ಬೆಂಗಳೂರು: ರಿಕ್ರಿಯೇಷನ್ ಕ್ಲಬ್ಗಳು ಅಥವಾ ಸಂಘ ಸಂಸ್ಥೆಗಳು ತಮ್ಮ ಮನೋರಂಜನಾ ಚಟುವಟಿಕೆ ನಡೆಸಲು ಪೊಲೀಸ್ ಅನುಮತಿ ಪಡೆಯಬೇಕಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಮೈಸೂರಿನ ಸೀರಗಳ್ಳಿ ಲಕ್ಷ್ಮಿದೇವಿ ರಿಕ್ರಿಯೇಷನ್ ಕ್ಲಬ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ನ ನ್ಯಾ. ಕೆ.ಎಸ್. ಹೇಮಲೇಖಾ ನೇತೃತ್ವದ ನ್ಯಾಯಪೀಠ ಈ ತೀರ್ಪು ನೀಡಿದ್ದು, ಈ ಬಗ್ಗೆ ಪೊಲೀಸರಿಗೆ ಸ್ಪಷ್ಟ ನಿರ್ದೇಶನವನ್ನೂ ನೀಡಿದೆ.
ಅರ್ಜಿದಾರರು ತಮ್ಮ ಮನೋರಂಜಾ ಕಾರ್ಯಕ್ರಮಕ್ಕೆ ಸ್ಥಳೀಯ ಪೊಲೀಸರ ಅನುಮತಿ ಕೋರಿದ್ದರು. ಲಿಖಿತ ಅನುಮತಿ ಅರ್ಜಿಯನ್ನು ಸ್ಥಳೀಯ ಪೊಲೀಸರು ನಿರಾಕರಿಸಿದ್ದರು. ಇದನ್ನು ಪ್ರಶ್ನಿಸಿ ರಿಕ್ರಿಯೇಷನ್ ಕ್ಲಬ್ ಹೈಕೋರ್ಟ್ ಮೆಟ್ಟಿಲೇರಿದ್ದರು.
ರಿಕ್ರಿಯೇಷನ್ ಕ್ಲಬ್, ಸಂಘ ಸಂಸ್ಥೆಗಳು ಮನರಂಜನಾ ಚಟುವಟಿಕೆ ನಡೆಸಲು ಕರ್ನಾಟಕ ಪೊಲೀಸ್ ಕಾಯ್ದೆಯಡಿ ಪೊಲೀಸರಿಂದ ಪರವಾನಗಿ ಪಡೆಯಬೇಕು ಎಂದು ಹೇಳುವುದು ತರ್ಕಹೀನ ಮತ್ತು ಇಲಾಖೆಯ ಸ್ವಚ್ಛಾಚಾರದ ಕ್ರಮ ಎಂದು ನ್ಯಾಯಪೀಠ ಬಣ್ಣಿಸಿದೆ.
ಪೊಲೀಸರು ಏನು ಮಾಡಬಾರದು:
ಕ್ಲಬ್ಗಳು ತನ್ನ ಸಂಘದ ಸದಸ್ಯರಿಗೆ ಸೀಮಿತವಾಗಿ ಮಾತ್ರ ಮನರಂಜನಾ ಚಟುವಟಿಕೆ ನಡೆಸುವ ಸಂಸ್ಥೆಯಾಗಿದೆ. ಇಂತಹ ಕಾರ್ಯಕ್ರಮಗಳಿಗೆ ಶುಲ್ಕ ಪಡೆದೋ ಅಥವಾ ಉಚಿತವಾಗಿಯೋ ಸಾರ್ವಜನಿಕರು ಪ್ರವೇಶ ಪಡೆಯುವಂತಿಲ್ಲ.
ಬೈಲಾ ಪ್ರಕಾರ ಕಾರ್ಯಕ್ರಮಕ್ಕೆ ಪ್ರವೇಶ ನಿರ್ಬಂಧಿತವಾಗಿದ್ದು, ಕ್ಲಬ್ ಸದಸ್ಯರಿಗೆ ಮಾತ್ರ ಪ್ರವೇಶವಿರಲಿದೆ. ಪ್ರಸಕ್ತ ಕಾನೂನಿನ ಅನ್ವಯ ಯಾವುದೇ ಕ್ಲಬ್ ಅಥವಾ ಸಂಘ-ಸಂಸ್ಥೆಯು ಮನರಂಜನಾ ಚಟುವಟಿಕೆ ನಡೆಸಲು ಯಾವುದೇ ಅನುಮತಿ ಅಥವಾ ಲೈಸನ್ಸ್ ಪಡೆಯಬೇಕಾಗಿಲ್ಲ.
