ರಾಜ್ಯ

ಗ್ಯಾಂಗ್ರಿನ್‌ನಿಂದ ಬಳಲುತ್ತಿದ್ದ ಬಾಲಣ್ಣ ಆನೆಯ ಕಿವಿ ಕತ್ತರಿಸಿದ ವೈದ್ಯರು

ಶಿವಮೊಗ್ಗ: ಶಿವಮೊಗ್ಗದ ಸಕ್ರೆಬೈಲು ಆನೆ ಶಿಬಿರದ ಬಾಲಣ್ಣ ಆನೆ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಅದರ ಬಲಕಿವಿಯಲ್ಲಿ ಗ್ಯಾಂಗ್ರಿನ್‌ ಸೋಂಕು ಉಂಟಾಗಿದೆ. ಇದರಿಂದಾಗಿ ವೈದ್ಯರು ಆನೆಯ ಕಿವಿ ಕತ್ತರಿಸಿ ತೆಗೆದು ಚಿಕಿತ್ಸೆ ನೀಡುತ್ತಿದ್ದಾರೆ.

ಗ್ಯಾಂಗ್ರಿನ್‌ನಿಂದಾಗಿ ಬಾಲಣ್ಣ ಆನೆಯ ಬಲ ಕಿವಿ ಸಂಪೂರ್ಣ ಕಪ್ಪಗಾಗಿ ಕ್ಯೂ ಸೋರುತ್ತಿತ್ತು. ಈ ಹಿನ್ನೆಲೆಯಲ್ಲಿ ಗ್ಯಾಂಗ್ರಿನ್‌ ಸೋಂಕಿನಿಂದಾಗಿ ಕಿವಿಯ ಭಾಗವನ್ನು ವೈದ್ಯರು ಕತ್ತರಿಸಿ ತೆಗೆದಿದ್ದಾರೆ.

ಇದನ್ನು ಓದಿ: ಅನಾರೋಗ್ಯಕ್ಕೀಡಾಗಿದ್ದ ಹುಲಿ ಸೆರೆ: ಚಿಕಿತ್ಸೆಗಾಗಿ ಮೈಸೂರಿನ ಮೃಗಾಲಯಕ್ಕೆ

ಈ ಹಿನ್ನೆಲೆಯಲ್ಲಿ ಆನೆಗೆ ತುರ್ತು ಚಿಕಿತ್ಸೆ ನೀಡಲು ಬೆಂಗಳೂರಿನಿಂದ ಸಕ್ರೆಬೈಲು ಆನೆ ಶಿಬಿರಕ್ಕೆ ಬಂದಿದ್ದ ಡಾ.ಬೆಟ್ಟಿಯಷ್ಟ, ಡಾ.ರಮೇಶ್‌ ಸೇರಿದಂತೆ ಐವರು ವೈದ್ಯರ ತಂಡ, ಆನೆ ಆರೋಗ್ಯ ತಪಾಸಣೆ ನಡೆಸಿ ಚಿಕಿತ್ಸೆ ಆರಂಭಿಸಿದ್ದಾರೆ.

ಬಾಲಣ್ಣ ಆನೆಗೆ ಸೋಂಕು ತೀವ್ರವಾಗಿತ್ತು. ಅಲ್ಲದೇ ಗ್ಯಾಂಗ್ರಿನ್‌ ಆನೆ ದೇಹದ ಇತರ ಭಾಗಗಳಿಗೆ ಹರಡುವುದನ್ನು ತಡೆಯಲು ಆನೆಯ ಬಲಕಿವಿಯನ್ನು ಕತ್ತರಿಸಿ ತೆಗೆಯಲಾಗಿದೆ.

ಆಂದೋಲನ ಡೆಸ್ಕ್

Recent Posts

ಕಾವೇರಿ ಕೊಳ್ಳದ ರೈತರಿಗೆ 4 ಕಟ್ಟು ನೀರು ; ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…

51 mins ago

ಮೈಸೂರು | ಭಾರತ್ ಜೋಡೋ ನೋಂದಣಿಗೆ ಚಾಲನೆ

ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…

1 hour ago

ಎಂಡಿಎ ಬದಲಿ ನಿವೇಶನ ಹಂಚಿಕೆ ರದ್ದುಪಡಿಸಿ ಸರ್ಕಾರ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…

2 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…

5 hours ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…

7 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

8 hours ago