ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎರಡು ಎಚ್ಎಂಪಿವಿ ವೈರಸ್ ಪ್ರಕರಣಗಳು ಕಾಣಿಸಿಕೊಂಡಿದ್ದು, ಎಚ್ಎಂಪಿವಿ ಅಪಾಯಕಾರಿ ಅಲ್ಲ. ಯಾವುದೇ ಆತಂಕ ಬೇಡ. ಆದರೆ ಎಲ್ಲರೂ ಮುಂಜಾಗ್ರತೆ ವಹಿಸೋದು ಅಗತ್ಯ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗೋ಼ಷ್ಠಿ ನಡೆಸಿ ಮಾತನಾಡಿದ ಅವರು, ಎಚ್ಎಂಪಿವಿ ವೈರಸ್ ಬಗ್ಗೆ ಆತಂಕಪಡುವ ಆಗತ್ಯವಿಲ್ಲ. ಭಾರತದಲ್ಲಿ ಇದು ಹೊಸದೇನಲ್ಲ. ಬಹಳಷ್ಟು ವರ್ಷಗಳಿಂದ ಎಚ್ಎಂಪಿವಿ ವೈರಸ್ ವಿಶ್ವದಾದ್ಯಂತ ಇದೆ. ಈ ವೈರಸ್ನಿಂದ ಜೀವಕ್ಕೆ ಯಾವುದೇ ಅಪಾಯವಿಲ್ಲ ಎಂದು ಹೇಳಿದರು.
ದೇಶದಲ್ಲಿ ಎಚ್ಎಂಪಿವಿ ವೈರಸ್ ರೀತಿ ನೂರಾರು ರೀತಿಯ ವೈರಸ್ಗಳಿವೆ. ಯಾರು ಇದರ ಬಗ್ಗೆ ಭಯ ಪಡುವ ಆಗತ್ಯವಿಲ್ಲ. ಕಳೆದ 2001ರಲ್ಲಿ ಮೊದಲ ಬಾರಿಗೆ ಈ ವೈರಸನ್ನು ಪತ್ತೆ ಹಚ್ಚಲಾಗಿದೆ. ಈ ವೈರಸ್ನಿಂದ ಜನರು ಆತಂಕದಲ್ಲಿದ್ದಾರೆ. ಚಳಿಗಾಲದಲ್ಲಿ ಸಹಜವಾಗಿ ಕೆಮ್ಮು, ಕಫ ಇದ್ದೇ ಇರುತ್ತದೆ. ಆದರೆ ಇಂತಹ ಲಕ್ಷಣಗಳು ಎಚ್ಎಂಪಿವಿ ಪ್ರಕರಣವಲ್ಲ ಎಂದು ಸ್ಪಷ್ಟಪಡಿಸಿದರು.
ಇನ್ನು ನೆರೆಯ ದೇಶ ಚೀನಾದಲ್ಲಿನ ಈ ವೈರಸ್ ಹರಡುವಿಕೆ ಕುರಿತಾದ ಮಾಹಿತಿಯ ಬಗ್ಗೆ ಕೇಂದ್ರ ಸರ್ಕಾರ ಎಚ್ಚರ ವಹಿಸಬೇಕು. ಈಗಾಗಲೇ ದೇಶದಲ್ಲಿ ಗುಜರಾತ್, ಪುದುಚೇರಿಯಲ್ಲಿ ಎಚ್ಎಂಪಿವಿ ವೈರಸ್ ಪ್ರಕರಣ ದಾಖಲಾಗಿವೆ. ಇದರಿಂದ ಮಕ್ಕಳು ಭಯ ಪಡಬೇಕಾಗಿಲ್ಲ. ಕೇಂದ್ರ ಸರ್ಕಾರದಿಂದ ಯಾವುದೇ ಸೂಚನೆ ಬಂದಿಲ್ಲ. ಲಾಕ್ಡೌನ್ ಹಾಗೂ ಮಾಸ್ಕ್ ಸೇರಿದಂತೆ ಯಾವುದು ಇಲ್ಲ. ಯಾರೂ ಕೂಡ ಭಯಪಡಬೇಡಿ ಎಂದು ಹೇಳಿದರು.
ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…
ಮೈಸೂರು: ದಶಕಗಳ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದನ್ನು ತಗ್ಗಿಸುವ ಜತೆಗೆ ಬೆಂಗಳೂರಿನ…
ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್…
ಮೀಸಲಾತಿ ಸೌಲಭ್ಯ ಇದ್ದರೂ ಕಠಿಣ ಪರೀಕ್ಷೆ ಪಾಸ್ ಮಾಡಲೇಬೇಕು ಟಿ.ಕೆ. ಹರೀಶ್ ಐತಿಹಾಸಿಕವಾಗಿ ಮತ್ತು ಸಾಮಾಜಿಕವಾಗಿ ಶೋಷಣೆಗೊಳಗಾಗಿ, ಶಿಕ್ಷಣ ಹಾಗೂ…
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…