ರಾಜ್ಯ

ಸಂವಿಧಾನ, ಪ್ರಜಾಪ್ರಭುತ್ವ ವಿರೋಧಿ ಚಟುವಟಿಕೆಗಳಿಗೆ ಪ್ರಚೋದನೆ ನೀಡಬೇಡಿ: ಎಚ್‌ಡಿಕೆಗೆ ತಿವಿದ ಚೆಲುವರಾಯಸ್ವಾಮಿ

ಮಂಡ್ಯ: ಜವಾಬ್ದಾರಿಯುತ ಪ್ರತಿಪಕ್ಷ ನಾಯಕರಾಗಿರುವ ನೀವು, ಸರ್ಕಾರವನ್ನು ಸರಿ ದಾರಿಯಲ್ಲಿ ಸಾಗುವಂತೆ ನೋಡಿಕೊಳ್ಳಬೇಕೆ ವಿನಃ ಶಾಂತಿ ಕದಡಬಾರದು. ಜಿಲ್ಲೆಯ ಜನರೇ ನಿಮ್ಮನ್ನು ಗೆಲ್ಲಿಸಿ ಆಶಿರ್ವಾದಿಸಿದ್ದಾರೆ. ಆದರೆ ಅದೇ ಜಿಲ್ಲೆಯ ಜನರ ನೆಮ್ಮದಿಯನ್ನು ಎಚ್‌.ಡಿ ಕುಮಾರಸ್ವಾಮಿ ಹಾಳು ಮಾಡಲು ಮುಂದಾಗಿರುವುದು ನೋವು ತಂದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಮಂಡ್ಯ ತಾಲೂಕಿನ ಕೆರಗೋಡಿನಲ್ಲಿ ಹನುಮ ಧ್ವಜ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನೀವು (ಕುಮಾರಸ್ವಾಮಿ) ಸಿಎಂ ಆಗುವುದಕ್ಕೆ ಮಂಡ್ಯ ಜನರ ಆಶೀರ್ವಾದ ಕಾರಣ. ಮುಂದೆ ನಾವು ಸರಿಯಾದ ದಾರಿಯಲ್ಲಿ ಸಾಗದಿದ್ದರೆ ನಮಗೂ ಜನ ಪಾಠ ಕಲಿಸಬಹುದು. ಇದನ್ನು ನೀವು ನೆನಪಿನಲ್ಲಿಟ್ಟುಕೊಳ್ಳಿ. ಅದು ಬಿಟ್ಟು ಸಂವಿಧಾನ, ಪ್ರಜಾಪ್ರಭುತ್ವ ವಿರೋಧಿ ಚಟುವಟಿಕೆಗಳಿಗೆ ಪ್ರಚೋದನೆ ನೀಡಬೇಡಿ. ಜಿಲ್ಲೆಯ ಜನರ ಜೀವನ ಹಾಳುಮಾಡಬೇಡಿ ಎಂದು ಆಕ್ರೋಶ ಹೊರಹಾಕಿದ್ದಾರೆ.

ಕುಮಾರಸ್ವಾಮಿ ಕೇಸರಿ ಶಾಲು ಹಾಕುವ ಬದಲು ನೇರವಾಗಿ ಬಿಜೆಪಿಗೆ ಸೇರ್ಪಡೆಯಾಗಿ. ರೈತರ ಹಸಿರು ಶಾಲು ಬಿಟ್ಟಾಯ್ತು. ಜೆಡಿಎಸ್​ನ ಜಾತ್ಯತೀತತೆಯನ್ನೂ ಬಿಟ್ಟಾಯ್ತು. ಇನ್ನು ಬಿಜೆಪಿಗೆ ಸೇರಿಕೊಳ್ಳಿ. ಎಲ್ಲವನ್ನೂ ಜನ ತೀರ್ಮಾನಿಸಲಿದ್ದಾರೆ ಇಂತಹ ಗಿಮಿಕ್‌ಗೆ ಜನರು ಮರುಳಾಗಲ್ಲ ಎಂದು ಎಚ್‌ಡಿಕೆ ವಿರುದ್ಧ ಚೆಲುವರಾಯಸ್ವಾಮಿ ಕಿಡಿ ಕಾರಿದರು.

