ಬಾಗಲಕೋಟೆ: ಯಾವುದೇ ಕಾರಣಕ್ಕೂ ಹಿಂದೂ ದೇವರುಗಳಿಗೆ ಅಪಮಾನ ಮಾಡಬೇಡಿ ಎಂದು ಸಿದ್ದರಾಮಯ್ಯ ವಿರುದ್ಧ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಗರಂ ಆಗಿದ್ದಾರೆ.
ಚೌತಿ ಗಣಪತಿ ಪ್ರಸಾದ ಪರೀಕ್ಷೆ ಮಾಡಿ ವಿತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಂದೂ ದೇವರುಗಳಿಗೆ ಅಪಮಾನ ಮಾಡಬೇಡಿ. ಸಿಎಂಗೆ ಯಾಕೆ ಹಿಂದೂಗಳ ಬಗ್ಗೆ ನಿಕೃಷ್ಟ ಭಾವನೆ ಎಂದು ಪ್ರಶ್ನೆ ಮಾಡಿದರು.
ರಾಜ್ಯ ಮಾತ್ರವಲ್ಲ ದೇಶದ ತುಂಬೆಲ್ಲಾ ಗಣಪತಿ ಕೂರಿಸಲಾಗುತ್ತದೆ. ಕಾಂಗ್ರೆಸ್ ಪಕ್ಷ ಹುಟ್ಟೋಕ್ಕಿಂತ ಮುಂಚೆ ದೇಶದಲ್ಲಿ ಗಣಪತಿ ಕೂರಿಸಲಾಗುತ್ತಿದೆ. ಈಗ ಸರ್ಕಾರ ಹೊಸ ವ್ಯವಸ್ಥೆ ಮಾಡಿದೆ ಎಂದು ಕಿಡಿಕಾರಿದರು.
ಪ್ರಸಾದ ಪರೀಕ್ಷೆ ಮಾಡಿ ನೀಡುವ ಕಾನೂನು ತಂದಿದ್ದಾರೆ. ನೀವು ಮಸೀದಿ, ಚರ್ಚ್ಗಳಲ್ಲಿ ತಿನ್ನುವ ಪದಾರ್ಥಗಳ ಪರೀಕ್ಷೆ ಮಾಡಿದ್ದೀರಾ ಎಂದು ರಾಜ್ಯ ಸರ್ಕಾರಕ್ಕೆ ಪ್ರಶ್ನೆ ಮಾಡಿದರು.
ನಮ್ಮ ದೇಶದ ಇತಿಹಾಸದಲ್ಲಿ ಕರ್ನಾಟಕದ ಈಗಿನ ರಾಜಕಾರಣ ಬಹಳ ಕೀಳುಮಟ್ಟಕ್ಕೆ ಇಳಿದಿದೆ. ಆಡಳಿತ ಪಕ್ಷ ಭ್ರಷ್ಟಾಚಾರ ಮಾಡಿರುವುದಕ್ಕೆ ವಿರೋಧ ಪಕ್ಷ ಆಪಾದನೆ ಮಾಡೋದು ತಪ್ಪಲ್ಲ. ಈಗಿನ ಸರ್ಕಾರದ ಸ್ಥಿತಿ ನೋಡಿದರೆ ನಾವು ಯಾವುದೇ ಕಾರಣಕ್ಕೂ ರಾಜಕಾರಣಕ್ಕೆ ಬರಬಾರದು ಅಂತ ತೀರ್ಮಾನ ಮಾಡುವ ಸ್ಥಿತಿ ಎದುರಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…
ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…
ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…
‘ವೆನ್ ಯು ವಾಂಟ್ ಟು ಡು ಸಮ್ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್ಇಟ್’ ಇದು ಅತ್ಯಂತ ಪ್ರಚಲಿತವಿರುವ…
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…