ರಾಜ್ಯ

HMPV ವೈರಸ್‌ ಬಗ್ಗೆ ಆತಂಕ ಬೇಡ ಮುಂಜಾಗ್ರತೆ ಅಗತ್ಯ: ಸಚಿವ ದಿನೇಶ್‌ ಗುಂಡೂರಾವ್‌ ಸಲಹೆ

ಬೆಂಗಳೂರು:‌ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎರಡು ಎಚ್ಎಂಪಿವಿ ವೈರಸ್‌ ಪ್ರಕರಣಗಳು ಕಾಣಿಸಿಕೊಂಡಿದ್ದು, ಎಚ್‌ಎಂಪಿವಿ ಅಪಾಯಕಾರಿ ಅಲ್ಲ. ಯಾವುದೇ ಆತಂಕ ಬೇಡ. ಆದರೆ ಎಲ್ಲರೂ ಮುಂಜಾಗ್ರತೆ ವಹಿಸೋದು ಅಗತ್ಯ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗೋ಼ಷ್ಠಿ ನಡೆಸಿ ಮಾತನಾಡಿದ ಅವರು, ಎಚ್‌ಎಂಪಿವಿ ವೈರಸ್‌ ಬಗ್ಗೆ ಆತಂಕಪಡುವ ಆಗತ್ಯವಿಲ್ಲ. ಭಾರತದಲ್ಲಿ ಇದು ಹೊಸದೇನಲ್ಲ. ಬಹಳಷ್ಟು ವರ್ಷಗಳಿಂದ ಎಚ್‌ಎಂಪಿವಿ ವೈರಸ್‌ ವಿಶ್ವದಾದ್ಯಂತ ಇದೆ. ಈ ವೈರಸ್‌ನಿಂದ ಜೀವಕ್ಕೆ ಯಾವುದೇ ಅಪಾಯವಿಲ್ಲ ಎಂದು ಹೇಳಿದರು.

ದೇಶದಲ್ಲಿ ಎಚ್‌ಎಂಪಿವಿ ವೈರಸ್‌ ರೀತಿ ನೂರಾರು ರೀತಿಯ ವೈರಸ್‌ಗಳಿವೆ. ಯಾರು ಇದರ ಬಗ್ಗೆ ಭಯ ಪಡುವ ಆಗತ್ಯವಿಲ್ಲ. ಕಳೆದ 2001ರಲ್ಲಿ ಮೊದಲ ಬಾರಿಗೆ ಈ ವೈರಸನ್ನು ಪತ್ತೆ ಹಚ್ಚಲಾಗಿದೆ. ಈ ವೈರಸ್‌ನಿಂದ ಜನರು ಆತಂಕದಲ್ಲಿದ್ದಾರೆ. ಚಳಿಗಾಲದಲ್ಲಿ ಸಹಜವಾಗಿ ಕೆಮ್ಮು, ಕಫ ಇದ್ದೇ ಇರುತ್ತದೆ. ಆದರೆ ಇಂತಹ ಲಕ್ಷಣಗಳು ಎಚ್‌ಎಂಪಿವಿ ಪ್ರಕರಣವಲ್ಲ ಎಂದು ಸ್ಪಷ್ಟಪಡಿಸಿದರು.

ಇನ್ನು ನೆರೆಯ ದೇಶ ಚೀನಾದಲ್ಲಿನ ಈ ವೈರಸ್‌ ಹರಡುವಿಕೆ ಕುರಿತಾದ ಮಾಹಿತಿಯ ಬಗ್ಗೆ ಕೇಂದ್ರ ಸರ್ಕಾರ ಎಚ್ಚರ ವಹಿಸಬೇಕು. ಈಗಾಗಲೇ ದೇಶದಲ್ಲಿ ಗುಜರಾತ್‌, ಪುದುಚೇರಿಯಲ್ಲಿ ಎಚ್‌ಎಂಪಿವಿ ವೈರಸ್‌ ಪ್ರಕರಣ ದಾಖಲಾಗಿವೆ. ಇದರಿಂದ ಮಕ್ಕಳು ಭಯ ಪಡಬೇಕಾಗಿಲ್ಲ. ಕೇಂದ್ರ ಸರ್ಕಾರದಿಂದ ಯಾವುದೇ ಸೂಚನೆ ಬಂದಿಲ್ಲ. ಲಾಕ್‌ಡೌನ್‌ ಹಾಗೂ ಮಾಸ್ಕ್‌ ಸೇರಿದಂತೆ ಯಾವುದು ಇಲ್ಲ. ಯಾರೂ ಕೂಡ ಭಯಪಡಬೇಡಿ ಎಂದು ಹೇಳಿದರು.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ರಾಜ್ಯಕ್ಕೆ ಕೇಂದ್ರದ ಅನುದಾನ ಕಡಿತ: ಹೋರಾಟ ಅಗತ್ಯ