ಚುನಾವಣೆ ಗಮನದಲ್ಲಿಟ್ಟುಕೊಂಡು ಕುಮಾರಸ್ವಾಮಿ ಈ ರೀತಿ ಮಾಡುತ್ತಿದ್ದಾರೆ. ಕುಮಾರಸ್ವಾಮಿ ಸಿಂಗಾಪುರದಲ್ಲಿ ಕುಳಿತುಕೊಂಡು ಬಿಜೆಪಿಯನ್ನು ಟೀಕಿಸಿದಷ್ಟು ಬೇರೆ ಯಾರೂ ಟೀಕಿಸಿಲ್ಲ. ಜೆಡಿಎಸ್​ನವರು ಟೀಕೆ‌ಮಾಡಿದಷ್ಟು ಕಾಂಗ್ರೆಸ್ ಕೂಡ ಮಾಡಿಲ್ಲ. ಇದೀಗ ಅವರಿಬ್ಬರೂ (ಜೆಡಿಎಸ್, ಬಿಜೆಪಿ) ಅಸ್ತಿತ್ವ ಉಳಿಸಿಕೊಳ್ಳಲು ಯತ್ನಿಸುತ್ತಿದ್ದಾರೆ. ದೇವೇಗೌಡರೇ ದೇಶ ಬಿಟ್ಟು ಹೋಗುತ್ತೇನೆ ಎಂದಿದ್ದರು ಎಂದು ಚಲುವರಾಯಸ್ವಾಮಿ ಹೇಳಿದರು.

ಕೆರಗೋಡು ಗ್ರಾಮದಲ್ಲಿ ಧರ್ಮದ ಧ್ವಜ ಆರೋಹಣ ಮಾಡಲು ಯಾರು ಪ್ರೇರೇಪಣೆ ಕೊಟ್ಟಿದ್ದಾರೋ ಗೊತ್ತಿಲ್ಲ. ಚುನಾವಣಾ ಸಂದರ್ಭದಲ್ಲಿ ಇದರ ಲಾಭ ಪಡೆಯಲು ಈ ರೀತಿ ಮಾಡಿದ್ದಾರೋ ತಿಳಿಯದು ಎಂದು ಉಸ್ತುವಾರಿ ಸಚಿವರು ಹೇಳಿದ್ದಾರೆ.

ಇನ್ನೂ ಹನುಮಧ್ವಜ ವಿಚಾರವಾಗಿ ಮಂಡ್ಯಕ್ಕೆ ಬಿಜೆಪಿ ನಾಯಕ ಸಿ.ಟಿ ರವಿ ಮತ್ತು ಆರ್‌ ಅಶೋಕ್‌ ಅವರು ಸೋಮವಾರ ಭೇಟಿ ನೀಡಿದ್ದರ ಕುರಿತಾಗಿ ತೀವ್ರ ವಾಗ್ದಾಳಿ ನಡೆಸಿರುವ ಚೆಲುವರಾಯಸ್ವಾಮಿ, ಸಿಟಿ ರವಿ ಅವರು ಪ್ರಜಾಪ್ರಭುತ್ವದ ವಿಚಾರದಲ್ಲಿ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಆರ್‌. ಅಶೋಕ್‌ ಅವರು ಪ್ರತಿ ಪಕ್ಷದ ನಾಯಕನ ಸ್ಥಾನದಲ್ಲಿದ್ದು, ಕ್ಷುಲಕ್ಕ ರಾಜಕಾರಣ ಮಾಡಲು ಮಂಡ್ಯಕ್ಕೆ ಬಂದಿದ್ದರು ಎಂದು ಕಿಡಿಕಾರಿದ್ದಾರೆ.

