ರಾಜ್ಯ

ಧರ್ಮಸ್ಥಳದ ಮಂಜುನಾಥ ಸ್ವಾಮಿಯ ದೇವಾಲಯದ ಬಗ್ಗೆ ಅಪಪ್ರಚಾರ ಮಾಡಬೇಡಿ : ಆರ್‌.ಅಶೋಕ

ಬೆಂಗಳೂರು : ಧರ್ಮಸ್ಥಳದ ಬಳಿ ಸಾವಿರಾರು ಶವಗಳು ಸಿಕ್ಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಎಸ್‌ಐಟಿ ರಚಿಸಿರುವುದು ಸ್ವಾಗತಾರ್ಹ. ಆದರೆ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ದೇವಾಲಯದ ಬಗ್ಗೆ ಅಪಪ್ರಚಾರ ಮಾಡುವುದು ತಪ್ಪು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧರ್ಮಸ್ಥಳ ಭಾಗದಲ್ಲಿ ಸಾವಿರಾರು ಶವಗಳನ್ನು ಹೂತು ಹಾಕಿದ್ದೇನೆ ಎಂದು ಅನಾಮಧೇಯ ವ್ಯಕ್ತಿ ಹೇಳಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದೆ. ಈ ಪ್ರಕರಣಗಳಲ್ಲಿ ನಿಷ್ಪಕ್ಷಪಾತವಾದ ತನಿಖೆಯಾಗಲಿ ಎಂದು ಆಗ್ರಹಿಸುತ್ತೇನೆ. ಯಾರನ್ನೂ ಸಿಕ್ಕಿಹಾಕಿಸುವ ಉದ್ದೇಶದಿಂದ ತನಿಖೆ ನಡೆಯಬಾರದು ಎಂದರು.

ದಕ್ಷಿಣ ಭಾರತದಲ್ಲಿ ತಿರುಪತಿ ಹಾಗೂ ಧರ್ಮಸ್ಥಳ ಕೋಟ್ಯಂತರ ಹಿಂದೂಗಳ ಶ್ರದ್ಧಾಕೇಂದ್ರವಾಗಿದೆ. ಧರ್ಮಸ್ಥಳದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಯುವಕನೊಬ್ಬ ವೀಡಿಯೋಗಳನ್ನು ಅಪ್‌ಲೋಡ್‌ ಮಾಡುತ್ತಿದ್ದಾನೆ. ಈ ನಡುವೆ ಕೇರಳ ಸರ್ಕಾರ ಮಧ್ಯಪ್ರವೇಶ ಮಾಡಿದೆ. ಕೇರಳ ಸರ್ಕಾರ ಅಲ್ಲಿನ ದೇವಸ್ಥಾನಗಳ ವಿಚಾರದಲ್ಲಿ ಹೇಗೆ ನಡೆದುಕೊಳ್ಳುತ್ತಿದೆ, ಶಬರಿಮಲೆ ಅಯ್ಯಪ್ಪ ದೇವಾಲಯದ ವಿಚಾರದಲ್ಲಿ ಹೇಗೆ ನಡೆದುಕೊಂಡಿದೆ ಎಂಬುದು ಜಗಜ್ಜಾಹೀರಾಗಿದೆ. ಯಾವುದೇ ಕೊಲೆಯಾಗಿದ್ದರೆ ಸ್ಥಳೀಯ ಪೊಲೀಸ್‌ ಠಾಣೆ ತನಿಖೆ ಮಾಡುತ್ತದೆ ಎಂದರು.

