ರಾಜ್ಯ

ಬಿಜೆಪಿ-ಆರ್‌ಎಸ್‌ಎಸ್-ಮೋದಿ ವಿರುದ್ಧ ಏನೆಲ್ಲಾ ಮಾತಾಡಿದ್ದಾರೆ ಗೊತ್ತಾ? ; ಸಿಎಂ ಹೀಗಂದಿದ್ಯಾರಿಗೆ

ದಾವಣಗೆರೆ: ಎಚ್.ಡಿ.ದೇವೇಗೌಡರು, ಹೆಚ್.ಡಿ.ಕುಮಾರಸ್ವಾಮಿ ಮತ್ತು ಚಲವಾದಿ ನಾರಾಯಣಸ್ವಾಮಿ ಅವರು ಬಿಜೆಪಿ-RSS-ಮೋದಿಯವರ ಬಗ್ಗೆ ಎಂತೆಂಥಾ ಮಾತಾಡಿದ್ದಾರೆ ಗೊತ್ತಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಧ್ಯಮದವರಿಗೆ ನೆನಪಿಸಿದರು.

ದಾವಣಗೆರೆಯಲ್ಲಿ ಮಾಧ್ಯಮದವರ ಪ್ರಶ್ನಗಳಿಗೆ ಪ್ರತಿಕ್ರಿಯಿಸಿದರು.

ಈಗ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿ ಸೇರಿರುವ ಇವರೆಲ್ಲಾ ಮೊದಲೆಲ್ಲಾ ಬಿಜೆಪಿ, RSS, ಮೋದಿಯವರ ಬಗ್ಗೆ ಏನೇನು ಮಾತಾಡಿದ್ದಾರೆ ಎನ್ನುವುದು ನಿಮಗೆ ಗೊತ್ತಿಲ್ಲವಾ? ಇವರಿಗೆಲ್ಲಾ ನಮ್ಮನ್ನು ಟೀಕಿಸುವ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು.

ಜನ ಗ್ಯಾರಂಟಿ ಯೋಜನೆಗಳನ್ನು ಮೆಚ್ಚಿಕೊಂಡಿದ್ದಾರೆ.‌ ಬಿಜೆಪಿ ಬಡವರ ಈ ಗ್ಯಾರಂಟಿಗಳನ್ನು ವಿರೋಧಿಸುತ್ತಿದೆ. ಹೀಗೆ ಬಡವರ ವಿರೋಧಿ, ಸಂವಿಧಾನ ವಿರೋಧಿಯಾಗಿರುವ ಬಿಜೆಪಿಯನ್ನು ಬೆಂಬಲಿಸಲು ರಾಜ್ಯದ ಜನರಿಗೆ ಕಾರಣವೇ ಇಲ್ಲ ಎಂದರು.

ನಾವು ಕುಟುಂಬ ರಾಜಕಾರಣ ಮಾಡಲ್ಲ. ಜನರೇ ನಮ್ಮನ್ನು ಕರೆ ತಂದು ಚುನಾವಣೆಗೆ ನಿಲ್ಲಿಸಿದ್ದಾರೆ ಎನ್ನುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, “ಹಾಗಾದರೆ ಚನ್ನಪಟ್ಟಣದಲ್ಲಿ ಅವರ ಮಗ ಸೋತಿದ್ದು ಏಕೆ? ಜನ ಬಯಸಿದಾಗ ಚುನಾವಣೆಗೆ ಸ್ಪರ್ಧಿಸುವುದು ತಪ್ಪಲ್ಲ. ಜನ‌ ತಿರಸ್ಕರಿಸಿದಾಗಲೂ ಆ ರೀತಿ ಮಾತಾಡುತ್ತಾರಲ್ಲಾ ಎಂದು ಮರು ಪ್ರಶ್ನಿಸಿದರು.