ಕರ್ನಾಟಕ ಪೊಲೀಸ್ ಕಾಯ್ದೆ ಅಡಿ ಲೈಸನ್ಸ್ ಪಡೆಯುವಂತೆ ಸೂಚಿಸುವುದು ಸ್ವಚ್ಛಾಚಾರದ, ತರ್ಕಹೀನ ಕ್ರಮ. ಇಂತಹ ಕಾರ್ಯಕ್ರಮಗಳಿಗೆ ಪೊಲೀಸರು ಮಧ್ಯಪ್ರವೇಶ ಮಾಡುವ ಅಗತ್ಯವಿಲ್ಲ
ಪೊಲೀಸ್ ಏನು ಮಾಡಬಹುದು:
‘ಕ್ಲಬ್’ ಎಂದು ರಿಜಿಸ್ಟರ್ ಆಗಿರುವ ಎಲ್ಲವೂ ಕಾನೂನುಬಾಹಿರವಾಗಿ ಅಕ್ರಮ ಚಟುವಟಿಕೆಯಲ್ಲಿ ತೊಡಗಿವೆ ಎನ್ನುವಂತೆ ಸರ್ಕಾರದ ಪ್ರಾಧಿಕಾರಗಳು ಭಾವಿಸಿಕೊಂಡು ಅದರ ವಿರುದ್ಧ ನಡೆದುಕೊಳ್ಳಬಾರದು. ಅಗತ್ಯಬಿದ್ದರೆ, ಪೊಲೀಸರು ಕಾಯ್ದೆಯ ಷರತ್ತುಗಳ ಜಾರಿಗೆ ‘ನಿಗಾ’ ಯಾ ರೇಡ್ ನಂತಹ ಕ್ರಮಗಳನ್ನು ಬಳಸಬಹುದು.
ಪೊಲೀಸರು ಪರಿಶೀಲನೆ ನಡೆಸಿ ಅಲ್ಲಿ ಏನು ಕಾರ್ಯಕ್ರಮ ನಡೆಯುತ್ತಿದೆ ಎಂಬುದರ ಮಾಹಿತಿ ಪಡೆಯಬಹುದು. ಈ ಮೂಲಕ ಕ್ಲಬ್ ಸ್ಥಳವನ್ನು ಅಕ್ರಮ ಚಟುವಟಿಕೆಗಳಿಗೆ ನಡೆಸದಂತೆ ಪೊಲೀಸರು ತಡೆಯಬಹುದು ಎಂದು ನ್ಯಾಯಪೀಠ ಹೇಳಿದೆ.
ಕರ್ನಾಟಕ ಪೊಲೀಸ್ ಆಕ್ಟ್ ಕಲಂ 2 (14) ಮತ್ತು (15)ರ ಅಡಿ ಸಾರ್ವಜನಿಕ ಅಮ್ಯೂಸ್ಕೆಂಟ್ ಅಥವಾ ಸಾರ್ವಜನಿಕ ಮನರಂಜನೆಯಾದರೆ ಮಾತ್ರ ಲೈಸನ್ಸ್ ಪಡೆಯಬೇಕು ಎಂದು ಹಲವು ತೀರ್ಪುಗಳನ್ನು ಉಲ್ಲೇಖಿಸಿ ನ್ಯಾಯಪೀಠ ತಿಳಿಸಿದೆ.
ತಮ್ಮ ಕ್ಲಬ್ನ ಸದಸ್ಯರು ರಮ್ಮಿ (ಕಾರ್ಡ್ ಗೇಮ್ಸ್), ಚೆಸ್, ಕೇರಂ, ಬಿಲಿಯರ್ಡ್ಸ್, ಸ್ಪೂಕರ್ ಮುಂತಾದ ಕೌಶಲ್ಯದ ಒಳಾಂಗಣ ಆಟಗಳು ಅಥವಾ ಹೊರಾಂಗಣದ ಆಟಗಳನ್ನು ಆಡಲು ಸಾರ್ವಜನಿಕ ಮನರಂಜನಾ ಸ್ಥಳಗಳ ಪರವಾನಗಿ ಮತ್ತು ನಿಯಂತ್ರಣ ನಿಬಂಧನೆಯ ಅಡಿ ಪರವಾನಗಿ ಅಥವಾ ಅನುಮತಿ ಪಡೆಯುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ.
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್ಪೆಕ್ಟರ್ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…
ಹನೂರು : ಜಮೀನಿನಲ್ಲಿ ಅಕ್ರಮ ಗಾಂಜಾ ಗಿಡ ಬೆಳೆದಿದ್ದ ಆರೋಪಿ ಹಾಗೂ 5 ಲಕ್ಷ ಮೌಲ್ಯದ ಗಾಂಜಾ ಗಿಡಗಳನ್ನು ವಶಕ್ಕೆ…
ಮಂಡ್ಯ : ಯುವ ರೈತರನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹವಾಗಿ ೫ ಲಕ್ಷ ರೂ.ಗಳನ್ನು ನೀಡುವಂತೆ ಮನನೊಂದ ರೈತ ಮಕ್ಕಳು ಮುಖ್ಯಮಂತ್ರಿಗಳಿಗೆ…
ಸರಗೂರು : ನಾಲೆಯಲ್ಲಿ ಹಸುವಿಗೆ ನೀರು ಕುಡಿಸಲು ಹೋದಾಗ ಯುವಕನೊಬ್ಬ ಕಾಲುಜಾರಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮೇಗೌಡರ…
ವಿಧಾನಸಭೆ : ನಗರಾಭಿವೃದ್ಧಿ ಇಲಾಖೆಯಿಂದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಒಳಚರಂಡಿ ಮತ್ತು ಅದಕ್ಕೆ ಸಂಬಂಧಿಸಿದ ಸೇವೆಗಳ ನಿರ್ವಹಣೆ ಅಸಾಧ್ಯ ಎಂದು…
ಹುಣಸೂರು : ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಹಲವು ಗ್ರಾಮಗಳಲ್ಲಿ ನಡೆಯುತ್ತಿರುವ ನಿರಂತರ ಹುಲಿ ದಾಳಿಗಳ ಹಿನ್ನೆಲೆಯಲ್ಲಿ ರೈತರು ಅಂತರರಾಜ್ಯ…