್ರೀತಿಯಿಂದ ಸಂಸದರಾಗಿ ಆಯ್ಕೆಯಾಗಿ ಕೇಂದ್ರ ಸಚಿವರು ಕೂಡ ಆಗಿದ್ದಾರೆ. ಇದಕ್ಕೆ ಮಂಡ್ಯದ ಜನರು ಹಾಗೂ ರಾಮನಗರ ಜಿಲ್ಲೆಯ ಜನರಿಗೆ ಕೃತಜ್ಞತೆ ಸಲ್ಲಿಸಬೇಕು ಎಂದರು.

ಕಳೆದ 2019ರ ಲೋಕಸಭೆ ಚುನಾವಣೆ ಕಾರಣ ಅಂಬೇಡ್ಕರ್‌ ಭವನದಲ್ಲಿ ನಡೆದಿದ್ದ ಕಾರ್ಯಕರ್ತರ, ಮುಖಂಡರ ಸಭೆಯಲ್ಲಿ ನನ್ನನ್ನು ಗೆಲ್ಲಿಸುವ ಮೂಲಕ ವಿರೋಧಿಗಳಿಗೆ ಉತ್ತರ ನೀಡಬೇಕು ಎಂದು ನಿಮ್ಮಗಳ ಅಪೇಕ್ಷೆ ಇತ್ತು. ಆದರೆ ಕೆಲವು ಕಾರಣಗಳಿಂದ ನನಗೆ ಅಲ್ಲೂ ಕೂಡ ಹಿನ್ನಡೆಯಾಯಿತು. ಇದಕ್ಕೆ ಜನಸಾಮನ್ಯರು ಕಾರಣ ಅಲ್ಲ. ಈಗ ಅದರ ಬಗ್ಗೆ ಚರ್ಚೆ ಮಾಡುವ ಅಗತ್ಯವಿಲ್ಲ ಎಂದರು.

2004ರಲ್ಲಿ ಜೆಡಿಎಸ್‌ಗೆ 58 ಸ್ಥಾನಗಳು ಬಂದಿದ್ದವು. ಆ ಸಮಯದಲ್ಲಿ ದೊಡ್ಡ ದೊಡ್ಡ ಸಮುದಾಯದ ನಾಯಕರು ಪಕ್ಷದಲ್ಲಿ ಇದ್ದರು. ಆದರೆ ಅವರು ಪಕ್ಷ ತ್ಯಜಿಸಿದ ನಂತರ ಏಕಾಂಗಿಯಾಗಿ ಸನ್ಮಾನ್ಯ ಕುಮಾರಣ್ಣನವರು ಕಳೆದ 20-25 ವರ್ಷಗಳಿಂದ ಪಕ್ಷದ ಉಸ್ತುವಾರಿ ನೋಡಿಕೊಂಡಿದ್ದಾರೆ.

ಸಮೃದ್ಧ ಕರ್ನಾಟಕವನ್ನು ಮಾಡಬೇಕು ಎಂದು ಕುಮಾರಸ್ವಾಮಿ ತಮ್ಮ ಆರೋಗ್ಯದ ಮೇಲೂ ಗಮನಕೊಡದೆ ದುಡಿಯುತ್ತಿದ್ದಾರೆ. ದೇವೇಗೌಡರ ನೀರಾವರಿ ಕೊಡುಗೆ ರಾಜ್ಯಕ್ಕೆ ತುಂಬಾ ಉಪಯೋಗವಾಗಿದೆ ಎಂದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮೈಸೂರು ಸ್ಯಾಂಡಲ್‌ ಸೋಪ್‌ಗೆ ತಮನ್ನಾ ರಾಯಭಾರಿ ; ವಿಪಕ್ಷಗಳ ವಿರೋಧ

ಬೆಂಗಳೂರು : ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್‌ಡಿಎಲ್) ನ ಐತಿಹಾಸಿಕ ಬ್ರ್ಯಾಂಡ್ ಮೈಸೂರು ಸ್ಯಾಂಡಲ್ ಸೋಪ್‌ಗೆ ನಟಿ…

3 hours ago

ಮೈಸೂರಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ

ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್ ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು ಈಗ ಅತ್ಯಂತ ವೇಗವಾಗಿ ಬೆಳೆಯುತ್ತಿರುವ…

3 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಕ್ಕೆ ಅನುಮತಿ ಸುಳಿವು

ಕುನ್ಹಾ ಆಯೋಗದ ವರದಿ ಆಧರಿಸಿ ಕ್ರಮ : ಪರಮೇಶ್ವರ್ ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗಳನ್ನು ನಡೆಸಲು…

3 hours ago

ಬಜೆಟ್‌ ದಿನಾಂಕ ಸದ್ಯದಲ್ಲೇ ನಿಗದಿ : ಸಿಎಂ

ಬೆಂಗಳೂರು : ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯದ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬುಧವಾರ…

4 hours ago

T20 World Cup : ಡಬಲ್‌ ಸೂಪರ್‌ ಓವರ್‌ : 2 ಬಾರಿ ಟೈ ಆದ ಪಂದ್ಯದಲ್ಲಿ ಹರಿಣಗಳ ಮೇಲುಗೈ

ಅಹಮದಾಬಾದ್ : ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು…

4 hours ago

ಮುಂದುವರೆದ ಡ್ರಗ್ಸ್‌ ಸಮರ : ಮಾದಕ ವಸ್ತು ವಶಕ್ಕೆ ; ಐವರ ಬಂಧನ

ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…

5 hours ago