ಸಚಿವ ಜಮೀರ್ ಅವರು ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಹೆಚ್ಚು ಪ್ರಚಾರ ಮಾಡಲಿಲ್ಲ ಎನ್ನುವ ಪ್ರಶ್ನೆಗೆ ಉತ್ತರಿಸಿದ ಸಿಎಂ, “ಜಮೀರ್ ಅವರು ಕೇರಳ, ಬಾಗಲಕೋಟೆ ಸೇರಿ ಎಲ್ಲಾ ಕಡೆ ಕೆಲಸ ಮಾಡಿದ್ದಾರೆ. ಹಾಗೆಯೇ ದಾವಣಗೆರೆಯಲ್ಲೂ ಬಂದು ಪ್ರಚಾರ ಮಾಡಿ ಹೋಗಿದ್ದಾರೆ. ಜಮೀರ್ ಅವರು ಪಕ್ಷದ ಸಿಪಾಯಿ. ಅವರು ಕಾಂಗ್ರೆಸ್ ಪಕ್ಷದ ಪರವಾಗಿ ಮತದಾರರಿಗೆ, ಕಾರ್ಯಕರ್ತರಿಗೆ ಸ್ಪಷ್ಟ ಸಂದೇಶ ನೀಡಿದ್ದಾರೆ ಎಂದರು.

ಚಲವಾದಿ ನಾರಾಯಣಸ್ವಾಮಿ ಮೊದಲು ಕಾಂಗ್ರೆಸ್‌ನಲ್ಲಿದ್ದು ಇಲ್ಲಿ ಲಾಭ ಪಡೆದು ಈಗ ಬಿಜೆಪಿಗೆ ಹೋಗಿ ಅಲ್ಲೂ ಲಾಭ ಮಾಡಿಕೊಂಡಿದ್ದಾರೆ. ಚಲವಾದಿ ನಾರಾಯಸ್ವಾಮಿ ಅವರು ಬಿಜೆಪಿ ಬಗ್ಗೆ ಏನೇನು ಮಾತಾಡಿದ್ದಾರೆ ಗೊತ್ತಾ ಎಂದು ಪ್ರಶ್ನಿಸಿದರು.

ದೇವೇಗೌಡರು ಮತ್ತು ಕುಮಾರಸ್ವಾಮಿ ಯವರು ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಈಗ ಬಿಜೆಪಿ ಜೊತೆ ಸೇರಿದ್ದಾರೆ. ಇದುವರೆಗೂ ಅವರು ಬಿಜೆಪಿ, RSS ಬಗ್ಗೆ ಏನೇನು ಮಾತಾಡಿದ್ದಾರೆ ಎನ್ನುವುದನ್ನು ನೆನಪಿಸಿಕೊಳ್ಳಲಿ ಎಂದರು.

ನಾನು ಜೆಡಿಎಸ್ ಅಧ್ಯಕ್ಷನಾಗಿದ್ದಾಗ 59 ಸೀಟು ಗೆದ್ದಿದ್ದ ಜೆಡಿಎಸ್ ಆ ನಂತರ ಅಷ್ಟು ಸೀಟು ಗೆಲ್ಲಲೇ ಇಲ್ಲ. 19ಕ್ಕೆ ಇಳಿದಿದ್ದಾರೆ ಎಂದು ಟೀಕಿಸಿದರು.

ರಾಜ್ಯದಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಕಾಂಗ್ರೆಸ್ ಸಹಕರಿಸುತ್ತಿಲ್ಲ ಎನ್ನುವ ಕುಮಾರಸ್ವಾಮಿ ಅವರ ಮಾತಿಗೆ ಪ್ರತಿಕ್ರಿಯಿಸಿ, “ಕೊಟ್ಟ ಕುದುರೆಯನ್ನು ಏರದವನು ವೀರನೂ ಅಲ್ಲ, ಶೂರನೂ ಅಲ್ಲ” ಎಂದು ವ್ಯಂಗ್ಯವಾಡಿದರು.

