Minister Eshwar Khandre
ಬೆಂಗಳೂರು: ಅರಣ್ಯ ಪ್ರದೇಶದೊಳಗಿನ ರಸ್ತೆಯಲ್ಲಿ ಸಾಗುವ ಪ್ರಯಾಣಿಕರು ತಮ್ಮ ವಾಹನದಿಂದ ಇಳಿದು ವನ್ಯಜೀವಿಯ ಫೋಟೋ ತೆಗೆಯುವುದು, ಸೆಲ್ಫಿ ತೆಗೆಯುವ ಸಾಹಸ ಮಾಡುತ್ತಿದ್ದು, ಇಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಚಾರ್ಮಾಡಿ ಘಾಟ್ನ ನಾಲ್ಕನೇ ತಿರುವಿನಲ್ಲಿ ಇಂದು ಬೆಳಗ್ಗೆ ಕೆಲವು ಪ್ರವಾಸಿಗರು ಆನೆಯ ಜೊತೆ ಸೆಲ್ಫಿ ತೆಗೆದುಕೊಳ್ಳುತ್ತಿದ್ದರು. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಿರುವ ಸಚಿವರು, ಅರಣ್ಯ ಮಾರ್ಗದಲ್ಲಿ ಸಂಚರಿಸುವಾಗ ವಾಹನಗಳಿಂದ ಕೆಳಗೆ ಇಳಿಯುವುದು ಅಪರಾಧವಾಗಿದ್ದು, ಆ ವಾಹನದ ನೋಂದಣಿ ಸಂಖ್ಯೆ ಪತ್ತೆ ಮಾಡಿ ಕಾನೂನು ರೀತಿಯ ಕ್ರಮ ಜರುಗಿಸುವಂತೆ ಸೂಚಿಸಿದ್ದಾರೆ.
ರಾಜ್ಯ ಸರ್ಕಾರ, ಅರಣ್ಯ ಇಲಾಖೆ ಮಾನವ-ವನ್ಯಜೀವಿ ಸಂಘರ್ಷ ನಿಯಂತ್ರಿಸಲು ಶ್ರಮಿಸುತ್ತಿದೆ. ಸಾರ್ವಜನಿಕರು ಈ ರೀತಿ ಸೆಲ್ಫಿ ತೆಗೆದುಕೊಳ್ಳುವ, ಫೋಟೋ ತೆಗೆಯುವಾಗ ಅನಾಹುತ ಸಂಭವಿಸುವ ಅಪಾಯ ಇರುತ್ತದೆ. ಯಾರೂ ತಮ್ಮ ಅಮೂಲ್ಯ ಜೀವದೊಂದಿಗೆ ಚೆಲ್ಲಾಟ ಆಡಬಾರದು ಎಂದು ಮನವಿ ಮಾಡಿದ್ದಾರೆ.
ಹಾಸನ: ಕಳೆದ ಎರಡು ದಿನಗಳಿಂದ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕಡ್ರಳ್ಳಿ ಗ್ರಾಮದಲ್ಲಿರುವ ಪಟ್ಲ ಬೆಟ್ಟದಲ್ಲಿ ಕಾಡಾನೆಗಳ ಹಿಂಡು ಬೀಡುಬಿಟ್ಟಿರುವುದರಿಂದ ಮುಂಜಾಗ್ರತಾ…
ನವದೆಹಲಿ: ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿಕೆ ಪಕ್ಷದ ಸಂಸ್ಥಾಪಕ ದಳಪತಿ ವಿಜಯ್ ಮೂರನೇ ಬಾರಿಗೆ ಸಿಬಿಐ ಕಚೇರಿಗೆ ಇಂದು…
ದುಬೈ: ಈ ಅವಧಿಯಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ದುಬೈನ್ ಮಾರುಕಟ್ಟೆಗಳು, ಸಮುದ್ರ ತೀರಗಳು ಹಾಗೂ ಐಷಾರಾಮಿ ಹೋಟೆಲ್ಗಳು ಈಗ ಜನರಿಲ್ಲದೇ…
ಜೆರುಸೇಲಂ: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಕ್ಷೇಮವಾಗಿದ್ದಾರೆ. ಅವರು ಸಾವನ್ನಪ್ಪಿದ್ದಾರೆ ಎಂಬ ವರದಿ ಸುಳ್ಳು ಎಂದು ಪ್ರಧಾನಿ ಕಚೇರಿ ಸ್ಪಷ್ಟನೆ…
ನವದೆಹಲಿ: ಇಂದು ಸಂಜೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟವಾಗುವ ಸಾಧ್ಯತೆಯಿದೆ. ಇಂದು ಸಂಜೆ ನಾಲ್ಕು ಗಂಟೆಗೆ ಕೇಂದ್ರ…
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲ ಝಳ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…