ರಾಜ್ಯ

ಬಿಜೆಪಿ-ಆರ್‌ಎಸ್‌ಎಸ್-ಮೋದಿ ವಿರುದ್ಧ ಏನೆಲ್ಲಾ ಮಾತಾಡಿದ್ದಾರೆ ಗೊತ್ತಾ? ; ಸಿಎಂ ಹೀಗಂದಿದ್ಯಾರಿಗೆ

ದಾವಣಗೆರೆ: ಎಚ್.ಡಿ.ದೇವೇಗೌಡರು, ಹೆಚ್.ಡಿ.ಕುಮಾರಸ್ವಾಮಿ ಮತ್ತು ಚಲವಾದಿ ನಾರಾಯಣಸ್ವಾಮಿ ಅವರು ಬಿಜೆಪಿ-RSS-ಮೋದಿಯವರ ಬಗ್ಗೆ ಎಂತೆಂಥಾ ಮಾತಾಡಿದ್ದಾರೆ ಗೊತ್ತಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಧ್ಯಮದವರಿಗೆ ನೆನಪಿಸಿದರು.

ದಾವಣಗೆರೆಯಲ್ಲಿ ಮಾಧ್ಯಮದವರ ಪ್ರಶ್ನಗಳಿಗೆ ಪ್ರತಿಕ್ರಿಯಿಸಿದರು.

ಈಗ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿ ಸೇರಿರುವ ಇವರೆಲ್ಲಾ ಮೊದಲೆಲ್ಲಾ ಬಿಜೆಪಿ, RSS, ಮೋದಿಯವರ ಬಗ್ಗೆ ಏನೇನು ಮಾತಾಡಿದ್ದಾರೆ ಎನ್ನುವುದು ನಿಮಗೆ ಗೊತ್ತಿಲ್ಲವಾ? ಇವರಿಗೆಲ್ಲಾ ನಮ್ಮನ್ನು ಟೀಕಿಸುವ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು.

ಜನ ಗ್ಯಾರಂಟಿ ಯೋಜನೆಗಳನ್ನು ಮೆಚ್ಚಿಕೊಂಡಿದ್ದಾರೆ.‌ ಬಿಜೆಪಿ ಬಡವರ ಈ ಗ್ಯಾರಂಟಿಗಳನ್ನು ವಿರೋಧಿಸುತ್ತಿದೆ. ಹೀಗೆ ಬಡವರ ವಿರೋಧಿ, ಸಂವಿಧಾನ ವಿರೋಧಿಯಾಗಿರುವ ಬಿಜೆಪಿಯನ್ನು ಬೆಂಬಲಿಸಲು ರಾಜ್ಯದ ಜನರಿಗೆ ಕಾರಣವೇ ಇಲ್ಲ ಎಂದರು.

ನಾವು ಕುಟುಂಬ ರಾಜಕಾರಣ ಮಾಡಲ್ಲ. ಜನರೇ ನಮ್ಮನ್ನು ಕರೆ ತಂದು ಚುನಾವಣೆಗೆ ನಿಲ್ಲಿಸಿದ್ದಾರೆ ಎನ್ನುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, “ಹಾಗಾದರೆ ಚನ್ನಪಟ್ಟಣದಲ್ಲಿ ಅವರ ಮಗ ಸೋತಿದ್ದು ಏಕೆ? ಜನ ಬಯಸಿದಾಗ ಚುನಾವಣೆಗೆ ಸ್ಪರ್ಧಿಸುವುದು ತಪ್ಪಲ್ಲ. ಜನ‌ ತಿರಸ್ಕರಿಸಿದಾಗಲೂ ಆ ರೀತಿ ಮಾತಾಡುತ್ತಾರಲ್ಲಾ ಎಂದು ಮರು ಪ್ರಶ್ನಿಸಿದರು.

