ರಾಜ್ಯ

ಧರ್ಮಸ್ಥಳದ ಮಂಜುನಾಥ ಸ್ವಾಮಿಯ ದೇವಾಲಯದ ಬಗ್ಗೆ ಅಪಪ್ರಚಾರ ಮಾಡಬೇಡಿ : ಆರ್‌.ಅಶೋಕ

ಬೆಂಗಳೂರು : ಧರ್ಮಸ್ಥಳದ ಬಳಿ ಸಾವಿರಾರು ಶವಗಳು ಸಿಕ್ಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಎಸ್‌ಐಟಿ ರಚಿಸಿರುವುದು ಸ್ವಾಗತಾರ್ಹ. ಆದರೆ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ದೇವಾಲಯದ ಬಗ್ಗೆ ಅಪಪ್ರಚಾರ ಮಾಡುವುದು ತಪ್ಪು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧರ್ಮಸ್ಥಳ ಭಾಗದಲ್ಲಿ ಸಾವಿರಾರು ಶವಗಳನ್ನು ಹೂತು ಹಾಕಿದ್ದೇನೆ ಎಂದು ಅನಾಮಧೇಯ ವ್ಯಕ್ತಿ ಹೇಳಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದೆ. ಈ ಪ್ರಕರಣಗಳಲ್ಲಿ ನಿಷ್ಪಕ್ಷಪಾತವಾದ ತನಿಖೆಯಾಗಲಿ ಎಂದು ಆಗ್ರಹಿಸುತ್ತೇನೆ. ಯಾರನ್ನೂ ಸಿಕ್ಕಿಹಾಕಿಸುವ ಉದ್ದೇಶದಿಂದ ತನಿಖೆ ನಡೆಯಬಾರದು ಎಂದರು.

ದಕ್ಷಿಣ ಭಾರತದಲ್ಲಿ ತಿರುಪತಿ ಹಾಗೂ ಧರ್ಮಸ್ಥಳ ಕೋಟ್ಯಂತರ ಹಿಂದೂಗಳ ಶ್ರದ್ಧಾಕೇಂದ್ರವಾಗಿದೆ. ಧರ್ಮಸ್ಥಳದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಯುವಕನೊಬ್ಬ ವೀಡಿಯೋಗಳನ್ನು ಅಪ್‌ಲೋಡ್‌ ಮಾಡುತ್ತಿದ್ದಾನೆ. ಈ ನಡುವೆ ಕೇರಳ ಸರ್ಕಾರ ಮಧ್ಯಪ್ರವೇಶ ಮಾಡಿದೆ. ಕೇರಳ ಸರ್ಕಾರ ಅಲ್ಲಿನ ದೇವಸ್ಥಾನಗಳ ವಿಚಾರದಲ್ಲಿ ಹೇಗೆ ನಡೆದುಕೊಳ್ಳುತ್ತಿದೆ, ಶಬರಿಮಲೆ ಅಯ್ಯಪ್ಪ ದೇವಾಲಯದ ವಿಚಾರದಲ್ಲಿ ಹೇಗೆ ನಡೆದುಕೊಂಡಿದೆ ಎಂಬುದು ಜಗಜ್ಜಾಹೀರಾಗಿದೆ. ಯಾವುದೇ ಕೊಲೆಯಾಗಿದ್ದರೆ ಸ್ಥಳೀಯ ಪೊಲೀಸ್‌ ಠಾಣೆ ತನಿಖೆ ಮಾಡುತ್ತದೆ ಎಂದರು.

