ರಾಜ್ಯ

ಧರ್ಮಸ್ಥಳದ ಮಂಜುನಾಥ ಸ್ವಾಮಿಯ ದೇವಾಲಯದ ಬಗ್ಗೆ ಅಪಪ್ರಚಾರ ಮಾಡಬೇಡಿ : ಆರ್‌.ಅಶೋಕ

ಬೆಂಗಳೂರು : ಧರ್ಮಸ್ಥಳದ ಬಳಿ ಸಾವಿರಾರು ಶವಗಳು ಸಿಕ್ಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಎಸ್‌ಐಟಿ ರಚಿಸಿರುವುದು ಸ್ವಾಗತಾರ್ಹ. ಆದರೆ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ದೇವಾಲಯದ ಬಗ್ಗೆ ಅಪಪ್ರಚಾರ ಮಾಡುವುದು ತಪ್ಪು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧರ್ಮಸ್ಥಳ ಭಾಗದಲ್ಲಿ ಸಾವಿರಾರು ಶವಗಳನ್ನು ಹೂತು ಹಾಕಿದ್ದೇನೆ ಎಂದು ಅನಾಮಧೇಯ ವ್ಯಕ್ತಿ ಹೇಳಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದೆ. ಈ ಪ್ರಕರಣಗಳಲ್ಲಿ ನಿಷ್ಪಕ್ಷಪಾತವಾದ ತನಿಖೆಯಾಗಲಿ ಎಂದು ಆಗ್ರಹಿಸುತ್ತೇನೆ. ಯಾರನ್ನೂ ಸಿಕ್ಕಿಹಾಕಿಸುವ ಉದ್ದೇಶದಿಂದ ತನಿಖೆ ನಡೆಯಬಾರದು ಎಂದರು.

ದಕ್ಷಿಣ ಭಾರತದಲ್ಲಿ ತಿರುಪತಿ ಹಾಗೂ ಧರ್ಮಸ್ಥಳ ಕೋಟ್ಯಂತರ ಹಿಂದೂಗಳ ಶ್ರದ್ಧಾಕೇಂದ್ರವಾಗಿದೆ. ಧರ್ಮಸ್ಥಳದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಯುವಕನೊಬ್ಬ ವೀಡಿಯೋಗಳನ್ನು ಅಪ್‌ಲೋಡ್‌ ಮಾಡುತ್ತಿದ್ದಾನೆ. ಈ ನಡುವೆ ಕೇರಳ ಸರ್ಕಾರ ಮಧ್ಯಪ್ರವೇಶ ಮಾಡಿದೆ. ಕೇರಳ ಸರ್ಕಾರ ಅಲ್ಲಿನ ದೇವಸ್ಥಾನಗಳ ವಿಚಾರದಲ್ಲಿ ಹೇಗೆ ನಡೆದುಕೊಳ್ಳುತ್ತಿದೆ, ಶಬರಿಮಲೆ ಅಯ್ಯಪ್ಪ ದೇವಾಲಯದ ವಿಚಾರದಲ್ಲಿ ಹೇಗೆ ನಡೆದುಕೊಂಡಿದೆ ಎಂಬುದು ಜಗಜ್ಜಾಹೀರಾಗಿದೆ. ಯಾವುದೇ ಕೊಲೆಯಾಗಿದ್ದರೆ ಸ್ಥಳೀಯ ಪೊಲೀಸ್‌ ಠಾಣೆ ತನಿಖೆ ಮಾಡುತ್ತದೆ ಎಂದರು.

