ರಾಜ್ಯ

ಇತಿಹಾಸದ ಪುಟಗಳನ್ನು ಗಲೀಜು ಮಾಡಲು ಹೋಗಬೇಡಿ: ವಿಜಯೇಂದ್ರ ಕಿಡಿ

ಬೆಂಗಳೂರು: ಕೆಆರ್‌ಎಸ್‌ ಅಣೆಕಟ್ಟು ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಎಚ್.ಸಿ.ಮಹದೇವಪ್ಪ ಅವರು ಮೈಸೂರು ರಾಜಮನೆತನದ ವಿಶೇಷವಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಇತಿಹಾಸವನ್ನು ತಿರುಚಿದ್ದು, ರಾಜವಂಶಸ್ಥರ ಪರಂಪರೆಯನ್ನು ಅಗೌರವಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆರೋಪಿಸಿದ್ದಾರೆ.

ಈ ಕುರಿತು ಸಾಮಾಜಿಕ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಮೊದಲಿನಿಂದಲೂ ಸಿಎಂ ಸಿದ್ದರಾಮಯ್ಯ ರಾಜಮನೆತನದ ಬಗ್ಗೆ ಅಸಡ್ಡೆಯಿಂದ ನಡೆದುಕೊಂಡಿದ್ದಾರೆ. ಇತ್ತೀಚೆಗೆ ನಾಲ್ವಡಿ ಅವರಿಗಿಂತಲೂ ತಮ್ಮ ತಂದೆಯೇ ಮಿಗಿಲು ಎಂದು ಯತೀಂದ್ರ ಹೇಳಿಕೊಂಡಿದ್ದರು. ಇದೀಗ ಸಿಎಂ ಆಪ್ತ ಸಚಿವ ಮದೇವಪ್ಪ ಅವರು ಕನ್ನಂಬಾಡಿ ಕಟ್ಟೆಗೆ ಮೊದಲು ಅಡಿಪಾಯ ಹಾಕಿದ್ದು ಟಿಪ್ಪು ಎಂದು ಹೇಳುವ ಮೂಲಕ ಕನ್ನಂಬಾಡಿ ಕಟ್ಟೆ ನಿರ್ಮಾಣದ ಹಿಂದಿನ ತ್ಯಾಗ-ಪರಿಶ್ರಮದ ಇತಿಹಾಸ ಹಾಗೂ ನಾಲ್ವಡಿಯರುವ ಕೊಡುಗೆಯನ್ನು ಅಪಮಾನಿಸಿದ್ದಾರೆ ಎಂದು ಟೀಕೆ ಮಾಡಿದ್ದಾರೆ.

ಎಚ್.ಸಿ.ಮಹದೇವಪ್ಪ ಅವರೇ ಟಿಪ್ಪು ಸುಲ್ತಾನ್‌ ಕೆಆರ್‌ಎಸ್‌ ಕಟ್ಟಲು ಪ್ರಯತ್ನಿಸಿದ್ದ ಯಾವುದಾದರೂ ದಾಖಲೆ ಇದ್ದರೆ ಬಿಡುಗಡೆ ಮಾಡಿ. ಕನ್ನಂಬಾಡಿ ಕಟ್ಟೆ ನಿರ್ಮಾಣ ಹಂತದ ಪ್ರತಿ ಹೆಜ್ಜೆಯ ಇತಿಹಾಸದ ದಾಖಲೆಗಳನ್ನು ನಾವು ಬಿಡುಗಡೆ ಮಾಡುತ್ತೇವೆ. ಟಿಪ್ಪು ಪರಿಶ್ರಮದ ಬಗ್ಗೆ ನಿಮ್ಮಲ್ಲಿ ಯಾವುದಾದರೂ ದಾಖಲೆಗಳಿದ್ದರೆ ಬಿಡುಗಡೆ ಮಾಡಿ ಎಂದು ಸವಾಲು ಹಾಕಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

2 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

2 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

2 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

2 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

2 hours ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

2 hours ago