ಸಾವಿರಾರು ಶವಗಳು ಸಿಕ್ಕಿದೆ ಎಂದರೆ, ಅವರ ಕುಟುಂಬದವರು ದೂರು ದಾಖಲಿಸುತ್ತಾರೆ. ಅಂತಹ ಪ್ರಕರಣ ಎಷ್ಟಿದೆ ಎಂದು ಸರ್ಕಾರ ತಿಳಿಸಬೇಕು. ದೇವಾಲಯ ಮಾತ್ರವಲ್ಲದೆ, ಚರ್ಚ್‌, ಮಸೀದಿ ಮೊದಲಾದ ಧಾರ್ಮಿಕ ಕೇಂದ್ರಗಳ ಬಳಿ ಅನೇಕರು ಸಾಯುತ್ತಾರೆ. ಇಂತಹ ಸಂದರ್ಭಗಳಲ್ಲಿ ಪೊಲೀಸರು ತನಿಖೆ ಮಾಡುತ್ತಾರೆ. ಯಾರೋ ಒಬ್ಬರಿಗೆ 20 ವರ್ಷಗಳ ಬಳಿಕ ಜ್ಞಾನೋದಯವಾಗಿದ್ದು ಹೇಗೆ ಎಂಬ ಪ್ರಶ್ನೆ ಮೂಡುತ್ತದೆ. ಒಂದು ಧರ್ಮಕ್ಕೆ ಅಪಮಾನ ಮಾಡಲು ವಿವಾದ ಮಾಡುವುದು ಸರಿಯಲ್ಲ. ಇದರಲ್ಲಿ ಧರ್ಮಸ್ಥಳದ ಶ್ರೀ ಮಂಜುನಾಥಸ್ವಾಮಿಯ ವಿಚಾರವೇ ಬರುವುದಿಲ್ಲ. ಆದರೂ ಪದೇ ಪದೆ ಧಾರ್ಮಿಕ ಕೇಂದ್ರದ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ ಎಂದರು.

ಯಾವುದೇ ವ್ಯಕ್ತಿ ತಪ್ಪು ಮಾಡಿದರೆ, ಆ ವ್ಯಕ್ತಿಯ ಬಗ್ಗೆ ಆರೋಪ ಮಾಡಲಿ. ಆದರೆ ಇಡೀ ಧಾರ್ಮಿಕ ಸಂಸ್ಥೆಯನ್ನು ಗುರಿ ಮಾಡಿ ಮಾತಾಡುವುದು ಸರಿಯಲ್ಲ. ಎಸ್‌ಐಟಿ ತಂಡಕ್ಕೆ ಸರ್ಕಾರ ಬೇರಾವುದೇ ಜವಾಬ್ದಾರಿ ವಹಿಸಬಾರದು. ಈ ತಂಡದ ಪೊಲೀಸರು ಸಂಪೂರ್ಣವಾಗಿ ತನಿಖೆ ಮಾಡಿ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸಲಿ ಎಂದರು.

ಇದು ವ್ಯಕ್ತಿಗಳಿಗೆ ಸಂಬಂಧಿಸಿದ ವಿಚಾರವೇ ಹೊರತು, ಧರ್ಮಸ್ಥಳದ ಶ್ರೀ ಮಂಜುನಾಥ ದೇವಾಲಯಕ್ಕೆ ಸಂಬಂಧಿಸಿದ ವಿಷಯವಲ್ಲ. ಯಾರೂ ಧರ್ಮಸ್ಥಳದ ದೇವಾಲಯವನ್ನು ಗುರಿ ಮಾಡಬಾರದು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಮಗಿಂತಲೂ ಹೆಚ್ಚಿನ ದೈವಭಕ್ತರು. ಅವರು ದೇವರ ಇಚ್ಛೆಯಂತೆಯೇ ನಡೆದುಕೊಳ್ಳಲಿ. ಧರ್ಮಸ್ಥಳದ ದೇವಾಲಯದ ಬಗ್ಗೆ ಮನಸ್ಸಿಗೆ ಬಂದಂತೆ ಮಾತಾಡುವುದು ತಪ್ಪು. ಇಂತಹ ಮಾತುಗಳು ಯಾವುದೇ ಸಚಿವರಿಗೆ ಶೋಭೆ ತರುವುದಿಲ್ಲ ಎಂದರು.

