darshan
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ದರ್ಶನ್ಗೆ ಬೆನ್ನುನೋವು ಮಾಯವಾಯ್ತಾ ಎಂಬ ಕುತೂಹಲ ಮನೆ ಮಾಡಿದೆ.
ದರ್ಶನ್ ಬೆನ್ನುನೋವಿಗೆ ಫಿಸಿಯೊಥೆರಪಿ ಬೇಕಿಲ್ಲ ಎಂದು ಸಿ.ವಿ.ರಾಮನ್ ಆಸ್ಪತ್ರೆ ವೈದ್ಯರ ತಂಡದಿಂದ ಜೈಲಾಧಿಕಾರಿಗಳಿಗೆ ವರದಿ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ: ಜನವರಿಗೆ ಚಾ.ಬೆಟ್ಟದ ಅಭಿವೃದ್ಧಿ ಕಾಮಗಾರಿ ಶುರು
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೊದಲ ಬಾರಿಗೆ ಜೈಲು ಸೇರಿದ್ದಾಗ ದರ್ಶನ್ ಇದೇ ವಿಷಯದಲ್ಲಿ ಜಾಮೀನು ಪಡೆದಿದ್ದರು. 2ನೇ ಬಾರಿ ದರ್ಶನ್ ಪರಪ್ಪನ ಅಗ್ರಹಾರ ಸೇರಿದಾಗಲೂ ದರ್ಶನ್ ಅದೇ ಸಮಸ್ತೆ ಹೇಳಿದ್ದರು. ಆದರೆ ಜಾಮೀನಿಗೆ ಒಪ್ಪದ ಕೋರ್ಟ್ ಜೈಲಿನಲ್ಲೇ ಚಿಕಿತ್ಸೆ ಪಡೆಯಲು ಸೂಚನೆ ನೀಡಿತ್ತು.
ಅದರಂತೆ ಆಸ್ಪತ್ರೆಯ ನಾಲ್ವರು ವೈದ್ಯರ ತಂಡ ಪಿಸಿಯೋಥೆರಪಿ ಮಾಡುತ್ತಿದ್ದರು. ಈಗ ತಪಾಸಣೆ ಬಳಿಕ ವರದಿ ಸಲ್ಲಿಸಿರುವ ವೈದ್ಯರ ತಂಡ ದರ್ಶನ್ಗೆ ಫಿಸಿಯೋಥೆರಪಿ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ಎರಡನೇ ಬಾರಿ ಜೈಲು ಸೇರಿದ ಬಳಿಕ ದರ್ಶನ್ 10ರಿಂದ 12 ಕೆಜಿ ತೂಕ ಕಳೆದುಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…
ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…
ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…
ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…
ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…