ಬೆಂಗಳೂರು: ಹುಲಿ ವಲಸೆ ಹೆಚ್ಚುತ್ತಿರುವ ವರದಿಗಳನ್ನು ತಜ್ಞರು ಮತ್ತು ಅರಣ್ಯ ಸಿಬ್ಬಂದಿಗಳು ಗಮನಿಸುತ್ತಿದ್ದು, ಕ್ಯಾಮರಾ ಟ್ರ್ಯಾಪ್ಗಳಿಂದ ಸೆರೆ ಹಿಡಿಯುತ್ತಿದ್ದಾರೆ.
ರಾಜ್ಯ ಅರಣ್ಯ ಇಲಾಖೆ ಅಧಿಕಾರಿಗಳು ಈಗ ಸ್ಥಳೀಯರೊಂದಿಗೆ ಕೆಲಸ ಮಾಡುತ್ತಿದ್ದು, ಸುತ್ತುತ್ತಿರುವ ಹುಲಿಗಳಿಂದ ದೂರ ಇರುವಂತೆ ಸಲಹೆ ನೀಡಿದ್ದಾರೆ.
ಸುತ್ತಾಡುವ ಹುಲಿಗಳ ಅಧ್ಯಯನವನ್ನು ಸಹ ಇಲಾಖೆ ಕೈಗೊಂಡಿದೆ. ಮಾನವ ಮತ್ತು ವನ್ಯಜೀವಿಗಳ ಸಂಘರ್ಷದಲ್ಲಿ ಕಾಡು ಪ್ರಾಣಿಗಳ ಸಾವನ್ನು ಕಡಿಮೆ ಮಾಡಲು ಜನರಲ್ಲಿ ಜಾಗೃತಿ ಮೂಡಿಸುತ್ತಿದೆ.
ಪ್ರಾಜೆಕ್ಟ್ ಟೈಗರ್ ಪ್ರಕಾರ, ರಾಜ್ಯದಲ್ಲಿ ಬಂಡೀಪುರ-ನಾಗರಹೊಳೆ, ಬಿಆರ್ಟಿ -ಕಾವೇರಿ-ಎಂಎಂ ಹಿಲ್ಸ್, ಭದ್ರಾ-ಕುದುರೆಮುಖ-ಶಿವಮೊಗ್ಗ-ಚಿಕ್ಕಮಗಳೂರು ಮತ್ತು ಕಾಳಿ, ಬೆಳಗಾವಿ, ಶರಾವತಿ ಹುಲಿ ಸಂರಕ್ಷಿತ ಅರಣ್ಯಗಳಿವೆ. ಇವುಗಳಲ್ಲಿ 75% ಹುಲಿಗಳು ಬಂಡೀಪುರ-ನಾಗರಹೊಳೆ ಹುಲಿ ಮೀಸಲು ಅರಣ್ಯದಲ್ಲಿ ನೆಲೆಸಿವೆ.
ಜಾನುವಾರುಗಳ ಮೇಲೆ ಹುಲಿಗಳು ದಾಳಿ ನಡೆಸುವಾಗ ರೈತರು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಕಿಡಿಕಾರುತ್ತಾರೆ. ಈ ಹಿನ್ನೆಲೆಯಲ್ಲಿ ಹುಲಿಗಳು ಪ್ರಾದೇಶಿಕವಾಗಿದ್ದು, ವಿವಿಧ ಸ್ಥಳಗಳಿಗೆ ತೆರಳಲು ಪ್ರಾರಂಭಿಸಿವೆ. ಹೀಗಾಗಿ ಅದನ್ನು ಪ್ರೋತ್ಸಾಹಿಸಬೇಕಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…
ಭಾರತಿ ಸಜ್ಜನ್ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…