ಸಚಿವ ಜಮೀರ್ ಅವರು ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಹೆಚ್ಚು ಪ್ರಚಾರ ಮಾಡಲಿಲ್ಲ ಎನ್ನುವ ಪ್ರಶ್ನೆಗೆ ಉತ್ತರಿಸಿದ ಸಿಎಂ, “ಜಮೀರ್ ಅವರು ಕೇರಳ, ಬಾಗಲಕೋಟೆ ಸೇರಿ ಎಲ್ಲಾ ಕಡೆ ಕೆಲಸ ಮಾಡಿದ್ದಾರೆ. ಹಾಗೆಯೇ ದಾವಣಗೆರೆಯಲ್ಲೂ ಬಂದು ಪ್ರಚಾರ ಮಾಡಿ ಹೋಗಿದ್ದಾರೆ. ಜಮೀರ್ ಅವರು ಪಕ್ಷದ ಸಿಪಾಯಿ. ಅವರು ಕಾಂಗ್ರೆಸ್ ಪಕ್ಷದ ಪರವಾಗಿ ಮತದಾರರಿಗೆ, ಕಾರ್ಯಕರ್ತರಿಗೆ ಸ್ಪಷ್ಟ ಸಂದೇಶ ನೀಡಿದ್ದಾರೆ ಎಂದರು.

ಚಲವಾದಿ ನಾರಾಯಣಸ್ವಾಮಿ ಮೊದಲು ಕಾಂಗ್ರೆಸ್‌ನಲ್ಲಿದ್ದು ಇಲ್ಲಿ ಲಾಭ ಪಡೆದು ಈಗ ಬಿಜೆಪಿಗೆ ಹೋಗಿ ಅಲ್ಲೂ ಲಾಭ ಮಾಡಿಕೊಂಡಿದ್ದಾರೆ. ಚಲವಾದಿ ನಾರಾಯಸ್ವಾಮಿ ಅವರು ಬಿಜೆಪಿ ಬಗ್ಗೆ ಏನೇನು ಮಾತಾಡಿದ್ದಾರೆ ಗೊತ್ತಾ ಎಂದು ಪ್ರಶ್ನಿಸಿದರು.

ದೇವೇಗೌಡರು ಮತ್ತು ಕುಮಾರಸ್ವಾಮಿ ಯವರು ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಈಗ ಬಿಜೆಪಿ ಜೊತೆ ಸೇರಿದ್ದಾರೆ. ಇದುವರೆಗೂ ಅವರು ಬಿಜೆಪಿ, RSS ಬಗ್ಗೆ ಏನೇನು ಮಾತಾಡಿದ್ದಾರೆ ಎನ್ನುವುದನ್ನು ನೆನಪಿಸಿಕೊಳ್ಳಲಿ ಎಂದರು.

ನಾನು ಜೆಡಿಎಸ್ ಅಧ್ಯಕ್ಷನಾಗಿದ್ದಾಗ 59 ಸೀಟು ಗೆದ್ದಿದ್ದ ಜೆಡಿಎಸ್ ಆ ನಂತರ ಅಷ್ಟು ಸೀಟು ಗೆಲ್ಲಲೇ ಇಲ್ಲ. 19ಕ್ಕೆ ಇಳಿದಿದ್ದಾರೆ ಎಂದು ಟೀಕಿಸಿದರು.

ರಾಜ್ಯದಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಕಾಂಗ್ರೆಸ್ ಸಹಕರಿಸುತ್ತಿಲ್ಲ ಎನ್ನುವ ಕುಮಾರಸ್ವಾಮಿ ಅವರ ಮಾತಿಗೆ ಪ್ರತಿಕ್ರಿಯಿಸಿ, “ಕೊಟ್ಟ ಕುದುರೆಯನ್ನು ಏರದವನು ವೀರನೂ ಅಲ್ಲ, ಶೂರನೂ ಅಲ್ಲ” ಎಂದು ವ್ಯಂಗ್ಯವಾಡಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

1 hour ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

1 hour ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

1 hour ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

1 hour ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

1 hour ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

4 hours ago