ಬೆಂಗಳೂರು: ವಿಕಲಚೇತನರ ಮಾಸಿಕ ಪಿಂಚಣಿ ಹೆಚ್ಚಳ ಮಾಡುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ವಿಧಾನಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಸಚಿವ ಕೃಷ್ಣಭೈರೇಗೌಡ ಅವರು, ಮಾಸಿಕ ಪಿಂಚಣಿ ಹೆಚ್ಚಳ ಮಾಡಲು ಸಾಧ್ಯವಿಲ್ಲ. ಸಾಮಾಜಿಕ ಭದ್ರತೆ ಯೋಜನೆಯಡಿ ರಾಜ್ಯದಲ್ಲಿ 78 ಲಕ್ಷ ಫಲಾನುಭವಿಗಳಿಗೆ ಪಿಂಚಣಿ ನೀಡಲಾಗುತ್ತಿದೆ. 10,500 ಕೋಟಿ ರೂ ವಾರ್ಷಿಕ ಹಣ ಇದಕ್ಕೆ ಖರ್ಚಾಗುತ್ತಿದೆ. ಕಾಲ ಕಾಲಕ್ಕೆ ಸಾಮಾಜಿಕ ಭದ್ರತಾ ವೇತನ ಪರಿಷ್ಕರಣೆ ಮಾಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದರು.
ಕೇಂದ್ರ ಸರ್ಕಾರ ಸಾಮಾಜಿಕ ಭದ್ರತಾ ಯೋಜನೆ ಹೆಚ್ಚಳ ಮಾಡಿಲ್ಲ. ಕೇವಲ 13 ಲಕ್ಷ ಫಲಾನುಭವಿಗಳಿಗೆ ಮಾತ್ರ ಹಣ ಕೊಡುತ್ತಿದೆ. ಉಳಿದ ಎಲ್ಲಾ ಫಲಾನುಭವಿಗಳಿಗೆ ರಾಜ್ಯ ಸರ್ಕಾರವೇ ಹಣ ಕೊಡುತ್ತಿದೆ. ಹಾಗಾಗಿ ಕೇಂದ್ರ ಸರ್ಕಾರ ಹಣ ಹೆಚ್ಚಳ ಮಾಡಿದರೆ ನಾವು ಹೆಚ್ಚಳ ಮಾಡುವ ಪರಿಶೀಲನೆ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.
ಮೈಸೂರು : ಕೆಎಸ್ಆರ್ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…
ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…
ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…
ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…
ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…
ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…