ಬೆಂಗಳೂರು: ಹುಲಿ ವಲಸೆ ಹೆಚ್ಚುತ್ತಿರುವ ವರದಿಗಳನ್ನು ತಜ್ಞರು ಮತ್ತು ಅರಣ್ಯ ಸಿಬ್ಬಂದಿಗಳು ಗಮನಿಸುತ್ತಿದ್ದು, ಕ್ಯಾಮರಾ ಟ್ರ್ಯಾಪ್ಗಳಿಂದ ಸೆರೆ ಹಿಡಿಯುತ್ತಿದ್ದಾರೆ.
ರಾಜ್ಯ ಅರಣ್ಯ ಇಲಾಖೆ ಅಧಿಕಾರಿಗಳು ಈಗ ಸ್ಥಳೀಯರೊಂದಿಗೆ ಕೆಲಸ ಮಾಡುತ್ತಿದ್ದು, ಸುತ್ತುತ್ತಿರುವ ಹುಲಿಗಳಿಂದ ದೂರ ಇರುವಂತೆ ಸಲಹೆ ನೀಡಿದ್ದಾರೆ.
ಸುತ್ತಾಡುವ ಹುಲಿಗಳ ಅಧ್ಯಯನವನ್ನು ಸಹ ಇಲಾಖೆ ಕೈಗೊಂಡಿದೆ. ಮಾನವ ಮತ್ತು ವನ್ಯಜೀವಿಗಳ ಸಂಘರ್ಷದಲ್ಲಿ ಕಾಡು ಪ್ರಾಣಿಗಳ ಸಾವನ್ನು ಕಡಿಮೆ ಮಾಡಲು ಜನರಲ್ಲಿ ಜಾಗೃತಿ ಮೂಡಿಸುತ್ತಿದೆ.
ಪ್ರಾಜೆಕ್ಟ್ ಟೈಗರ್ ಪ್ರಕಾರ, ರಾಜ್ಯದಲ್ಲಿ ಬಂಡೀಪುರ-ನಾಗರಹೊಳೆ, ಬಿಆರ್ಟಿ -ಕಾವೇರಿ-ಎಂಎಂ ಹಿಲ್ಸ್, ಭದ್ರಾ-ಕುದುರೆಮುಖ-ಶಿವಮೊಗ್ಗ-ಚಿಕ್ಕಮಗಳೂರು ಮತ್ತು ಕಾಳಿ, ಬೆಳಗಾವಿ, ಶರಾವತಿ ಹುಲಿ ಸಂರಕ್ಷಿತ ಅರಣ್ಯಗಳಿವೆ. ಇವುಗಳಲ್ಲಿ 75% ಹುಲಿಗಳು ಬಂಡೀಪುರ-ನಾಗರಹೊಳೆ ಹುಲಿ ಮೀಸಲು ಅರಣ್ಯದಲ್ಲಿ ನೆಲೆಸಿವೆ.
ಜಾನುವಾರುಗಳ ಮೇಲೆ ಹುಲಿಗಳು ದಾಳಿ ನಡೆಸುವಾಗ ರೈತರು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಕಿಡಿಕಾರುತ್ತಾರೆ. ಈ ಹಿನ್ನೆಲೆಯಲ್ಲಿ ಹುಲಿಗಳು ಪ್ರಾದೇಶಿಕವಾಗಿದ್ದು, ವಿವಿಧ ಸ್ಥಳಗಳಿಗೆ ತೆರಳಲು ಪ್ರಾರಂಭಿಸಿವೆ. ಹೀಗಾಗಿ ಅದನ್ನು ಪ್ರೋತ್ಸಾಹಿಸಬೇಕಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್ಐಆರ್ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ…
ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ಗೆ ರಾಜ್ಯ ಸರ್ಕಾರ ರಿಲೀಫ್ ನೀಡಿದೆ. ವಾಟಾಳ್ ನಾಗರಾಜ್ ಮೇಲಿನ ಕೇಸ್ಗಳನ್ನು ಸರ್ಕಾರ ಹಿಂಪಡೆಯಲು…
ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್…
ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್ಸ್ಪಾಟ್ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ…
ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.…
ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…