DCM DK Shivakumar
ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗದ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನು ವಿರೋಧಿಸುವುದರಲ್ಲಿ ಅರ್ಥವಿಲ್ಲ, ಎಲ್ಲರೂ ಅಗತ್ಯ ಮಾಹಿತಿ ನೀಡುವುದು ಸೂಕ್ತ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಲಹೆ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವ ವಿ.ಸೋಮಣ್ಣ ಸೇರಿದಂತೆ ಯಾರು ಬೇಕಾದರೂ ಆಕ್ಷೇಪ ವ್ಯಕ್ತಪಡಿಸಬಹುದು, ಅಪೇಕ್ಷೆಯನ್ನೂ ಪಡಬಹುದು. ಆದರೆ ಸಮೀಕ್ಷೆಯಂತೂ ನಡೆಯುತ್ತದೆ ಎಂದರು.
ಈ ಹಿಂದೆ ನಡೆದಿದ್ದಂತಹ ಸಮೀಕ್ಷೆ ಸರಿಯಿಲ್ಲ ಎಂದು ಹೇಳಿದ್ದಕ್ಕಾಗಿಯೇ ನಮ್ಮ ಸರ್ಕಾರ ಹೊಸದಾಗಿ ಸಮೀಕ್ಷೆ ನಡೆಸುತ್ತಿದೆ. ಈಗಲೂ ವಿರೋಧ ಮಾಡುವುದು ಅರ್ಥಹೀನ ಎಂದು ತಿರುಗೇಟು ನೀಡಿದರು.
ಇದನ್ನೂ ಓದಿ:-ನನ್ನ ಒಬ್ಬನಿಗೆ ಸಮೀಕ್ಷೆ ಮಾಡಲು ಇಷ್ಟೊಂದು ಜನರು ಬೇಕಾ?: ಸಚಿವ ವಿ.ಸೋಮಣ್ಣ ಕ್ಲಾಸ್
ಸಮೀಕ್ಷೆಯಲ್ಲಿ ಕೆಲವು ಖಾಸಗಿ ಮಾಹಿತಿಯ ಪ್ರಶ್ನೆಗಳಿವೆ. ಅವುಗಳಿಗೆ ಉತ್ತರ ನೀಡಬೇಕಿಲ್ಲ. ನ್ಯಾಯಾಲಯ ಕೂಡ ಈ ವಿಚಾರವನ್ನು ಸ್ಪಷ್ಟ ಪಡಿಸಿದೆ. ಕುರಿ, ಕೋಳಿ ಬಗ್ಗೆ, ವಾಚು, ಉಂಗುರ, ಫ್ರಿಡ್ಜ್, ಚಿನ್ನ ಎಷ್ಟಿವೆ ಎಂಬ ಬಗ್ಗೆ ಮಾಹಿತಿ ಕೇಳಬೇಡಿ, ಅವೆಲ್ಲಾ ಖಾಸಗಿ ವಿಚಾರ ಎಂದು ಅಧಿಕಾರಿಗಳಿಗೆ ನಾನು ಕೂಡ ಸೂಚನೆ ನೀಡಿದ್ದೇನೆ. ಅವರು ಯಾವ ರೀತಿ ಪರಿಗಣಿಸುತ್ತಾರೋ ಗೊತ್ತಿಲ್ಲ ಎಂದರು.
ಹೊಸದಾಗಿ ನಡೆಯುತ್ತಿರುವ ಸಮೀಕ್ಷೆಯಲ್ಲಿ ಎಲ್ಲರೂ ಭಾಗವಹಿಸಬೇಕು. ನಿಗದಿತ ಅವಧಿಯಲ್ಲಿ ಸಮೀಕ್ಷೆ ಮುಗಿಯದಿದ್ದರೆ ಸಮಯ ವಿಸ್ತರಣೆಯ ಬಗ್ಗೆ ನಾನು ಉತ್ತರ ನೀಡಲು ಸಾಧ್ಯವಾಗುವುದಿಲ್ಲ. ಆಯೋಗ ಮತ್ತು ಇಲಾಖೆ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ನವದೆಹಲಿ: ಕರ್ನಾಟಕ ಹಾಗೂ ಬಿಹಾರ ವಿಧಾನಪರಿಷತ್ನ ದ್ವೈವಾರ್ಷಿಕ ಚುನಾವಣೆಗೆ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಕರ್ನಾಟಕದ ಏಳು ಸ್ಥಾನಗಳಿಗೆ ದ್ವೈವಾರ್ಷಿಕ…
ಮಂಡ್ಯ: ವಿಜಯ್ ರೀತಿ ತಮಿಳುನಾಡಿನಲ್ಲಿ ನೂರು ಮಂದಿ ಮುಖ್ಯಮಂತ್ರಿಯಾದರೂ ಸಹ ನಾವು ಮೇಕೆದಾಟು ಡ್ಯಾಂ ಕಟ್ಟೋದನ್ನು ತಡೆಯಲು ಸಾಧ್ಯವಿಲ್ಲ ಎಂದು…
ದೇಶದ ಸಾವಿರಾರು ಮಂದಿ ಅಸಂಘಟಿತ ಕಾರ್ಮಿಕರು ಹೊಟ್ಟೆಪಾಡಿಗಾಗಿ ಮಾಡುವ ಉದ್ಯೋಗವೇ ಅವರ ಜೀವಕ್ಕೆ ಮುಳುವಾಗುತ್ತಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ…
ಮೈಸೂರಿನ ಮಾನಸ ಗಂಗೋತ್ರಿಯ ರೌಂಡ್ ಕ್ಯಾಂಟೀನ್ ಕಳೆದ ೫೦ ವರ್ಷಗಳಿಂದ ವಿದ್ಯಾರ್ಥಿಗಳನ್ನು, ಬೋಧಕ -ಬೋಧಕೇತರ ಸಿಬ್ಬಂದಿಗಳನ್ನು ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಇದು…
ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಕೆ.ಪಿ.ಎಸ್. ಶಾಲೆಗಳ ರೂಪರೇಷೆ ಹಾಗೂ ಸರ್ಕಾರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯವಿರುವ…
ಇತ್ತೀಚಿನ ದಿನಗಳಲ್ಲಿ ನಡೆಯುವ ಸಾರ್ವಜನಿಕ ಸಭೆ ಸಮಾರಂಭಗಳು, ವಿಶ್ವವಿದ್ಯಾನಿಲಯ, ಶಾಲಾ ಕಾಲೇಜು ಮೊದಲಾದ ಕಡೆ ನಡೆಯುವ ಚರ್ಚಾಗೋಷ್ಠಿ , ವಿಚಾರಸಂಕಿರಣಗಳಲ್ಲಿ…