ಆಂದೋಲನ ಡೆಸ್ಕ್

Recent Posts

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಮೈಸೂರು : ಕೆ-ಸೆಟ್‌ ಮತ್ತು ಯುಜಿಸಿ-ನೆಟ್‌, ಜೆಆರ್‌ಎಫ್‌ ಅರ್ಹತಾ ಪರೀಕ್ಷೆ ಬರೆಯುವವರಿಗೆ 45 ದಿನಗಳ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕ…

52 mins ago

ಹಾಸನ | ಮೆದುಳಿನಲ್ಲಿ ತೀವ್ರ ರಕ್ತಸ್ರಾವ ; 25 ವರ್ಷದ ಸಾಫ್ಟ್‌ವೇರ್‌ ಇಂಜಿನಿಯರ್‌ ಯುವತಿ ಸಾವು

ಹಾಸನ : ಹಠಾತ್ ಕುಸಿದು ಬಿದ್ದು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಯುವತಿ ಚಿಕಿತ್ಸೆ ಫಲಿಸದೆ…

1 hour ago

ಚೆಲುವಾಂಬ ಆಸ್ಪತ್ರೆ | 15 ತಿಂಗಳಲ್ಲಿ 421 ಶಿಶು ಮರಣ ; ದಾಖಲೆ ಬಿಡುಗಡೆ ಮಾಡಿದ ಮಾಜಿ ಶಾಸಕ ನಾಗೇಂದ್ರ

ಮೈಸೂರು : ಮೈಸೂರು ಪ್ರಾಂತ್ಯದಲ್ಲೇ ಪ್ರಸೂತಿ, ಸ್ತ್ರೀರೋಗ ಮತ್ತು ಮಕ್ಕಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಲ್ಲಿ ಹೆಸರುವಾಸಿಯಾಗಿದ್ದ ಮೈಸೂರಿನ ಚೆಲುವಾಂಬ ಆಸ್ಪತ್ರೆಯ…

1 hour ago

ಪಶ್ಚಿಮ ಬಂಗಾಳ ಎರಡನೇ ಹಂತದ ಚುನಾವಣೆ : ಏ.29ರಂದು ಮತದಾನ ; ಭಾರೀ ಬಿಗಿ ಭದ್ರತೆ

ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಚುನಾವಣೆ ಸೋಮವಾರ ಅಂತ್ಯವಾಗಿದೆ. ಏ.29ರಂದು ಮತದಾನ ನಡೆಯಲಿದ್ದು,…

2 hours ago

ಅರಳುಮರಳು ಮಾತು, ಕ್ಷಮಿಸಿಬಿಡೋಣ : ಎಚ್.ವಿಶ್ವನಾಥ್ ಹೇಳಿಕೆಗೆ ಸಚಿವ ಮಧು ಬಂಗಾರಪ್ಪ ತಿರುಗೇಟು

ಶಿವಮೊಗ್ಗ : ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ‘ಕಾಪಿ ಹೊಡೆಸಿ ಶೇ.94.1 ಫಲಿತಾಂಶ ತಂದಿದ್ದಾರೆ’ ಎಂಬ ಬಿಜೆಪಿ ಎಂಎಲ್‌ಸಿ ಎಚ್.ವಿಶ್ವನಾಥ್ ಅವರ ಹೇಳಿಕೆಗೆ…

3 hours ago

ಭಾರತ-ನ್ಯೂಜಿಲೆಂಡ್‌ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ : 1.88 ಲಕ್ಷ ಕೋಟಿ ಹೂಡಿಕೆ

ನವದೆಹಲಿ : ಭಾರತ ಮತ್ತು ನ್ಯೂಜಿಲೆಂಡ್ ನಡುವೆ ದ್ವಿಪಕ್ಷೀಯ ವ್ಯಾಪಾರ ಮತ್ತು ಹೂಡಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸೋಮವಾರ ನವದೆಹಲಿಯಲ್ಲಿ ʼಮುಕ್ತ…

3 hours ago