ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎರಡು ಎಚ್ಎಂಪಿವಿ ವೈರಸ್ ಪ್ರಕರಣಗಳು ಕಾಣಿಸಿಕೊಂಡಿದ್ದು, ಎಚ್ಎಂಪಿವಿ ಅಪಾಯಕಾರಿ ಅಲ್ಲ. ಯಾವುದೇ ಆತಂಕ ಬೇಡ. ಆದರೆ ಎಲ್ಲರೂ ಮುಂಜಾಗ್ರತೆ ವಹಿಸೋದು ಅಗತ್ಯ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗೋ಼ಷ್ಠಿ ನಡೆಸಿ ಮಾತನಾಡಿದ ಅವರು, ಎಚ್ಎಂಪಿವಿ ವೈರಸ್ ಬಗ್ಗೆ ಆತಂಕಪಡುವ ಆಗತ್ಯವಿಲ್ಲ. ಭಾರತದಲ್ಲಿ ಇದು ಹೊಸದೇನಲ್ಲ. ಬಹಳಷ್ಟು ವರ್ಷಗಳಿಂದ ಎಚ್ಎಂಪಿವಿ ವೈರಸ್ ವಿಶ್ವದಾದ್ಯಂತ ಇದೆ. ಈ ವೈರಸ್ನಿಂದ ಜೀವಕ್ಕೆ ಯಾವುದೇ ಅಪಾಯವಿಲ್ಲ ಎಂದು ಹೇಳಿದರು.
ದೇಶದಲ್ಲಿ ಎಚ್ಎಂಪಿವಿ ವೈರಸ್ ರೀತಿ ನೂರಾರು ರೀತಿಯ ವೈರಸ್ಗಳಿವೆ. ಯಾರು ಇದರ ಬಗ್ಗೆ ಭಯ ಪಡುವ ಆಗತ್ಯವಿಲ್ಲ. ಕಳೆದ 2001ರಲ್ಲಿ ಮೊದಲ ಬಾರಿಗೆ ಈ ವೈರಸನ್ನು ಪತ್ತೆ ಹಚ್ಚಲಾಗಿದೆ. ಈ ವೈರಸ್ನಿಂದ ಜನರು ಆತಂಕದಲ್ಲಿದ್ದಾರೆ. ಚಳಿಗಾಲದಲ್ಲಿ ಸಹಜವಾಗಿ ಕೆಮ್ಮು, ಕಫ ಇದ್ದೇ ಇರುತ್ತದೆ. ಆದರೆ ಇಂತಹ ಲಕ್ಷಣಗಳು ಎಚ್ಎಂಪಿವಿ ಪ್ರಕರಣವಲ್ಲ ಎಂದು ಸ್ಪಷ್ಟಪಡಿಸಿದರು.
ಇನ್ನು ನೆರೆಯ ದೇಶ ಚೀನಾದಲ್ಲಿನ ಈ ವೈರಸ್ ಹರಡುವಿಕೆ ಕುರಿತಾದ ಮಾಹಿತಿಯ ಬಗ್ಗೆ ಕೇಂದ್ರ ಸರ್ಕಾರ ಎಚ್ಚರ ವಹಿಸಬೇಕು. ಈಗಾಗಲೇ ದೇಶದಲ್ಲಿ ಗುಜರಾತ್, ಪುದುಚೇರಿಯಲ್ಲಿ ಎಚ್ಎಂಪಿವಿ ವೈರಸ್ ಪ್ರಕರಣ ದಾಖಲಾಗಿವೆ. ಇದರಿಂದ ಮಕ್ಕಳು ಭಯ ಪಡಬೇಕಾಗಿಲ್ಲ. ಕೇಂದ್ರ ಸರ್ಕಾರದಿಂದ ಯಾವುದೇ ಸೂಚನೆ ಬಂದಿಲ್ಲ. ಲಾಕ್ಡೌನ್ ಹಾಗೂ ಮಾಸ್ಕ್ ಸೇರಿದಂತೆ ಯಾವುದು ಇಲ್ಲ. ಯಾರೂ ಕೂಡ ಭಯಪಡಬೇಡಿ ಎಂದು ಹೇಳಿದರು.
ಮೈಸೂರು: ನಗರದ ಹೊರವಲಯದ ಹಳೆ ಕೆಸರೆ ಸಮೀಪದಲ್ಲಿರುವ ಕಸ ವಿಲೇವಾರಿ ಘಟಕದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಅಪಾರ ಪ್ರಮಾಣದ ಕಸದ…
ಮೈಸೂರಿನ ಕ್ರಾಫರ್ಡ್ ಹಾಲ್ ಎದುರಿನ ಓವೆಲ್ ಮೈದಾನದಲ್ಲಿ ಕ್ರೀಡಾಪಟುಗಳು ಪ್ರತಿನಿತ್ಯ ಕ್ರೀಡಾಭ್ಯಾಸ ನಡೆಸುತ್ತಾರೆ. ಸಾರ್ವಜನಿಕರೂ ಬೆಳಿಗ್ಗೆ ಹಾಗೂ ಸಂಜೆಯ ವೇಳೆ…
ಒಳಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರು ಅನುಮೋದನೆ ನೀಡಿದ್ದು, ರಾಜ್ಯ ಸರ್ಕಾರ ಒಳಮೀಸಲಾತಿಯಲ್ಲಿ ಎಡಗೈ ಮತ್ತು ಬಲಗೈ ಪಂಗಡಗಳಿಗೆ ಸಮಾನವಾಗಿ ಸೌಲಭ್ಯ ಕಲ್ಪಿಸಬೇಕು.…
ಮೈಸೂರಿನ ವಿವಿಧ ವೃತ್ತಗಳಲ್ಲಿ ಹೊಸದಾಗಿ ಸಿಗ್ನಲ್ ಲೈಟ್ಗಳನ್ನು ಅಳವಡಿಸಿದ್ದಾರೆ. ಆದರೆ ಚಾಮರಾಜಪುರಂನ ನ್ಯಾಯಾಲಯದ ಬಳಿ ವಾಹನ ಸಂಚಾರ ಹೆಚ್ಚಾಗಿದ್ದು, ನ್ಯಾಯಾಲಯದ…
ಚಾಮರಾಜನಗರ ಪಟ್ಟಣದಲ್ಲಿರುವ ನಂದಿ ಭವನದಲ್ಲಿ ಮದುವೆ ಮತ್ತು ಇತರ ಸಮಾರಂಭಗಳು ನಡೆಯುತ್ತವೆ. ಕಾರ್ಯಕ್ರಮಗಳು ಮುಗಿದ ಮೇಲೆ ಉಳಿದ ಆಹಾರ ಪದಾರ್ಥಗಳನ್ನು…
ನಕಲಿ ವಿಡಿಯೋಗಳ ಹಾವಳಿ, ಕೃತಕ ಬುದ್ಧಿಮತ್ತೆ ಬಳಸಿ ಡೀಪ್ಫೇಕ್, ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಲ್ಲಿ ಏನು ಬೇಕಾದರೂ ಮಾಡಬಹುದು ಎನ್ನುವುದನ್ನು ತಡೆಯುವ…