ಪ್ರತಿ ವರ್ಷ ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಸುಮಾರು ಐದು ಲಕ್ಷ ಕೋಟಿ ರೂ.ಗಳ ತೆರಿಗೆ ಹೋಗುತ್ತಿದ್ದರೂ, ಕೇಂದ್ರ ಸರ್ಕಾರ ರಾಜ್ಯಕ್ಕೆ…

2 mins ago

ಓದುಗರ ಪತ್ರ: ಕುವೆಂಪುನಗರ ಸಾರ್ವಜನಿಕ ಗ್ರಂಥಾಲಯ ಅಭಿವೃದ್ಧಿಪಡಿಸಿ

ಮೈಸೂರಿನ ಕುವೆಂಪು ನಗರದಲ್ಲಿರುವ ಕೇಂದ್ರ ಗ್ರಂಥಾಲಯಕ್ಕೆ ಪ್ರತಿ ದಿನ ಹಿರಿಯ ನಾಗರಿಕರು ಬರುತ್ತಾರೆ. ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆಗಳಿಗೆ ಸಿದ್ಧತೆ…

4 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಕನ್ನಡ ಚಿತ್ರರಂಗವೂ ಅರಸು-ಸಿದ್ದರಾಮಯ್ಯ ಆಡಳಿತ ರಂಗವೂ

ವೈಡ್‌ ಆಂಗಲ್‌  ಬಾ.ನಾ.ಸುಬ್ರಹ್ಮಣ್ಯ  ಅತಿ ಹೆಚ್ಚು ಕಾಲ ನಾಡಿನ ಆಡಳಿತ ಚುಕ್ಕಾಣಿ ಹಿಡಿದಿದ್ದವರು ದೇವರಾಜ ಅರಸು. ಆ ದಾಖಲೆಯನ್ನು ಮೊನ್ನೆ…

5 mins ago

ಇಂದು ಫಲಪುಷ್ಪ ಪ್ರದರ್ಶನದ ಮಧುರ ವಸ್ತ್ರೋತ್ಸವ

ಮಂಡ್ಯ: ಜಿಲ್ಲಾಡಳಿತ ಮತ್ತು ಮಂಡ್ಯ ಜಿಲ್ಲಾ ಪಂಚಾಯಿತಿ,ತೋಟಗಾರಿಕೆ ಇಲಾಖೆ ಮತ್ತು ಕೈಮಗ್ಗ ಮತ್ತು ಜವಳಿ ಇಲಾಖೆ ಸಹ ಯೋಗದಲ್ಲಿ ಫಲಪುಷ್ಪ…

11 mins ago

ಜನವರಿ.24ರಿಂದ ಮಂಜಿನ ನಗರಿಯಲ್ಲಿ ಫಲಪುಷ್ಪ ಪ್ರದರ್ಶನ

ನವೀನ್ ಡಿಸೋಜ ಗಮನ ಸೆಳೆಯಲಿದೆ ೧೮ ಅಡಿ ಎತ್ತರದ ಶ್ರೀ ಭಗಂಡೇಶ್ವರ ದೇವಸ್ಥಾನ ಕಲಾಕೃತಿ; ಹಲವು ವಿಭಿನ್ನತೆಯೊಂದಿಗೆ ಆಯೋಜನೆ ಮಡಿಕೇರಿ:…

20 mins ago

ನಗರ ಪಾಲಿಕೆಯಲ್ಲಿ ವೈದ್ಯ ಪದವಿ ಆರೋಗ್ಯಾಧಿಕಾರಿಗೆ ಕೊಕ್: ಇಂಜಿನಿಯರ್‌ಗೆ ಹೊಸ ಹುದ್ದೆ!

ಎಚ್.ಎಸ್.ದಿನೇಶ್‌ಕುಮಾರ್ ಸರ್ಕಾರದ ನಿರ್ಧಾರಕ್ಕೆ ಮಾಜಿ ಮಹಾಪೌರರು, ಮಾಜಿ ಸದಸ್ಯರ ವಿರೋಧ ಮೈಸೂರು: ಬಿಬಿಎಂಪಿ ಹೊರತುಪಡಿಸಿ ಮೈಸೂರು ನಗರಪಾಲಿಕೆ ಸೇರಿದಂತೆ ರಾಜ್ಯದ…

27 mins ago