ರಾಜ್ಯ

ಕುರಿ, ಕೋಳಿ, ವಾಚು, ಉಂಗುರ, ಚಿನ್ನ ಎಷ್ಟಿವೆ ಎಂಬ ಮಾಹಿತಿ ಕೇಳಬೇಡಿ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗದ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನು ವಿರೋಧಿಸುವುದರಲ್ಲಿ ಅರ್ಥವಿಲ್ಲ, ಎಲ್ಲರೂ ಅಗತ್ಯ ಮಾಹಿತಿ ನೀಡುವುದು ಸೂಕ್ತ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಲಹೆ ನೀಡಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವ ವಿ.ಸೋಮಣ್ಣ ಸೇರಿದಂತೆ ಯಾರು ಬೇಕಾದರೂ ಆಕ್ಷೇಪ ವ್ಯಕ್ತಪಡಿಸಬಹುದು, ಅಪೇಕ್ಷೆಯನ್ನೂ ಪಡಬಹುದು. ಆದರೆ ಸಮೀಕ್ಷೆಯಂತೂ ನಡೆಯುತ್ತದೆ ಎಂದರು.

ಈ ಹಿಂದೆ ನಡೆದಿದ್ದಂತಹ ಸಮೀಕ್ಷೆ ಸರಿಯಿಲ್ಲ ಎಂದು ಹೇಳಿದ್ದಕ್ಕಾಗಿಯೇ ನಮ್ಮ ಸರ್ಕಾರ ಹೊಸದಾಗಿ ಸಮೀಕ್ಷೆ ನಡೆಸುತ್ತಿದೆ. ಈಗಲೂ ವಿರೋಧ ಮಾಡುವುದು ಅರ್ಥಹೀನ ಎಂದು ತಿರುಗೇಟು ನೀಡಿದರು.

ಇದನ್ನೂ ಓದಿ:-ನನ್ನ ಒಬ್ಬನಿಗೆ ಸಮೀಕ್ಷೆ ಮಾಡಲು ಇಷ್ಟೊಂದು ಜನರು ಬೇಕಾ?: ಸಚಿವ ವಿ.ಸೋಮಣ್ಣ ಕ್ಲಾಸ್‌

ಸಮೀಕ್ಷೆಯಲ್ಲಿ ಕೆಲವು ಖಾಸಗಿ ಮಾಹಿತಿಯ ಪ್ರಶ್ನೆಗಳಿವೆ. ಅವುಗಳಿಗೆ ಉತ್ತರ ನೀಡಬೇಕಿಲ್ಲ. ನ್ಯಾಯಾಲಯ ಕೂಡ ಈ ವಿಚಾರವನ್ನು ಸ್ಪಷ್ಟ ಪಡಿಸಿದೆ. ಕುರಿ, ಕೋಳಿ ಬಗ್ಗೆ, ವಾಚು, ಉಂಗುರ, ಫ್ರಿಡ್ಜ್, ಚಿನ್ನ ಎಷ್ಟಿವೆ ಎಂಬ ಬಗ್ಗೆ ಮಾಹಿತಿ ಕೇಳಬೇಡಿ, ಅವೆಲ್ಲಾ ಖಾಸಗಿ ವಿಚಾರ ಎಂದು ಅಧಿಕಾರಿಗಳಿಗೆ ನಾನು ಕೂಡ ಸೂಚನೆ ನೀಡಿದ್ದೇನೆ. ಅವರು ಯಾವ ರೀತಿ ಪರಿಗಣಿಸುತ್ತಾರೋ ಗೊತ್ತಿಲ್ಲ ಎಂದರು.‌

ಹೊಸದಾಗಿ ನಡೆಯುತ್ತಿರುವ ಸಮೀಕ್ಷೆಯಲ್ಲಿ ಎಲ್ಲರೂ ಭಾಗವಹಿಸಬೇಕು. ನಿಗದಿತ ಅವಧಿಯಲ್ಲಿ ಸಮೀಕ್ಷೆ ಮುಗಿಯದಿದ್ದರೆ ಸಮಯ ವಿಸ್ತರಣೆಯ ಬಗ್ಗೆ ನಾನು ಉತ್ತರ ನೀಡಲು ಸಾಧ್ಯವಾಗುವುದಿಲ್ಲ. ಆಯೋಗ ಮತ್ತು ಇಲಾಖೆ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಆಂದೋಲನ ಡೆಸ್ಕ್

Recent Posts

ಖ್ಯಾತ ಗಾಯಕಿ ಎಸ್.ಜಾನಕಿ ನಿಧನ

ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…

7 hours ago

ಗುಂಡ್ಲುಪೇಟೆ: ಮನೆಯೊಳಗೆ ನುಗ್ಗಿದ್ದ ನಾಗರಹಾವಿನ ರಕ್ಷಣೆ

ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…

10 hours ago

ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ

ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…

11 hours ago

ಹನೂರು: ಹುಚ್ಚು ನಾಯಿ ದಾಳಿಗೆ ಹಲವರು ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…

12 hours ago

ರೀಲ್ಸ್‌ಗಾಗಿ ಡ್ರಿಫ್ಟಿಂಗ್:‌ ಜಾನುವಾರುಗಳ ಮೇವನ್ನು ಮಣ್ಣುಪಾಲು ಮಾಡಿದ ಪ್ರವಾಸಿಗರು

ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್‌ಗಾಗಿ ಥಾರ್‌ ಕಾರನ್ನು ಡ್ರಿಫ್ಟಿಂಗ್‌ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…

12 hours ago

ವಿಯೆಟ್ನಾಂ ದ್ವೀಪದಲ್ಲಿ 32 ಭಾರತೀಯ ಪ್ರವಾಸಿಗರಿದ್ದ ಬೋಟ್‌ ಮುಳುಗಡೆ: 15 ಮಂದಿ ಸಾವು

ಹನೋಯ್:‌ ವಿಯೆಟ್ನಾಂ ಫು ಕ್ವಾಕ್‌ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್‌ ಬೋಟ್‌ ಮುಳುಗಡೆಯಾಗಿದ್ದು, ಕನಿಷ್ಠ…

13 hours ago