ಬಾಗಲಕೋಟೆ: ಯಾವುದೇ ಕಾರಣಕ್ಕೂ ಹಿಂದೂ ದೇವರುಗಳಿಗೆ ಅಪಮಾನ ಮಾಡಬೇಡಿ ಎಂದು ಸಿದ್ದರಾಮಯ್ಯ ವಿರುದ್ಧ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಗರಂ ಆಗಿದ್ದಾರೆ.
ಚೌತಿ ಗಣಪತಿ ಪ್ರಸಾದ ಪರೀಕ್ಷೆ ಮಾಡಿ ವಿತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಂದೂ ದೇವರುಗಳಿಗೆ ಅಪಮಾನ ಮಾಡಬೇಡಿ. ಸಿಎಂಗೆ ಯಾಕೆ ಹಿಂದೂಗಳ ಬಗ್ಗೆ ನಿಕೃಷ್ಟ ಭಾವನೆ ಎಂದು ಪ್ರಶ್ನೆ ಮಾಡಿದರು.
ರಾಜ್ಯ ಮಾತ್ರವಲ್ಲ ದೇಶದ ತುಂಬೆಲ್ಲಾ ಗಣಪತಿ ಕೂರಿಸಲಾಗುತ್ತದೆ. ಕಾಂಗ್ರೆಸ್ ಪಕ್ಷ ಹುಟ್ಟೋಕ್ಕಿಂತ ಮುಂಚೆ ದೇಶದಲ್ಲಿ ಗಣಪತಿ ಕೂರಿಸಲಾಗುತ್ತಿದೆ. ಈಗ ಸರ್ಕಾರ ಹೊಸ ವ್ಯವಸ್ಥೆ ಮಾಡಿದೆ ಎಂದು ಕಿಡಿಕಾರಿದರು.
ಪ್ರಸಾದ ಪರೀಕ್ಷೆ ಮಾಡಿ ನೀಡುವ ಕಾನೂನು ತಂದಿದ್ದಾರೆ. ನೀವು ಮಸೀದಿ, ಚರ್ಚ್ಗಳಲ್ಲಿ ತಿನ್ನುವ ಪದಾರ್ಥಗಳ ಪರೀಕ್ಷೆ ಮಾಡಿದ್ದೀರಾ ಎಂದು ರಾಜ್ಯ ಸರ್ಕಾರಕ್ಕೆ ಪ್ರಶ್ನೆ ಮಾಡಿದರು.
ನಮ್ಮ ದೇಶದ ಇತಿಹಾಸದಲ್ಲಿ ಕರ್ನಾಟಕದ ಈಗಿನ ರಾಜಕಾರಣ ಬಹಳ ಕೀಳುಮಟ್ಟಕ್ಕೆ ಇಳಿದಿದೆ. ಆಡಳಿತ ಪಕ್ಷ ಭ್ರಷ್ಟಾಚಾರ ಮಾಡಿರುವುದಕ್ಕೆ ವಿರೋಧ ಪಕ್ಷ ಆಪಾದನೆ ಮಾಡೋದು ತಪ್ಪಲ್ಲ. ಈಗಿನ ಸರ್ಕಾರದ ಸ್ಥಿತಿ ನೋಡಿದರೆ ನಾವು ಯಾವುದೇ ಕಾರಣಕ್ಕೂ ರಾಜಕಾರಣಕ್ಕೆ ಬರಬಾರದು ಅಂತ ತೀರ್ಮಾನ ಮಾಡುವ ಸ್ಥಿತಿ ಎದುರಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…