ಬೆಂಗಳೂರು: ಇಂದು ಊಹಾ ಪತ್ರಿಕೋದ್ಯಮ ವ್ಯಾಪಕವಾಗುತ್ತಿದೆ. ಇದು ಅಪಾಯಕಾರಿ. ಇಂತಹ ಊಹಾ ಪತ್ರಿಕೋದ್ಯಮ ಸಮಾಜಕ್ಕೆ ಬೇಕಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.
ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಕೊಡಮಾಡುವ 2024ನೇ ಸಾಲಿನ ವರ್ಷದ ವ್ಯಕ್ತಿ, ವಿಶೇಷ ಪ್ರಶಸ್ತಿ, ಸುವರ್ಣ ಮಹೋತ್ಸವ ಪ್ರಶಸ್ತಿ ಹಾಗೂ ವಾರ್ಷಿಕ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಅವರು ಮಾತನಾಡಿದರು.
ಊಹಾ ಪತ್ರಿಕೋದ್ಯಮ ಸಮಾಜಕ್ಕೆ ಮಾರಕ. ನಾನು ಇವತ್ತಿನವರೆಗೂ ಯಾವ ಮಾಧ್ಯಮದವರಿಗೂ ಯಾಕೆ ಹೀಗೆ ಬರಿದ್ರಿ ಅಂತ ಕೇಳಿಲ್ಲ. ಆದರೆ ನೀವು ಜನರ ಧ್ವನಿಯಾಗಿ ಕೆಲಸ ಮಾಡಬೇಕು. ಸಾಧ್ಯವಾದರೆ ಸತ್ಯ ಬರೆಯೋಕೆ ಪ್ರಯತ್ನಪಡಿ ಎಂದು ಹೇಳಿದರು.
ಕಾರು ಮೇಲೆ ಕಾಗೆ ಕೂತಿದ್ದಕ್ಕೆ ಜ್ಯೋತಿಷಿ ಕರೆಸಿದ್ರಿ?
ಮನಸಾಕ್ಷಿಗೆ ತಕ್ಕಂತೆ ಮಾಧ್ಯಮಗಳು ವರದಿ ಮಾಡಿದರೆ ಸಮಾಜಕ್ಕೆ ಅದಕ್ಕಿಂತ ದೊಡ್ಡ ಸೇವೆ ಇಲ್ಲ. ಸುದ್ದಿಗಳನ್ನು ವೈಭವೀಕರಿಸುವುದು, ಮೂಡ ನಂಬಿಕೆಗಳನ್ನು ಬೆಂಬಲಿಸೋಕೆ ಹೋಗಬೇಡಿ. ನನ್ನ ಕಾರು ಮೇಲೆ ಕಾಗೆ ಕುಳಿತಿದ್ದಕ್ಕೆ ಜ್ಯೋತಿಷಿಗಳನ್ನು ಚಾನಲ್ ಗಳಿಗೆ ಕರೆಸಿ ಏನೆಲ್ಲಾ ಹೇಳಿಸಿದಿರಿ. ನಾನು 5 ವರ್ಷ ಮುಖ್ಯಮಂತ್ರಿಯಾಗಿ ಪೂರ್ಣಗೊಳಿಸಲ್ಲ ಎಂದು ತೋರಿಸಿದಿರಿ. ಆದರೆ ನಾನು ಐದು ವರ್ಷ ಪೂರೈಸಿ ಎರಡನೇ ಬಾರಿ ಸಿಎಂ ಆದೆ. ಈಗ ಹೇಳಿ ಕಾಗೆ ಸುದ್ದಿಯಿಂದ ಮಾಧ್ಯಮಗಳ ವಿಶ್ವಾಸಾರ್ಹತೆ ಕಡಿಮೆ ಆಯ್ತೋ ಇಲ್ವೋ ಎಂದು ಪ್ರಶ್ನಿಸಿದರು.
