ರಾಜ್ಯ

ಚನ್ನಪಟ್ಟಣದ ಜನರೇ ನನ್ನ ಮೇಲೆ ಅನುಮಾನ ಪಡಬೇಡಿ ಎಂದ ನಿಖಿಲ್‌ ಕುಮಾರಸ್ವಾಮಿ

ಚನ್ನಪಟ್ಟಣ: ಜಾತ್ಯಾತೀತ ಜನತಾ ದಳದ ಕಾರ್ಯಕರ್ತರ ಜೊತೆಗೂಡಿ ಇಡೀ ರಾಜ್ಯ ಸರ್ಕಾರವನ್ನು ಎದುರಿಸಿದ್ದೇನೆ. ಯಾರೂ ಕೂಡ ನನ್ನ ಮೇಲೆ ಅನುಮಾನ ಪಡುವ ಅಗತ್ಯವಿಲ್ಲ. ಮುಂದೆಯೂ ನಿಮ್ಮ ಜೊತೆ ಕೆಲಸ ಮಾಡುತ್ತೇನೆ ಎಂದು ನಿಖಿಲ್‌ ಕುಮಾರಸ್ವಾಮಿ ಭಾವುಕರಾಗಿದ್ದಾರೆ.

ರಾಮನಗರದಲ್ಲಿಂದು ನಡೆದ ಕೃತಜ್ಞತಾ ಸಭೆಯಲ್ಲಿ ಭಾವುಕರಾಗಿ ಮಾತನಾಡಿದ ನಿಖಿಲ್‌ ಕುಮಾರಸ್ವಾಮಿ ಅವರು, ಈ ಉಪಚಾನಾವಣೆಯಲ್ಲಿ ತಾವುಗಳು ತೋರಿಸಿದ ಪ್ರೀತಿಗೆ ನಿಮ್ಮ ಪಾದದ ಮೇಲೆ ಆಣೆ ಮಾಡಿ ನಿಮಗೆ ಧನ್ಯವಾದ ಹೇಳುತ್ತೇನೆ ಎಂದರು.

ಈ ಜಿಲ್ಲೆಯಿಂದ ಕುಮಾರಸ್ವಾಮಿಯವರು 2 ಬಾರಿ ಮುಖ್ಯಮಂತ್ರಿ ಆಗಿದ್ದಾರೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷದ ಸಂದಿಗ್ಧ ಕಾಲದಲ್ಲಿ ಮಂಡ್ಯ ಕ್ಷೇತ್ರದ ಜನತೆ ತೋರಿಸಿದ ಪ್ರೀತಿಯಿಂದ ಸಂಸದರಾಗಿ ಆಯ್ಕೆಯಾಗಿ ಕೇಂದ್ರ ಸಚಿವರು ಕೂಡ ಆಗಿದ್ದಾರೆ. ಇದಕ್ಕೆ ಮಂಡ್ಯದ ಜನರು ಹಾಗೂ ರಾಮನಗರ ಜಿಲ್ಲೆಯ ಜನರಿಗೆ ಕೃತಜ್ಞತೆ ಸಲ್ಲಿಸಬೇಕು ಎಂದರು.

ಕಳೆದ 2019ರ ಲೋಕಸಭೆ ಚುನಾವಣೆ ಕಾರಣ ಅಂಬೇಡ್ಕರ್‌ ಭವನದಲ್ಲಿ ನಡೆದಿದ್ದ ಕಾರ್ಯಕರ್ತರ, ಮುಖಂಡರ ಸಭೆಯಲ್ಲಿ ನನ್ನನ್ನು ಗೆಲ್ಲಿಸುವ ಮೂಲಕ ವಿರೋಧಿಗಳಿಗೆ ಉತ್ತರ ನೀಡಬೇಕು ಎಂದು ನಿಮ್ಮಗಳ ಅಪೇಕ್ಷೆ ಇತ್ತು. ಆದರೆ ಕೆಲವು ಕಾರಣಗಳಿಂದ ನನಗೆ ಅಲ್ಲೂ ಕೂಡ ಹಿನ್ನಡೆಯಾಯಿತು. ಇದಕ್ಕೆ ಜನಸಾಮನ್ಯರು ಕಾರಣ ಅಲ್ಲ. ಈಗ ಅದರ ಬಗ್ಗೆ ಚರ್ಚೆ ಮಾಡುವ ಅಗತ್ಯವಿಲ್ಲ ಎಂದರು.

2004ರಲ್ಲಿ ಜೆಡಿಎಸ್‌ಗೆ 58 ಸ್ಥಾನಗಳು ಬಂದಿದ್ದವು. ಆ ಸಮಯದಲ್ಲಿ ದೊಡ್ಡ ದೊಡ್ಡ ಸಮುದಾಯದ ನಾಯಕರು ಪಕ್ಷದಲ್ಲಿ ಇದ್ದರು. ಆದರೆ ಅವರು ಪಕ್ಷ ತ್ಯಜಿಸಿದ ನಂತರ ಏಕಾಂಗಿಯಾಗಿ ಸನ್ಮಾನ್ಯ ಕುಮಾರಣ್ಣನವರು ಕಳೆದ 20-25 ವರ್ಷಗಳಿಂದ ಪಕ್ಷದ ಉಸ್ತುವಾರಿ ನೋಡಿಕೊಂಡಿದ್ದಾರೆ.

ಸಮೃದ್ಧ ಕರ್ನಾಟಕವನ್ನು ಮಾಡಬೇಕು ಎಂದು ಕುಮಾರಸ್ವಾಮಿ ತಮ್ಮ ಆರೋಗ್ಯದ ಮೇಲೂ ಗಮನಕೊಡದೆ ದುಡಿಯುತ್ತಿದ್ದಾರೆ. ದೇವೇಗೌಡರ ನೀರಾವರಿ ಕೊಡುಗೆ ರಾಜ್ಯಕ್ಕೆ ತುಂಬಾ ಉಪಯೋಗವಾಗಿದೆ ಎಂದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

2 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

2 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

4 hours ago

ಅಧಿಕಾರಿಗಳಿಗೆ ಚೆಲ್ಲಾಟ; ಅಲೆಮಾರಿಗಳ ಅಲೆದಾಟ

ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…

4 hours ago

ಬಿಜೆಪಿ-ಜಾ.ದಳ ಮನಸ್ತಾಪ; ಸಿಎಂ ಡಿಕೆಶಿ ‘ಭವಿಷ್ಯ’ಕ್ಕೆ  ವರ?

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…

8 hours ago

ಎಚ್.ಡಿ.ಕೋಟೆ ಗಡಿಯಲ್ಲಿ ಸೇತುವೆ ನಿರ್ಮಾಣಕ್ಕೆ ಎನ್‌ಒಸಿ!

ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…

8 hours ago