andolanait

Recent Posts

ಪ್ಯಾಸೆಂಜರ್‌ ಆಟೋದಲ್ಲಿ ಗಾಂಜಾ ಸೊಪ್ಪು ಸಾಗಾಟ: ಆರೋಪಿ ಬಂಧನ

ಮೈಸೂರು: ಪ್ಯಾಸೆಂಜರ್‌ ಆಟೋದಲ್ಲಿ ಗಾಂಜಾ ಸೊಪ್ಪನ್ನು ಸಾಗಿಸುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಇಲವಾಲ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ಯಾಸೆಂಜರ್‌ ಆಟೋದಲ್ಲಿ ಮೈಸೂರಿನಿಂದ…

7 mins ago

ಪದತ್ಯಾಗಕ್ಕೂ ಸಿದ್ಧರಿದ್ದಾರೆ ಸಿದ್ದರಾಮಯ್ಯ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಅಧಿಕಾರಿ ಮುಂದುವರಿಸಲು ಹಾಗೂ ಪದತ್ಯಾಗ ಮಾಡಲು ಸಿದ್ದರಾಮಯ್ಯನವರು ಮಾನಸಿಕವಾಗಿ ಸಿದ್ಧರಾಗಿದ್ದಾರೆ. ಮುಂದೆ ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು ಎನ್ನವುದು…

23 mins ago

ಇಂಡೋನೇಷ್ಯಾದಲ್ಲಿ ಎರಡು ರೈಲುಗಳ ನಡುವೆ ಭೀಕರ ಅಪಘಾತ: 7 ಮಂದಿ ಸಾವು

ಜಕಾರ್ತ: ಇಂಡೋನೇಷ್ಯಾದ ಜಕಾರ್ತಾ ಹೊರವಲಯದಲ್ಲಿ ಎರಡು ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, 81…

50 mins ago

ಓದುಗರ ಪತ್ರ: ರೈತರಿಗೆ ವಿಮಾ ಕಂಪೆನಿಗಳಿಂದಾಗುವ ವಂಚನೆ ತಪ್ಪಿಸಿ

ವಿಮಾ ಕಂಪೆನಿಗಳು ರೈತರ ಬೆಳೆನಷ್ಟ ಪರಿಹಾರದಲ್ಲಿ ವಂಚನೆ ಮಾಡುತ್ತಿವೆ. ಶೇ.೮೦ರಷ್ಟು ರೈತರು ವಿಮೆಯ ಕಂತು ಪಾವತಿಸಿದರೂ, ಬೆಳೆ ನಷ್ಟಕ್ಕೆ ಒಳಗಾದ…

2 hours ago

ಓದುಗರ ಪತ್ರ: ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಿ

ಬಿಸಿಲಿನ ತಾಪ ಹೆಚ್ಚಾಗಿದ್ದು, ರಾಜ್ಯರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೇ ಪ್ರಯಾಣಿಕರು ಬಾಯಾರಿಕೆಯಿಂದ ಬಳಲುವಂತಾಗಿದೆ.…

2 hours ago

ಓದುಗರ ಪತ್ರ: ಶಾಲೆಯಲ್ಲಿ ಪತ್ರಿಕೆ ಓದುವುದು ಕಡ್ಡಾಯ: ಸ್ವಾಗತಾರ್ಹ

ರಾಜ್ಯ ಸರ್ಕಾರವು ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಲ್ಲಿ ಪ್ರತಿದಿನ ಬೆಳಿಗ್ಗೆ ಪ್ರಾರ್ಥನೆಯ ನಂತರ ವಿದ್ಯಾರ್ಥಿಗಳು ಕನ್ನಡ ದಿನಪತ್ರಿಕೆಗಳನ್ನು…

2 hours ago