ರಾಜ್ಯ

HMPV ವೈರಸ್‌ ಬಗ್ಗೆ ಆತಂಕ ಬೇಡ ಮುಂಜಾಗ್ರತೆ ಅಗತ್ಯ: ಸಚಿವ ದಿನೇಶ್‌ ಗುಂಡೂರಾವ್‌ ಸಲಹೆ

ಬೆಂಗಳೂರು:‌ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎರಡು ಎಚ್ಎಂಪಿವಿ ವೈರಸ್‌ ಪ್ರಕರಣಗಳು ಕಾಣಿಸಿಕೊಂಡಿದ್ದು, ಎಚ್‌ಎಂಪಿವಿ ಅಪಾಯಕಾರಿ ಅಲ್ಲ. ಯಾವುದೇ ಆತಂಕ ಬೇಡ. ಆದರೆ ಎಲ್ಲರೂ ಮುಂಜಾಗ್ರತೆ ವಹಿಸೋದು ಅಗತ್ಯ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗೋ಼ಷ್ಠಿ ನಡೆಸಿ ಮಾತನಾಡಿದ ಅವರು, ಎಚ್‌ಎಂಪಿವಿ ವೈರಸ್‌ ಬಗ್ಗೆ ಆತಂಕಪಡುವ ಆಗತ್ಯವಿಲ್ಲ. ಭಾರತದಲ್ಲಿ ಇದು ಹೊಸದೇನಲ್ಲ. ಬಹಳಷ್ಟು ವರ್ಷಗಳಿಂದ ಎಚ್‌ಎಂಪಿವಿ ವೈರಸ್‌ ವಿಶ್ವದಾದ್ಯಂತ ಇದೆ. ಈ ವೈರಸ್‌ನಿಂದ ಜೀವಕ್ಕೆ ಯಾವುದೇ ಅಪಾಯವಿಲ್ಲ ಎಂದು ಹೇಳಿದರು.

ದೇಶದಲ್ಲಿ ಎಚ್‌ಎಂಪಿವಿ ವೈರಸ್‌ ರೀತಿ ನೂರಾರು ರೀತಿಯ ವೈರಸ್‌ಗಳಿವೆ. ಯಾರು ಇದರ ಬಗ್ಗೆ ಭಯ ಪಡುವ ಆಗತ್ಯವಿಲ್ಲ. ಕಳೆದ 2001ರಲ್ಲಿ ಮೊದಲ ಬಾರಿಗೆ ಈ ವೈರಸನ್ನು ಪತ್ತೆ ಹಚ್ಚಲಾಗಿದೆ. ಈ ವೈರಸ್‌ನಿಂದ ಜನರು ಆತಂಕದಲ್ಲಿದ್ದಾರೆ. ಚಳಿಗಾಲದಲ್ಲಿ ಸಹಜವಾಗಿ ಕೆಮ್ಮು, ಕಫ ಇದ್ದೇ ಇರುತ್ತದೆ. ಆದರೆ ಇಂತಹ ಲಕ್ಷಣಗಳು ಎಚ್‌ಎಂಪಿವಿ ಪ್ರಕರಣವಲ್ಲ ಎಂದು ಸ್ಪಷ್ಟಪಡಿಸಿದರು.

ಇನ್ನು ನೆರೆಯ ದೇಶ ಚೀನಾದಲ್ಲಿನ ಈ ವೈರಸ್‌ ಹರಡುವಿಕೆ ಕುರಿತಾದ ಮಾಹಿತಿಯ ಬಗ್ಗೆ ಕೇಂದ್ರ ಸರ್ಕಾರ ಎಚ್ಚರ ವಹಿಸಬೇಕು. ಈಗಾಗಲೇ ದೇಶದಲ್ಲಿ ಗುಜರಾತ್‌, ಪುದುಚೇರಿಯಲ್ಲಿ ಎಚ್‌ಎಂಪಿವಿ ವೈರಸ್‌ ಪ್ರಕರಣ ದಾಖಲಾಗಿವೆ. ಇದರಿಂದ ಮಕ್ಕಳು ಭಯ ಪಡಬೇಕಾಗಿಲ್ಲ. ಕೇಂದ್ರ ಸರ್ಕಾರದಿಂದ ಯಾವುದೇ ಸೂಚನೆ ಬಂದಿಲ್ಲ. ಲಾಕ್‌ಡೌನ್‌ ಹಾಗೂ ಮಾಸ್ಕ್‌ ಸೇರಿದಂತೆ ಯಾವುದು ಇಲ್ಲ. ಯಾರೂ ಕೂಡ ಭಯಪಡಬೇಡಿ ಎಂದು ಹೇಳಿದರು.

 

ಆಂದೋಲನ ಡೆಸ್ಕ್

Recent Posts

ಗ್ಯಾಸ್ ಬೆಲೆ ಗಗನಕ್ಕೆ : ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…

6 hours ago

ಸಮೀಕ್ಷೆ ಭವಿಷ್ಯ : ದ್ರಾವಿಡ ಕೋಟೆ ಅಲುಗಾಟ ; ಕಿಂಗ್‌ ಮೇಕರ್‌ ಆಗ್ತಾರಾ ದಳಪತಿ ವಿಜಯ್?‌

ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…

7 hours ago

ಕಾರ್ಮಿಕರು ದೇಶದ ಆರ್ಥಿಕ, ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…

9 hours ago

ಹೊರ್ಮುಜ್‌ ಅನ್ನು ʼಟ್ರಂಪ್‌ ಜಲಸಂಧಿʼ ಎಂಬ ಹೆಸರಿನ ನಕ್ಷೆ ಹಂಚಿಕೊಂಡ ಟ್ರಂಪ್‌

ವಾಷಿಂಗ್ಟನ್‌ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್‌ ನಡುವಿನ ಸಂಘರ್ಷದಲ್ಲಿ ಹೊರ್ಮುಜ್‌ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…

11 hours ago

ಮೈಸೂರು | ಮರುಮೌಲ್ಯಮಾಪನ ; ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ

ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ  ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…

11 hours ago

ಜಾತ್ರೆ, ಧಾರ್ಮಿಕ ಆಚರಣೆಯಿಂದ ಸಂಸ್ಕೃತಿ, ಪರಂಪರೆಯ ಪುನರುತ್ಥಾನ : ಈಶ್ವರ ಖಂಡ್ರೆ

ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…

11 hours ago