ನಾವು ಜನಪರ ಕೆಲಸ ಮಾಡದಿದ್ದಾಗ, ಕೊಟ್ಟ ಮಾತು ಈಡೇರಿಸದಿದ್ದಾಗ ಅದನ್ನು ಬರೆದು ಜನರ ಕಣ್ಣು ತೆರೆಸುವ ಹಕ್ಕು ಜವಾಬ್ದಾರಿ ಮಾಧ್ಯಮದವರ ಮೇಲಿದೆ. ಅದನ್ನು ನಿಭಾಯಿಸಿ ಎಂದು ಕರೆ ನೀಡಿದರು.
ನಾವು ಊಟಕ್ಕೆ ಸೇರಿ ಏನೋ ಮಾತಾಡಿರ್ತೀವಿ. ಆದರೆ ಮಾಧ್ಯಮಗಳೇ ಡೈಲಾಗ್ ಬರೆದು ಬಿಡ್ತಾರೆ. ನಮಗೆ ಗೊತ್ತೇ ಇರದ ವಿಷಯವನ್ನು ಅವರೇ ಡೈಲಾಗ್ ಬರೆದು ತೋರಿಸಿದ್ದಾರೆ ಎಂದು ಟೀಕಿಸಿದರು.
ಎಲ್ಲಾ ಆರೋಗ್ಯಕರ ಟೀಕೆಗಳನ್ನು ಸ್ವಾಗತಿಸುತ್ತೇನೆ. ತಿದ್ದಿಕೊಳ್ಳುತ್ತೇನೆ. ಆದರೆ ರಾಜಕೀಯ ಕಾರಣಕ್ಕೆ ಸುಳ್ಳು ಸುಳ್ಳೇ ಟೀಕಿಸಿದರೆ ಐ ಡೋಂಟ್ ಕೇರ್ ಖಡಕ್ ಆಗಿ ನುಡಿದರು.
ನಮ್ಮ ಗ್ಯಾರಂಟಿ ಕಾಪಿ ಮಾಡಿದ ಬಿಜೆಪಿ
ನಮ್ಮ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿದ್ದ ಬಿಜೆಪಿಯವರೇ ನಮ್ಮ ಗ್ಯಾರಂಟಿಗಳನ್ನು ಕಾಪಿ ಮಾಡಿದ್ದಾರೆ. ನಮ್ಮ ಗ್ಯಾರಂಟಿಗಳನ್ನು ಬೇರೆ ಹೆಸರಲ್ಲಿ ಅವರು ಘೋಷಿಸಿದ್ದಾರೆ. ಆದರೂ ಮಹಾರಾಷ್ಟ್ರ ಚುನಾವಣೆ ವೇಳೆ ಕರ್ನಾಟಕದಲ್ಲಿ ಗ್ಯಾರಂಟಿಗಳು ಜಾರಿಯೇ ಆಗಿಲ್ಲ ಎಂದು ಸುಳ್ಳು ಜಾಹಿರಾತು ನೀಡಿದರು ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದರು.
ಬುದ್ದ, ಬಸವ, ಅಂಬೇಡ್ಕರ್ ಹೇಳಿದ ಸಮ ಸಮಾಜದ ಆಶಯ ಈಡೇರಿಸುವ ದಿಕ್ಕಿನಲ್ಲಿ ವೃತ್ತಿಪರತೆ ನಿರ್ವಹಿಸಿದರೆ ಅದು ಸಮಾಜಕ್ಕೆ ಉಪಯೋಗವಾಗುತ್ತದೆ ಎಂದು ಎಲ್ಲಾ ಪ್ರಶಸ್ತಿ ಪುರಸ್ಕೃತರಿಗೆ ಇದೇ ವೇಳೆ ಶುಭ ಹಾರೈಸಿದರು.
ಪ್ರಶಸ್ತಿ ಪುರಸ್ಕೃತರು ಇನ್ನಷ್ಟು ಜನಮುಖಿಯಾಗಿ ಕರ್ತವ್ಯ ನಿರ್ವಹಿಸಿ ಎಂದರು.