ಅಭಿವೃದ್ಧಿ ಇಲ್ಲದೆ ಗ್ರೇಟರ್‌ ಬೆಂಗಳೂರು ಪ್ರಸ್ತಾಪ

ಗ್ರೇಟರ್‌ ಬೆಂಗಳೂರು ವಿಷಯಕ್ಕೆ ಸಂಬಂಧಿಸಿದಂತೆ ಉತ್ತರ ನೀಡುವಂತೆ ಸರ್ಕಾರಕ್ಕೆ ಕೋರ್ಟ್‌ ಸೂಚನೆ ನೀಡಿದೆ. ಇದನ್ನೇ ಮುಂದಿಟ್ಟುಕೊಂಡು ಅಭಿವೃದ್ಧಿ ಕೆಲಸ ಮಾಡುತ್ತಿಲ್ಲ. ಕಸದ ರಾಶಿ ಎಲ್ಲ ಕಡೆ ಇದೆ. ಆಸ್ಪತ್ರೆಗಳಲ್ಲಿ ಸಂಬಳ ಪಾವತಿಯಾಗಿಲ್ಲ. ಶಾಲೆಗಳ ಶಿಕ್ಷಕರನ್ನು ವಜಾ ಮಾಡಲಾಗುತ್ತಿದೆ. ಬೆಂಗಳೂರಿನ ಅಭಿವೃದ್ಧಿ ಮಾಡಲಾಗದೆ ಐದು ಪಾಲಿಕೆ ಮಾಡುವ ವಿಷಯವನ್ನು ಮುನ್ನೆಲೆಗೆ ತರಲಾಗಿದೆ. ಎಲ್ಲದಕ್ಕೂ ಜನರ ಮೇಲೆ ತೆರಿಗೆ ಹೇರಲಾಗಿದೆ. ಇ ಖಾತಾದಿಂದಾಗಿ ಎಲ್ಲೂ ನೋಂದಣಿ ಮಾಡಲು ಆಗುತ್ತಿಲ್ಲ. ಕಾಂಗ್ರೆಸ್‌ ವಾಮಮಾರ್ಗದಲ್ಲಿ ಗೆಲ್ಲಲು ಈ ರೀತಿ ಪಾಲಿಕೆಗಳನ್ನು ರಚಿಸುತ್ತಿದೆ. ಬೆಂಗಳೂರನ್ನು ಹೋಳು ಮಾಡುವುದನ್ನು ಬಿಜೆಪಿ ಯಾವಾಗಲೂ ವಿರೋಧ ಮಾಡಲಿದೆ. ವಿಧಾನಸಭೆ ಅಧಿವೇಶನದಲ್ಲೂ ಇದನ್ನು ವಿರೋಧಿಸಲಾಗುವುದು ಎಂದು ತಿಳಿಸಿದರು.

ಮುಡಾ ಹಗರಣದ ವಿರುದ್ಧದ ಬಿಜೆಪಿಯ ಹೋರಾಟದ ಫಲವಾಗಿ ಸಿಎಂ ಸಿದ್ದರಾಮಯ್ಯ ನಿವೇಶನಗಳನ್ನು ವಾಪಸ್‌ ಮಾಡಿದ್ದಾರೆ. ತಪ್ಪಾಗಿದೆ ಎಂಬ ಕಾರಣಕ್ಕೆ ಈ ರೀತಿ ಮಾಡಿದ್ದಾರೆ. ಮುಡಾ ಹಗರಣದ ವಿರುದ್ಧದ ಹೋರಾಟ ನಿಲ್ಲಿಸುವುದಿಲ್ಲ ಎಂದರು.

ಆಂದೋಲನ ಡೆಸ್ಕ್

Recent Posts

ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ

ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…

6 hours ago

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

6 hours ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

7 hours ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

7 hours ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

7 hours ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

8 hours ago