ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾಗಿರುವ ವಿಚಾರವನ್ನು ಪದೇ ಪದೇ ಚರ್ಚೆ ಮಾಡೋದು ಬೇಡ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ವಿರುದ್ಧ ದಾಖಲಾಗಿರುವ ಪ್ರಕರಣದ ಬಗ್ಗೆ ಎಐಸಿಸಿ ಅಧ್ಯಕ್ಷರು ಪಕ್ಷದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.
ಈ ವಿಚಾರವಾಗಿ ನಾನು ಈಗಾಗಲೇ ಸಾಕಷ್ಟು ಮಾತನಾಡಿದ್ದೇನೆ. ಮತ್ತೆ ಪದೇ ಪದೇ ಮಾತನಾಡುವುದು ಬೇಡ ಎಂದು ಸಚಿವರಿಗೆ ಕಿವಿಮಾತು ಹೇಳಿದರು.
ಇನ್ನು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್ಐಆರ್ ದಾಖಲಾಗಿರುವ ಬಗ್ಗೆ ಕೇಳಿದಾಗ ಪ್ರತಿಕ್ರಿಯಿಸಿದ ಅವರು, ಯಾರು ದೂರು ನೀಡಿದ್ದಾರೆ, ಯಾವ ಕಾರಣಕ್ಕೆ ನೀಡಿದ್ದಾರೆ ಎಂಬ ಮಾಹಿತಿ ನನಗೆ ಇನ್ನು ಬಂದಿಲ್ಲ. ಅದರ ಬಗ್ಗೆ ಮಾಹಿತಿ ಪಡೆದ ನಂತರ ಎಫ್ಐಆರ್ ಬಗ್ಗೆ ಪ್ರತಿಕ್ರಿಯೆ ನೀಡುತ್ತೇನೆ ಎಂದರು.
ಕೋಲ್ಕತ್ತ : ಟಿ-20 ವಿಶ್ವಕಪ್ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್ಗಳ…
ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್…
ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…
ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…
ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…
ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…