ರಾಜ್ಯ

ಸಂಘ ಸಂಸ್ಥೆಗಳ ಮನೋರಂಜನಾ ಚಟುವಟಿಕೆಗೆ ಪೊಲೀಸ್‌ ಅನುಮತಿ ಬೇಡ: ಕರ್ನಾಟಕ ಹೈಕೋರ್ಟ್

ಬೆಂಗಳೂರು: ರಿಕ್ರಿಯೇಷನ್ ಕ್ಲಬ್‌ಗಳು ಅಥವಾ ಸಂಘ ಸಂಸ್ಥೆಗಳು ತಮ್ಮ ಮನೋರಂಜನಾ ಚಟುವಟಿಕೆ ನಡೆಸಲು ಪೊಲೀಸ್ ಅನುಮತಿ ಪಡೆಯಬೇಕಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ.

ಮೈಸೂರಿನ ಸೀರಗಳ್ಳಿ ಲಕ್ಷ್ಮಿದೇವಿ ರಿಕ್ರಿಯೇಷನ್ ಕ್ಲಬ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್‌ನ ನ್ಯಾ. ಕೆ.ಎಸ್. ಹೇಮಲೇಖಾ ನೇತೃತ್ವದ ನ್ಯಾಯಪೀಠ ಈ ತೀರ್ಪು ನೀಡಿದ್ದು, ಈ ಬಗ್ಗೆ ಪೊಲೀಸರಿಗೆ ಸ್ಪಷ್ಟ ನಿರ್ದೇಶನವನ್ನೂ ನೀಡಿದೆ.

ಅರ್ಜಿದಾರರು ತಮ್ಮ ಮನೋರಂಜಾ ಕಾರ್ಯಕ್ರಮಕ್ಕೆ ಸ್ಥಳೀಯ ಪೊಲೀಸರ ಅನುಮತಿ ಕೋರಿದ್ದರು. ಲಿಖಿತ ಅನುಮತಿ ಅರ್ಜಿಯನ್ನು ಸ್ಥಳೀಯ ಪೊಲೀಸರು ನಿರಾಕರಿಸಿದ್ದರು. ಇದನ್ನು ಪ್ರಶ್ನಿಸಿ ರಿಕ್ರಿಯೇಷನ್ ಕ್ಲಬ್ ಹೈಕೋರ್ಟ್‌ ಮೆಟ್ಟಿಲೇರಿದ್ದರು.

ರಿಕ್ರಿಯೇಷನ್ ಕ್ಲಬ್, ಸಂಘ ಸಂಸ್ಥೆಗಳು ಮನರಂಜನಾ ಚಟುವಟಿಕೆ ನಡೆಸಲು ಕರ್ನಾಟಕ ಪೊಲೀಸ್ ಕಾಯ್ದೆಯಡಿ ಪೊಲೀಸರಿಂದ ಪರವಾನಗಿ ಪಡೆಯಬೇಕು ಎಂದು ಹೇಳುವುದು ತರ್ಕಹೀನ ಮತ್ತು ಇಲಾಖೆಯ ಸ್ವಚ್ಛಾಚಾರದ ಕ್ರಮ ಎಂದು ನ್ಯಾಯಪೀಠ ಬಣ್ಣಿಸಿದೆ.

ಪೊಲೀಸರು ಏನು ಮಾಡಬಾರದು:

ಕ್ಲಬ್‌ಗಳು ತನ್ನ ಸಂಘದ ಸದಸ್ಯರಿಗೆ ಸೀಮಿತವಾಗಿ ಮಾತ್ರ ಮನರಂಜನಾ ಚಟುವಟಿಕೆ ನಡೆಸುವ ಸಂಸ್ಥೆಯಾಗಿದೆ. ಇಂತಹ ಕಾರ್ಯಕ್ರಮಗಳಿಗೆ ಶುಲ್ಕ ಪಡೆದೋ ಅಥವಾ ಉಚಿತವಾಗಿಯೋ ಸಾರ್ವಜನಿಕರು ಪ್ರವೇಶ ಪಡೆಯುವಂತಿಲ್ಲ.

ಬೈಲಾ ಪ್ರಕಾರ ಕಾರ್ಯಕ್ರಮಕ್ಕೆ ಪ್ರವೇಶ ನಿರ್ಬಂಧಿತವಾಗಿದ್ದು, ಕ್ಲಬ್ ಸದಸ್ಯರಿಗೆ ಮಾತ್ರ ಪ್ರವೇಶವಿರಲಿದೆ. ಪ್ರಸಕ್ತ ಕಾನೂನಿನ ಅನ್ವಯ ಯಾವುದೇ ಕ್ಲಬ್ ಅಥವಾ ಸಂಘ-ಸಂಸ್ಥೆಯು ಮನರಂಜನಾ ಚಟುವಟಿಕೆ ನಡೆಸಲು ಯಾವುದೇ ಅನುಮತಿ ಅಥವಾ ಲೈಸನ್ಸ್ ಪಡೆಯಬೇಕಾಗಿಲ್ಲ.

