ರಾಜ್ಯ

ದಾಖಲೆ ಕಳವು ಆರೋಪ: ಐಜಿಪಿ ರೂಪಾ ವಿರುದ್ಧ ಸಿಎಸ್‌ಗೆ ದೂರು ನೀಡಿದ ಡಿಐಜಿ ವರ್ತಿಕಾ ಕಟಿಯಾರ್‌

ಬೆಂಗಳೂರು: ಪೊಲೀಸ್‌ ಇಲಾಖೆಯೂ ಒಂದು ಶಿಸ್ತಿನ ಇಲಾಖೆಯಾಗಿದ್ದು, ಸಮಾಜಕ್ಕೆ ಮಾದರಿಯಾಗುವಂತೆ ಆಡಳಿತ ನಡೆಸಬೇಕು. ಆದರೆ ಈ ಇಲಾಖೆಯೂ ಇದೀಗ ಮಹಿಳಾ ಅಧಿಕಾರಿಗಳ ಜಟಾಪಟಿ ಅಖಾಡವಾಗಿದ್ದು, ಐಜಿಪಿ ರೂಪಾ ಮೌದ್ಗಿಲ್‌ ವಿರುದ್ಧ ಡಿಐಜಿ ವರ್ತಿಕಾ ಕಟಿಯಾರ್‌ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ದೂರು ನೀಡಿದ್ದಾರೆ.

ಕೆಲ ದಿನಗಳ ಹಿಂದೆ ಇವರಿಬ್ಬರು ಹಿರಿಯ ಅಧಿಕಾರಿಗಳ ಮುಂದೆಯೇ ಸಭೆ ಕೊಠಡಿಯಲ್ಲಿ ಗಲಭೆ ಮಾಡಿಕೊಂಡು ಸುದ್ದಿಯಾಗಿದ್ದರು. ಆದರೆ ಈಗ ಆ ಗಲಭೆ ಒಂದು ಹಂತ ಮುಂದಕ್ಕೆ ಹೋಗಿದ್ದು, ಐಜಿಪಿ ರೂಪಾ ವಿರುದ್ಧ ರಾಜ್ಯ ಸರ್ಕಾರದ ಸಿಎಸ್‌ ಶಾಲಿನಿ ರಜನೀಶ್‌ ಅವರಿಗೆ ದಾಖಲೆ ಕಳವು ಆರೋಪದ ಮೇಲೆ ವರ್ತಿಕಾ ಅವರು ದೂರು ದಾಖಲಿಸಿದ್ದಾರೆ.

ಇನ್ನು ರೂಪಾ ಅವರು ತಮ್ಮ ಕೊಠಡಿಯಲ್ಲಿ ಕೆಳಹಂತದ ಸಿಬ್ಬಂದಿ ಬಳಸಿಕೊಂಡು ದಾಖಲೆ ಕಳವು ಮಾಡಿಸಿದ್ದಾರೆ. ಆ ದಾಖಲೆಗಳನ್ನು ನಕಲಿ ಮಾಡಿ ನನ್ನ ವಿರುದ್ಧ ಷಡ್ಯಂತ್ರ ಹೇರುವ ಸಾಧ್ಯತೆ ಇದೆ ಎಂದು ವರ್ತಿಕಾ ಆರೋಪಿಸಿದ್ದಾರೆ.

ಡಿಜಿಪಿ ವರ್ತಿಕಾ ಕಟಿಯಾರ್‌ ದೂರಿನಲ್ಲಿ ಏನಿದೆ?

ಐಜಿಪಿ ರೂಪಾ ಅವರು ತಮ್ಮ ಕಚೇರಿಗೆ ಕೆಳಹಂತದ ಮೂವರು ಅಧಿಕಾರಿಗಳನ್ನು (ಮಲ್ಲಿಕಾರ್ಜುನ್, ಮಂಜುನಾಥ್ ಹಾಗೂ ಕಿರಣ್) ಬಳಸಿ ದಾಖಲೆಗಳನ್ನ ಕಳವು ಮಾಡಿಸಿದ್ದಾರೆ. ಅಲ್ಲದೇ ವಾಟ್ಸ್‌ಆಪ್‌ ಮೂಲಕ ಫೋಟೋ ತೆಗೆಸಿದ್ದು, ಕಂಟ್ರೋಲ್‌ ರೂಮ್‌ನಿಂದ ಕೀ ತಂದು ಕೊಠಡಿ ತೆರೆಯಲಾಗಿದೆ. ದುರುದ್ದೇಶದಿಂದಲೇ ಈ ಫೋಟೋ ತೆಗೆಸಲಾಗಿದ್ದು, ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ ಎಂದು ಆರೋಪಿಸಿ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

24 mins ago

ಮುಂದುವರಿದ ಕಾವೇರಿ ಕಿಚ್ಚು: ಆಗಸ್ಟ್.‌13ರಂದು ಕರ್ನಾಟಕ ಬಂದ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…

32 mins ago

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

38 mins ago

ಮೂರನೇ ಆಷಾಢ ಶುಕ್ರವಾರದ ಸಂಭ್ರಮ: ನಾಡದೇವಿಗೆ ಗಜಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…

1 hour ago

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

10 hours ago

ಓದುಗರ ಪತ್ರ: ಸಿಜೆಪಿ ಯಾವುದೇ ಪಕ್ಷದ ಬಾಲಂಗೋಚಿಯಾಗದಿರಲಿ

ಪರೀಕ್ಷೆಗಳ ಅಕ್ರಮ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟುಹಿಡಿದು ಕಾಕ್ರೋಚ್ ಜನತಾ ಪಕ್ಷ ನಡೆಸಿದ ಚಳವಳಿ ತನ್ನ…

10 hours ago