ವರ್ಷದ ವ್ಯಕ್ತಿ ಪ್ರಶಸ್ತಿ ಪುರಸ್ಕೃತರಾದ ಸಚಿವ ಎಂ.ಬಿ.ಪಾಟೀಲ್, ಸನ್ಮಾನಿತರಾದ ಸಚಿವರುಗಳಾದ ಲಕ್ಷ್ಮೀ ಹೆಬ್ಬಾಳ್ಕರ್, ಕೆ.ಜೆ.ಜಾರ್ಜ್, ಕೆ.ಹೆಚ್.ಮುನಿಯಪ್ಪ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್, ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೆಷಾ ಖಾನುಂ, ಸಚಿವ ಜಮೀರ್ ಅಹಮದ್ ಖಾನ್ ಅವರ ಮಾಧ್ಯಮ ಸಂಯೋಜಕ ಲಕ್ಷ್ಮೀನಾರಾಯಣ್, ಚಲನ ಚಿತ್ರ ಅಕಾಡೆಮಿ ಅಧ್ಯಕ್ಷ ಸಾಧು ಕೋಕಿಲಾ ಅವರು ಉಪಸ್ಥಿತರಿದ್ದರು.
ಮಡಿಕೇರಿ: ರಾಜ್ಯದಲ್ಲಿ ಮಳೆಯ ನಡುವೆಯೇ ವಾಯು ಗುಣಮಟ್ಟದಲ್ಲಿ ಬದಲಾವಣೆ ಕಂಡಿದ್ದು, ಬೆಂಗಳೂರಿನಲ್ಲಿ ಇಂದು 75 AQI ನೊಂದಿಗೆ ಸಾಧಾರಣ ಗಾಳಿ…
ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಸಾಧನೆಯನ್ನು ಸೂಪರ್ ಸ್ಟಾರ್ ರಜನಿಕಾಂತ್ ಮನಬಿಚ್ಚಿ ಹೊಗಳಿದ್ದಾರೆ. ಚನ್ನೈನ ತಮ್ಮ ನಿವಾಸದಲ್ಲಿ…
ಇಂದೋರ್ : ಕೇರಳದ ತಿರುವನಂತಪುರಂನಿಂದ ದೆಹಲಿಗೆ ತೆರಳುತ್ತಿದ್ದ ರಾಜಧಾನಿ ಎಕ್ಸ್ಪ್ರೆಸ್ ರೈಲಿನ ಎಸಿ ಕೋಚ್ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಭಾನುವಾರ…
ಬದಲಾವಣೆ ಎನ್ನುವುದು ಜಗದ ನಿಯಮ ಎನ್ನುವ ನಾಣ್ಣುಡಿ ಈಗ ರಾಜಕೀಯ ರಂಗದಲ್ಲಿ ನಿರಂತರವಾಗಿ ನಡೆಯುತ್ತಲೇ ಇದೆ. ಪಶ್ಚಿಮ ಬಂಗಾಳ, ತಮಿಳುನಾಡು…
ಚಂದ್ರಶೇಖರ್ ಮೂರ್ತಿ.ಕೆ.ಎಸ್ ಟೀ ಅಂದರೆ ಬೇರೆ, ಚಹ ಅಂದರೆ ಬೇರೆ ಎಂದು ಹೇಳಿ ಚಕಿತಗೊಳಿಸಿದವರು ಮೈಸೂರಿನ ವಿಜಯನಗರ ಎರಡನೇ ಹಂತದಲ್ಲಿ…
ಸಿರಿ ಮೈಸೂರು ಇದು ಬೇಸಿಗೆ ಕಾಲ. ಕೆಲ ದಿನಗಳ ಹಿಂದಷ್ಟೇ ಫ್ರಾನ್ಸ್ನಲ್ಲಿ ಕ್ಯಾನ್ಸ್ ಫಿಲಂ ಫೆಸ್ಟಿವಲ್ ನಡೆಯಿತು. ಜಗತ್ತಿನಾದ್ಯಂತದಿಂದ ಸುರಸುಂದರ…