ರಾಜ್ಯ

ಹುಲಿಗಳಿಗೆ ತೊಂದರೆ ಕೊಡಬೇಡಿ: ಅರಣ್ಯದಂಚಿನ ನಿವಾಸಿಗಳಿಗೆ ಸೂಚನೆ

ಬೆಂಗಳೂರು: ಹುಲಿ ವಲಸೆ ಹೆಚ್ಚುತ್ತಿರುವ ವರದಿಗಳನ್ನು ತಜ್ಞರು ಮತ್ತು ಅರಣ್ಯ ಸಿಬ್ಬಂದಿಗಳು ಗಮನಿಸುತ್ತಿದ್ದು, ಕ್ಯಾಮರಾ ಟ್ರ್ಯಾಪ್‌ಗಳಿಂದ ಸೆರೆ ಹಿಡಿಯುತ್ತಿದ್ದಾರೆ.

ರಾಜ್ಯ ಅರಣ್ಯ ಇಲಾಖೆ ಅಧಿಕಾರಿಗಳು ಈಗ ಸ್ಥಳೀಯರೊಂದಿಗೆ ಕೆಲಸ ಮಾಡುತ್ತಿದ್ದು, ಸುತ್ತುತ್ತಿರುವ ಹುಲಿಗಳಿಂದ ದೂರ ಇರುವಂತೆ ಸಲಹೆ ನೀಡಿದ್ದಾರೆ.

ಸುತ್ತಾಡುವ ಹುಲಿಗಳ ಅಧ್ಯಯನವನ್ನು ಸಹ ಇಲಾಖೆ ಕೈಗೊಂಡಿದೆ. ಮಾನವ ಮತ್ತು ವನ್ಯಜೀವಿಗಳ ಸಂಘರ್ಷದಲ್ಲಿ ಕಾಡು ಪ್ರಾಣಿಗಳ ಸಾವನ್ನು ಕಡಿಮೆ ಮಾಡಲು ಜನರಲ್ಲಿ ಜಾಗೃತಿ ಮೂಡಿಸುತ್ತಿದೆ.

ಪ್ರಾಜೆಕ್ಟ್‌ ಟೈಗರ್‌ ಪ್ರಕಾರ, ರಾಜ್ಯದಲ್ಲಿ ಬಂಡೀಪುರ-ನಾಗರಹೊಳೆ, ಬಿಆರ್‌ಟಿ -ಕಾವೇರಿ-ಎಂಎಂ ಹಿಲ್ಸ್‌, ಭದ್ರಾ-ಕುದುರೆಮುಖ-ಶಿವಮೊಗ್ಗ-ಚಿಕ್ಕಮಗಳೂರು ಮತ್ತು ಕಾಳಿ, ಬೆಳಗಾವಿ, ಶರಾವತಿ ಹುಲಿ ಸಂರಕ್ಷಿತ ಅರಣ್ಯಗಳಿವೆ. ಇವುಗಳಲ್ಲಿ 75% ಹುಲಿಗಳು ಬಂಡೀಪುರ-ನಾಗರಹೊಳೆ ಹುಲಿ ಮೀಸಲು ಅರಣ್ಯದಲ್ಲಿ ನೆಲೆಸಿವೆ.

ಜಾನುವಾರುಗಳ ಮೇಲೆ ಹುಲಿಗಳು ದಾಳಿ ನಡೆಸುವಾಗ ರೈತರು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಕಿಡಿಕಾರುತ್ತಾರೆ. ಈ ಹಿನ್ನೆಲೆಯಲ್ಲಿ ಹುಲಿಗಳು ಪ್ರಾದೇಶಿಕವಾಗಿದ್ದು, ವಿವಿಧ ಸ್ಥಳಗಳಿಗೆ ತೆರಳಲು ಪ್ರಾರಂಭಿಸಿವೆ. ಹೀಗಾಗಿ ಅದನ್ನು ಪ್ರೋತ್ಸಾಹಿಸಬೇಕಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

2 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

2 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

2 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

2 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

2 hours ago

ʼಮಣ್ಣಿನ ಗಣಪನಿಗೆ ಮನ್ನಣೆಗೆ ಸಿಗಲಿʼ

ಭಾರತಿ ಸಜ್ಜನ್‌ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…

3 hours ago