ಸಾವಿರಾರು ಶವಗಳು ಸಿಕ್ಕಿದೆ ಎಂದರೆ, ಅವರ ಕುಟುಂಬದವರು ದೂರು ದಾಖಲಿಸುತ್ತಾರೆ. ಅಂತಹ ಪ್ರಕರಣ ಎಷ್ಟಿದೆ ಎಂದು ಸರ್ಕಾರ ತಿಳಿಸಬೇಕು. ದೇವಾಲಯ ಮಾತ್ರವಲ್ಲದೆ, ಚರ್ಚ್‌, ಮಸೀದಿ ಮೊದಲಾದ ಧಾರ್ಮಿಕ ಕೇಂದ್ರಗಳ ಬಳಿ ಅನೇಕರು ಸಾಯುತ್ತಾರೆ. ಇಂತಹ ಸಂದರ್ಭಗಳಲ್ಲಿ ಪೊಲೀಸರು ತನಿಖೆ ಮಾಡುತ್ತಾರೆ. ಯಾರೋ ಒಬ್ಬರಿಗೆ 20 ವರ್ಷಗಳ ಬಳಿಕ ಜ್ಞಾನೋದಯವಾಗಿದ್ದು ಹೇಗೆ ಎಂಬ ಪ್ರಶ್ನೆ ಮೂಡುತ್ತದೆ. ಒಂದು ಧರ್ಮಕ್ಕೆ ಅಪಮಾನ ಮಾಡಲು ವಿವಾದ ಮಾಡುವುದು ಸರಿಯಲ್ಲ. ಇದರಲ್ಲಿ ಧರ್ಮಸ್ಥಳದ ಶ್ರೀ ಮಂಜುನಾಥಸ್ವಾಮಿಯ ವಿಚಾರವೇ ಬರುವುದಿಲ್ಲ. ಆದರೂ ಪದೇ ಪದೆ ಧಾರ್ಮಿಕ ಕೇಂದ್ರದ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ ಎಂದರು.

ಯಾವುದೇ ವ್ಯಕ್ತಿ ತಪ್ಪು ಮಾಡಿದರೆ, ಆ ವ್ಯಕ್ತಿಯ ಬಗ್ಗೆ ಆರೋಪ ಮಾಡಲಿ. ಆದರೆ ಇಡೀ ಧಾರ್ಮಿಕ ಸಂಸ್ಥೆಯನ್ನು ಗುರಿ ಮಾಡಿ ಮಾತಾಡುವುದು ಸರಿಯಲ್ಲ. ಎಸ್‌ಐಟಿ ತಂಡಕ್ಕೆ ಸರ್ಕಾರ ಬೇರಾವುದೇ ಜವಾಬ್ದಾರಿ ವಹಿಸಬಾರದು. ಈ ತಂಡದ ಪೊಲೀಸರು ಸಂಪೂರ್ಣವಾಗಿ ತನಿಖೆ ಮಾಡಿ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸಲಿ ಎಂದರು.

ಇದು ವ್ಯಕ್ತಿಗಳಿಗೆ ಸಂಬಂಧಿಸಿದ ವಿಚಾರವೇ ಹೊರತು, ಧರ್ಮಸ್ಥಳದ ಶ್ರೀ ಮಂಜುನಾಥ ದೇವಾಲಯಕ್ಕೆ ಸಂಬಂಧಿಸಿದ ವಿಷಯವಲ್ಲ. ಯಾರೂ ಧರ್ಮಸ್ಥಳದ ದೇವಾಲಯವನ್ನು ಗುರಿ ಮಾಡಬಾರದು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಮಗಿಂತಲೂ ಹೆಚ್ಚಿನ ದೈವಭಕ್ತರು. ಅವರು ದೇವರ ಇಚ್ಛೆಯಂತೆಯೇ ನಡೆದುಕೊಳ್ಳಲಿ. ಧರ್ಮಸ್ಥಳದ ದೇವಾಲಯದ ಬಗ್ಗೆ ಮನಸ್ಸಿಗೆ ಬಂದಂತೆ ಮಾತಾಡುವುದು ತಪ್ಪು. ಇಂತಹ ಮಾತುಗಳು ಯಾವುದೇ ಸಚಿವರಿಗೆ ಶೋಭೆ ತರುವುದಿಲ್ಲ ಎಂದರು.

