ಬೆಂಗಳೂರು: ವಿಕಲಚೇತನರ ಮಾಸಿಕ ಪಿಂಚಣಿ ಹೆಚ್ಚಳ ಮಾಡುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ವಿಧಾನಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಸಚಿವ ಕೃಷ್ಣಭೈರೇಗೌಡ ಅವರು, ಮಾಸಿಕ ಪಿಂಚಣಿ ಹೆಚ್ಚಳ ಮಾಡಲು ಸಾಧ್ಯವಿಲ್ಲ. ಸಾಮಾಜಿಕ ಭದ್ರತೆ ಯೋಜನೆಯಡಿ ರಾಜ್ಯದಲ್ಲಿ 78 ಲಕ್ಷ ಫಲಾನುಭವಿಗಳಿಗೆ ಪಿಂಚಣಿ ನೀಡಲಾಗುತ್ತಿದೆ. 10,500 ಕೋಟಿ ರೂ ವಾರ್ಷಿಕ ಹಣ ಇದಕ್ಕೆ ಖರ್ಚಾಗುತ್ತಿದೆ. ಕಾಲ ಕಾಲಕ್ಕೆ ಸಾಮಾಜಿಕ ಭದ್ರತಾ ವೇತನ ಪರಿಷ್ಕರಣೆ ಮಾಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದರು.
ಕೇಂದ್ರ ಸರ್ಕಾರ ಸಾಮಾಜಿಕ ಭದ್ರತಾ ಯೋಜನೆ ಹೆಚ್ಚಳ ಮಾಡಿಲ್ಲ. ಕೇವಲ 13 ಲಕ್ಷ ಫಲಾನುಭವಿಗಳಿಗೆ ಮಾತ್ರ ಹಣ ಕೊಡುತ್ತಿದೆ. ಉಳಿದ ಎಲ್ಲಾ ಫಲಾನುಭವಿಗಳಿಗೆ ರಾಜ್ಯ ಸರ್ಕಾರವೇ ಹಣ ಕೊಡುತ್ತಿದೆ. ಹಾಗಾಗಿ ಕೇಂದ್ರ ಸರ್ಕಾರ ಹಣ ಹೆಚ್ಚಳ ಮಾಡಿದರೆ ನಾವು ಹೆಚ್ಚಳ ಮಾಡುವ ಪರಿಶೀಲನೆ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…