ರಾಜ್ಯ

ದಸರಾದಲ್ಲಿ ಮುಡಾ ಸೈಟ್‌ ನೋಡುವುದನ್ನು ತಪ್ಪಿಸಿಕೊಳ್ಳಬೇಡಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಟೀಕೆ

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ಹೆಸರು ರಾಷ್ಟ್ರಮಟ್ಟದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪಾಲುದಾರಿಕೆ ಇದೆ ಎಂದು ಬಿಜೆಪಿ ಆರೋಪಿಸಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಗ್ರಹಿಸುತ್ತಿದ್ದು, ಇದೀಗ ರಾಷ್ಟ್ರಮಟ್ಟದಲ್ಲಿ ಧರಣಿ ನಡೆಸಲು ಚಿಂತನೆ ನಡೆಸಿದೆ ಎಂದು ಮೂಲಗಳಿಂದ ಕೇಳಿ ಬಂದಿದೆ.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯೂ ತಮ್ಮ ಎಕ್ಸ್‌ ಖಾತೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದು, ಈ ದಸರಾದಲ್ಲಿ ಐದು ಸಾವಿರ ಕೋಟಿ ಮೌಲ್ಯದ ಅದ್ಭುತವಾದ ಮುಡಾ ಸೈಟ್‌ ಸೀಯಿಂಗ್‌ ಟೂರ್‌ಅನ್ನು ತಪ್ಪಿಸಿಕೊಳ್ಳಬೇಡಿ. ಸೈಟ್‌ ಸೀಯಿಂಗ್‌ನಲ್ಲಿ ನೀವು ಹಿಂದೆಂದು ನೋಡದ ಭ್ರಷ್ಟಾಚಾರವನ್ನು ಹತ್ತಿರದಿಂದ ನೋಡಬಹುದಾಗಿದೆ. ಸೈಟ್‌ ಸೀಯಿಂಗ್‌ಗಾಗಿ ಗೋಲ್ಡ್‌ ಪಾಸ್‌ ಬೇಕೆ? ದಯವಿಟ್ಟು ಸಿಎಂ ಸಿದ್ದರಾಮಯ್ಯ ಅವರನ್ನು ಸಂಪರ್ಕಿಸಿ. ಬಳಿಕ ಸಿದ್ದರಾಮಯ್ಯ ವಾಮಮಾರ್ಗವಾಗಿ ಪ್ರವೇಶಿಸುವವರ ವಿರುದ್ಧ ಕ್ರಮ ಜರುಗಿಸಲಾಗುವುದು. ಇದು ತಮಾಷೆ ಅಲ್ಲ! ರಾಜ್ಯದಲ್ಲಿ ಈಗಾಗಲೇ ಮುಖ್ಯಮಂತ್ರಿಗಳನ್ನು ವಿಚಾರಣೆಗೆ ಒಳಪಡಿಸಿದ್ದೇವೆ ಎಂಬಂತೆ ಪೋಸ್ಟ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಇನ್ನು ರಾಜ್ಯದಲ್ಲಿ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ತೀವ್ರ ಹೋರಾಟ ನಡೆಸಲು ಮುಂದಾಗಿದ್ದಾರೆ. ಅಲ್ಲದೇ ಕೆಲವು ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಚುನಾವಣಾ ಭಾಷಣಗಳ ಸಂದರ್ಭದಲ್ಲಿ ಮುಡಾ ಹಗರಣದ ವಿಚಾರವಾಗಿ ಪ್ರಸ್ತಾಪಿಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಆಂದೋಲನ ಡೆಸ್ಕ್

Recent Posts

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿ ಆರೋಪ ; ಇಬ್ಬರು ಶಿಕ್ಷಕರು ಅಮಾನತ್ತು

ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…

1 hour ago

ಹುಣಸೂರಿನ ಎಂಟು ಕೆರೆಗಳಿಗೆ ನೀರು ಪೂರೈಕೆಗೆ ಸೂಚನೆ

 ಶಾಸಕ ಜಿ.ಡಿ. ಹರೀಶ್‌ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…

2 hours ago

101 ತಾಲ್ಲೂಕುಗಳು ಬರಪೀಡಿತ ; ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…

2 hours ago

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

3 hours ago

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

3 hours ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

3 hours ago