ಅಭಿವೃದ್ಧಿ ಇಲ್ಲದೆ ಗ್ರೇಟರ್‌ ಬೆಂಗಳೂರು ಪ್ರಸ್ತಾಪ

ಗ್ರೇಟರ್‌ ಬೆಂಗಳೂರು ವಿಷಯಕ್ಕೆ ಸಂಬಂಧಿಸಿದಂತೆ ಉತ್ತರ ನೀಡುವಂತೆ ಸರ್ಕಾರಕ್ಕೆ ಕೋರ್ಟ್‌ ಸೂಚನೆ ನೀಡಿದೆ. ಇದನ್ನೇ ಮುಂದಿಟ್ಟುಕೊಂಡು ಅಭಿವೃದ್ಧಿ ಕೆಲಸ ಮಾಡುತ್ತಿಲ್ಲ. ಕಸದ ರಾಶಿ ಎಲ್ಲ ಕಡೆ ಇದೆ. ಆಸ್ಪತ್ರೆಗಳಲ್ಲಿ ಸಂಬಳ ಪಾವತಿಯಾಗಿಲ್ಲ. ಶಾಲೆಗಳ ಶಿಕ್ಷಕರನ್ನು ವಜಾ ಮಾಡಲಾಗುತ್ತಿದೆ. ಬೆಂಗಳೂರಿನ ಅಭಿವೃದ್ಧಿ ಮಾಡಲಾಗದೆ ಐದು ಪಾಲಿಕೆ ಮಾಡುವ ವಿಷಯವನ್ನು ಮುನ್ನೆಲೆಗೆ ತರಲಾಗಿದೆ. ಎಲ್ಲದಕ್ಕೂ ಜನರ ಮೇಲೆ ತೆರಿಗೆ ಹೇರಲಾಗಿದೆ. ಇ ಖಾತಾದಿಂದಾಗಿ ಎಲ್ಲೂ ನೋಂದಣಿ ಮಾಡಲು ಆಗುತ್ತಿಲ್ಲ. ಕಾಂಗ್ರೆಸ್‌ ವಾಮಮಾರ್ಗದಲ್ಲಿ ಗೆಲ್ಲಲು ಈ ರೀತಿ ಪಾಲಿಕೆಗಳನ್ನು ರಚಿಸುತ್ತಿದೆ. ಬೆಂಗಳೂರನ್ನು ಹೋಳು ಮಾಡುವುದನ್ನು ಬಿಜೆಪಿ ಯಾವಾಗಲೂ ವಿರೋಧ ಮಾಡಲಿದೆ. ವಿಧಾನಸಭೆ ಅಧಿವೇಶನದಲ್ಲೂ ಇದನ್ನು ವಿರೋಧಿಸಲಾಗುವುದು ಎಂದು ತಿಳಿಸಿದರು.

ಮುಡಾ ಹಗರಣದ ವಿರುದ್ಧದ ಬಿಜೆಪಿಯ ಹೋರಾಟದ ಫಲವಾಗಿ ಸಿಎಂ ಸಿದ್ದರಾಮಯ್ಯ ನಿವೇಶನಗಳನ್ನು ವಾಪಸ್‌ ಮಾಡಿದ್ದಾರೆ. ತಪ್ಪಾಗಿದೆ ಎಂಬ ಕಾರಣಕ್ಕೆ ಈ ರೀತಿ ಮಾಡಿದ್ದಾರೆ. ಮುಡಾ ಹಗರಣದ ವಿರುದ್ಧದ ಹೋರಾಟ ನಿಲ್ಲಿಸುವುದಿಲ್ಲ ಎಂದರು.

ಆಂದೋಲನ ಡೆಸ್ಕ್

Recent Posts

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

6 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

7 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

9 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

9 hours ago

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

12 hours ago

ಟೋಲ್ ಬಳಿ ಸೈನ್ ಬೋರ್ಡ್‌ಗೆ ಖಾಸಗಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ, 20ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಟೋಲ್‌ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ…

13 hours ago