ಕರ್ನಾಟಕ ಪೊಲೀಸ್ ಕಾಯ್ದೆ ಅಡಿ ಲೈಸನ್ಸ್ ಪಡೆಯುವಂತೆ ಸೂಚಿಸುವುದು ಸ್ವಚ್ಛಾಚಾರದ, ತರ್ಕಹೀನ ಕ್ರಮ. ಇಂತಹ ಕಾರ್ಯಕ್ರಮಗಳಿಗೆ ಪೊಲೀಸರು ಮಧ್ಯಪ್ರವೇಶ ಮಾಡುವ ಅಗತ್ಯವಿಲ್ಲ

ಪೊಲೀಸ್ ಏನು ಮಾಡಬಹುದು:

‘ಕ್ಲಬ್’ ಎಂದು ರಿಜಿಸ್ಟರ್ ಆಗಿರುವ ಎಲ್ಲವೂ ಕಾನೂನುಬಾಹಿರವಾಗಿ ಅಕ್ರಮ ಚಟುವಟಿಕೆಯಲ್ಲಿ ತೊಡಗಿವೆ ಎನ್ನುವಂತೆ ಸರ್ಕಾರದ ಪ್ರಾಧಿಕಾರಗಳು ಭಾವಿಸಿಕೊಂಡು ಅದರ ವಿರುದ್ಧ ನಡೆದುಕೊಳ್ಳಬಾರದು. ಅಗತ್ಯಬಿದ್ದರೆ, ಪೊಲೀಸರು ಕಾಯ್ದೆಯ ಷರತ್ತುಗಳ ಜಾರಿಗೆ ‘ನಿಗಾ’ ಯಾ ರೇಡ್ ನಂತಹ ಕ್ರಮಗಳನ್ನು ಬಳಸಬಹುದು.

ಪೊಲೀಸರು ಪರಿಶೀಲನೆ ನಡೆಸಿ ಅಲ್ಲಿ ಏನು ಕಾರ್ಯಕ್ರಮ ನಡೆಯುತ್ತಿದೆ ಎಂಬುದರ ಮಾಹಿತಿ ಪಡೆಯಬಹುದು. ಈ ಮೂಲಕ ಕ್ಲಬ್ ಸ್ಥಳವನ್ನು ಅಕ್ರಮ ಚಟುವಟಿಕೆಗಳಿಗೆ ನಡೆಸದಂತೆ ಪೊಲೀಸರು ತಡೆಯಬಹುದು ಎಂದು ನ್ಯಾಯಪೀಠ ಹೇಳಿದೆ.

ಕರ್ನಾಟಕ ಪೊಲೀಸ್ ಆಕ್ಟ್ ಕಲಂ 2 (14) ಮತ್ತು (15)ರ ಅಡಿ ಸಾರ್ವಜನಿಕ ಅಮ್ಯೂಸ್ಕೆಂಟ್ ಅಥವಾ ಸಾರ್ವಜನಿಕ ಮನರಂಜನೆಯಾದರೆ ಮಾತ್ರ ಲೈಸನ್ಸ್ ಪಡೆಯಬೇಕು ಎಂದು ಹಲವು ತೀರ್ಪುಗಳನ್ನು ಉಲ್ಲೇಖಿಸಿ ನ್ಯಾಯಪೀಠ ತಿಳಿಸಿದೆ.

ತಮ್ಮ ಕ್ಲಬ್‌ನ ಸದಸ್ಯರು ರಮ್ಮಿ (ಕಾರ್ಡ್ ಗೇಮ್ಸ್), ಚೆಸ್, ಕೇರಂ, ಬಿಲಿಯರ್ಡ್ಸ್, ಸ್ಪೂಕರ್ ಮುಂತಾದ ಕೌಶಲ್ಯದ ಒಳಾಂಗಣ ಆಟಗಳು ಅಥವಾ ಹೊರಾಂಗಣದ ಆಟಗಳನ್ನು ಆಡಲು ಸಾರ್ವಜನಿಕ ಮನರಂಜನಾ ಸ್ಥಳಗಳ ಪರವಾನಗಿ ಮತ್ತು ನಿಯಂತ್ರಣ ನಿಬಂಧನೆಯ ಅಡಿ ಪರವಾನಗಿ ಅಥವಾ ಅನುಮತಿ ಪಡೆಯುವ ಅಗತ್ಯವಿಲ್ಲ ಎಂದು ಹೈಕೋರ್ಟ್‌ ಹೇಳಿದೆ.

andolanait

Recent Posts

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…

54 mins ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

1 hour ago

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

1 hour ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

2 hours ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

11 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

11 hours ago