ಬಾಗಲಕೋಟೆ: ಯಾವುದೇ ಕಾರಣಕ್ಕೂ ಹಿಂದೂ ದೇವರುಗಳಿಗೆ ಅಪಮಾನ ಮಾಡಬೇಡಿ ಎಂದು ಸಿದ್ದರಾಮಯ್ಯ ವಿರುದ್ಧ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಗರಂ ಆಗಿದ್ದಾರೆ.
ಚೌತಿ ಗಣಪತಿ ಪ್ರಸಾದ ಪರೀಕ್ಷೆ ಮಾಡಿ ವಿತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಂದೂ ದೇವರುಗಳಿಗೆ ಅಪಮಾನ ಮಾಡಬೇಡಿ. ಸಿಎಂಗೆ ಯಾಕೆ ಹಿಂದೂಗಳ ಬಗ್ಗೆ ನಿಕೃಷ್ಟ ಭಾವನೆ ಎಂದು ಪ್ರಶ್ನೆ ಮಾಡಿದರು.
ರಾಜ್ಯ ಮಾತ್ರವಲ್ಲ ದೇಶದ ತುಂಬೆಲ್ಲಾ ಗಣಪತಿ ಕೂರಿಸಲಾಗುತ್ತದೆ. ಕಾಂಗ್ರೆಸ್ ಪಕ್ಷ ಹುಟ್ಟೋಕ್ಕಿಂತ ಮುಂಚೆ ದೇಶದಲ್ಲಿ ಗಣಪತಿ ಕೂರಿಸಲಾಗುತ್ತಿದೆ. ಈಗ ಸರ್ಕಾರ ಹೊಸ ವ್ಯವಸ್ಥೆ ಮಾಡಿದೆ ಎಂದು ಕಿಡಿಕಾರಿದರು.
ಪ್ರಸಾದ ಪರೀಕ್ಷೆ ಮಾಡಿ ನೀಡುವ ಕಾನೂನು ತಂದಿದ್ದಾರೆ. ನೀವು ಮಸೀದಿ, ಚರ್ಚ್ಗಳಲ್ಲಿ ತಿನ್ನುವ ಪದಾರ್ಥಗಳ ಪರೀಕ್ಷೆ ಮಾಡಿದ್ದೀರಾ ಎಂದು ರಾಜ್ಯ ಸರ್ಕಾರಕ್ಕೆ ಪ್ರಶ್ನೆ ಮಾಡಿದರು.
ನಮ್ಮ ದೇಶದ ಇತಿಹಾಸದಲ್ಲಿ ಕರ್ನಾಟಕದ ಈಗಿನ ರಾಜಕಾರಣ ಬಹಳ ಕೀಳುಮಟ್ಟಕ್ಕೆ ಇಳಿದಿದೆ. ಆಡಳಿತ ಪಕ್ಷ ಭ್ರಷ್ಟಾಚಾರ ಮಾಡಿರುವುದಕ್ಕೆ ವಿರೋಧ ಪಕ್ಷ ಆಪಾದನೆ ಮಾಡೋದು ತಪ್ಪಲ್ಲ. ಈಗಿನ ಸರ್ಕಾರದ ಸ್ಥಿತಿ ನೋಡಿದರೆ ನಾವು ಯಾವುದೇ ಕಾರಣಕ್ಕೂ ರಾಜಕಾರಣಕ್ಕೆ ಬರಬಾರದು ಅಂತ ತೀರ್ಮಾನ ಮಾಡುವ ಸ್ಥಿತಿ ಎದುರಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.
ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…
ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…
ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…