ಸಾವಿರಾರು ಶವಗಳು ಸಿಕ್ಕಿದೆ ಎಂದರೆ, ಅವರ ಕುಟುಂಬದವರು ದೂರು ದಾಖಲಿಸುತ್ತಾರೆ. ಅಂತಹ ಪ್ರಕರಣ ಎಷ್ಟಿದೆ ಎಂದು ಸರ್ಕಾರ ತಿಳಿಸಬೇಕು. ದೇವಾಲಯ ಮಾತ್ರವಲ್ಲದೆ, ಚರ್ಚ್‌, ಮಸೀದಿ ಮೊದಲಾದ ಧಾರ್ಮಿಕ ಕೇಂದ್ರಗಳ ಬಳಿ ಅನೇಕರು ಸಾಯುತ್ತಾರೆ. ಇಂತಹ ಸಂದರ್ಭಗಳಲ್ಲಿ ಪೊಲೀಸರು ತನಿಖೆ ಮಾಡುತ್ತಾರೆ. ಯಾರೋ ಒಬ್ಬರಿಗೆ 20 ವರ್ಷಗಳ ಬಳಿಕ ಜ್ಞಾನೋದಯವಾಗಿದ್ದು ಹೇಗೆ ಎಂಬ ಪ್ರಶ್ನೆ ಮೂಡುತ್ತದೆ. ಒಂದು ಧರ್ಮಕ್ಕೆ ಅಪಮಾನ ಮಾಡಲು ವಿವಾದ ಮಾಡುವುದು ಸರಿಯಲ್ಲ. ಇದರಲ್ಲಿ ಧರ್ಮಸ್ಥಳದ ಶ್ರೀ ಮಂಜುನಾಥಸ್ವಾಮಿಯ ವಿಚಾರವೇ ಬರುವುದಿಲ್ಲ. ಆದರೂ ಪದೇ ಪದೆ ಧಾರ್ಮಿಕ ಕೇಂದ್ರದ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ ಎಂದರು.

ಯಾವುದೇ ವ್ಯಕ್ತಿ ತಪ್ಪು ಮಾಡಿದರೆ, ಆ ವ್ಯಕ್ತಿಯ ಬಗ್ಗೆ ಆರೋಪ ಮಾಡಲಿ. ಆದರೆ ಇಡೀ ಧಾರ್ಮಿಕ ಸಂಸ್ಥೆಯನ್ನು ಗುರಿ ಮಾಡಿ ಮಾತಾಡುವುದು ಸರಿಯಲ್ಲ. ಎಸ್‌ಐಟಿ ತಂಡಕ್ಕೆ ಸರ್ಕಾರ ಬೇರಾವುದೇ ಜವಾಬ್ದಾರಿ ವಹಿಸಬಾರದು. ಈ ತಂಡದ ಪೊಲೀಸರು ಸಂಪೂರ್ಣವಾಗಿ ತನಿಖೆ ಮಾಡಿ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸಲಿ ಎಂದರು.

ಇದು ವ್ಯಕ್ತಿಗಳಿಗೆ ಸಂಬಂಧಿಸಿದ ವಿಚಾರವೇ ಹೊರತು, ಧರ್ಮಸ್ಥಳದ ಶ್ರೀ ಮಂಜುನಾಥ ದೇವಾಲಯಕ್ಕೆ ಸಂಬಂಧಿಸಿದ ವಿಷಯವಲ್ಲ. ಯಾರೂ ಧರ್ಮಸ್ಥಳದ ದೇವಾಲಯವನ್ನು ಗುರಿ ಮಾಡಬಾರದು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಮಗಿಂತಲೂ ಹೆಚ್ಚಿನ ದೈವಭಕ್ತರು. ಅವರು ದೇವರ ಇಚ್ಛೆಯಂತೆಯೇ ನಡೆದುಕೊಳ್ಳಲಿ. ಧರ್ಮಸ್ಥಳದ ದೇವಾಲಯದ ಬಗ್ಗೆ ಮನಸ್ಸಿಗೆ ಬಂದಂತೆ ಮಾತಾಡುವುದು ತಪ್ಪು. ಇಂತಹ ಮಾತುಗಳು ಯಾವುದೇ ಸಚಿವರಿಗೆ ಶೋಭೆ ತರುವುದಿಲ್ಲ ಎಂದರು.

ಅಭಿವೃದ್ಧಿ ಇಲ್ಲದೆ ಗ್ರೇಟರ್‌ ಬೆಂಗಳೂರು ಪ್ರಸ್ತಾಪ

ಗ್ರೇಟರ್‌ ಬೆಂಗಳೂರು ವಿಷಯಕ್ಕೆ ಸಂಬಂಧಿಸಿದಂತೆ ಉತ್ತರ ನೀಡುವಂತೆ ಸರ್ಕಾರಕ್ಕೆ ಕೋರ್ಟ್‌ ಸೂಚನೆ ನೀಡಿದೆ. ಇದನ್ನೇ ಮುಂದಿಟ್ಟುಕೊಂಡು ಅಭಿವೃದ್ಧಿ ಕೆಲಸ ಮಾಡುತ್ತಿಲ್ಲ. ಕಸದ ರಾಶಿ ಎಲ್ಲ ಕಡೆ ಇದೆ. ಆಸ್ಪತ್ರೆಗಳಲ್ಲಿ ಸಂಬಳ ಪಾವತಿಯಾಗಿಲ್ಲ. ಶಾಲೆಗಳ ಶಿಕ್ಷಕರನ್ನು ವಜಾ ಮಾಡಲಾಗುತ್ತಿದೆ. ಬೆಂಗಳೂರಿನ ಅಭಿವೃದ್ಧಿ ಮಾಡಲಾಗದೆ ಐದು ಪಾಲಿಕೆ ಮಾಡುವ ವಿಷಯವನ್ನು ಮುನ್ನೆಲೆಗೆ ತರಲಾಗಿದೆ. ಎಲ್ಲದಕ್ಕೂ ಜನರ ಮೇಲೆ ತೆರಿಗೆ ಹೇರಲಾಗಿದೆ. ಇ ಖಾತಾದಿಂದಾಗಿ ಎಲ್ಲೂ ನೋಂದಣಿ ಮಾಡಲು ಆಗುತ್ತಿಲ್ಲ. ಕಾಂಗ್ರೆಸ್‌ ವಾಮಮಾರ್ಗದಲ್ಲಿ ಗೆಲ್ಲಲು ಈ ರೀತಿ ಪಾಲಿಕೆಗಳನ್ನು ರಚಿಸುತ್ತಿದೆ. ಬೆಂಗಳೂರನ್ನು ಹೋಳು ಮಾಡುವುದನ್ನು ಬಿಜೆಪಿ ಯಾವಾಗಲೂ ವಿರೋಧ ಮಾಡಲಿದೆ. ವಿಧಾನಸಭೆ ಅಧಿವೇಶನದಲ್ಲೂ ಇದನ್ನು ವಿರೋಧಿಸಲಾಗುವುದು ಎಂದು ತಿಳಿಸಿದರು.

ಮುಡಾ ಹಗರಣದ ವಿರುದ್ಧದ ಬಿಜೆಪಿಯ ಹೋರಾಟದ ಫಲವಾಗಿ ಸಿಎಂ ಸಿದ್ದರಾಮಯ್ಯ ನಿವೇಶನಗಳನ್ನು ವಾಪಸ್‌ ಮಾಡಿದ್ದಾರೆ. ತಪ್ಪಾಗಿದೆ ಎಂಬ ಕಾರಣಕ್ಕೆ ಈ ರೀತಿ ಮಾಡಿದ್ದಾರೆ. ಮುಡಾ ಹಗರಣದ ವಿರುದ್ಧದ ಹೋರಾಟ ನಿಲ್ಲಿಸುವುದಿಲ್ಲ ಎಂದರು.

ಆಂದೋಲನ ಡೆಸ್ಕ್

Recent Posts

ಉಡುಪಿ ಮಲ್ಪೆ ಬಳಿ ದೋಣಿ ಪಲ್ಟಿ: ಮೈಸೂರಿನ ಇಬ್ಬರು ಸಾವು

ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್‌ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…

41 mins ago

ಜೆಡಿಎಸ್‌ ಬಿಟ್ಟಿದ್ದು ದ್ರೋಹ ಹೇಗಾಗುತ್ತೆ: ಶಾಸಕ ಶಿವಲಿಂಗೇಗೌಡ

ಹಾಸನ: ನಾನು ಜೆಡಿಎಸ್‌ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್‌ ಜಾಸ್ತಿ ಆಗೋದು ಅಷ್ಟೇ. ಏನು…

1 hour ago

ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲರಿಗೆ ಅಡ್ಡಿಪಡಿಸಿದ ವಿಚಾರ: ರಾಷ್ಟ್ರಪತಿಗೆ ವರದಿ ರವಾನಿಸಿದ ಲೋಕಭವನ

ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಕಾಂಗ್ರೆಸ್‌ ಸದಸ್ಯರು…

1 hour ago

ಮಳವಳ್ಳಿ: ಈಜಲು ಹೋಗಿದ್ದ ಯುವಕ ಸಾವು

ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…

1 hour ago

ಮಂಡ್ಯದಲ್ಲಿ 3 ಕೋಟಿ ವೆಚ್ಚದಲ್ಲಿ ಗಾಂಧಿಭವನ ನಿರ್ಮಾಣ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…

1 hour ago

ಗ್ರಾಮ ಪಂಚಾಯತ್‌ಗಳ 590 ಸಿಬ್ಬಂದಿಗಳಿಗೆ ಅನುಮೋದನೆ: ಆದೇಶ ಪ್ರತಿ ವಿತರಿಸಿದ ಸಚಿವ ಎನ್‌.ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…

2 hours ago