ರಾಜ್ಯ

HMPV ವೈರಸ್‌ ಬಗ್ಗೆ ಆತಂಕ ಬೇಡ ಮುಂಜಾಗ್ರತೆ ಅಗತ್ಯ: ಸಚಿವ ದಿನೇಶ್‌ ಗುಂಡೂರಾವ್‌ ಸಲಹೆ

ಬೆಂಗಳೂರು:‌ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎರಡು ಎಚ್ಎಂಪಿವಿ ವೈರಸ್‌ ಪ್ರಕರಣಗಳು ಕಾಣಿಸಿಕೊಂಡಿದ್ದು, ಎಚ್‌ಎಂಪಿವಿ ಅಪಾಯಕಾರಿ ಅಲ್ಲ. ಯಾವುದೇ ಆತಂಕ ಬೇಡ. ಆದರೆ ಎಲ್ಲರೂ ಮುಂಜಾಗ್ರತೆ ವಹಿಸೋದು ಅಗತ್ಯ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗೋ಼ಷ್ಠಿ ನಡೆಸಿ ಮಾತನಾಡಿದ ಅವರು, ಎಚ್‌ಎಂಪಿವಿ ವೈರಸ್‌ ಬಗ್ಗೆ ಆತಂಕಪಡುವ ಆಗತ್ಯವಿಲ್ಲ. ಭಾರತದಲ್ಲಿ ಇದು ಹೊಸದೇನಲ್ಲ. ಬಹಳಷ್ಟು ವರ್ಷಗಳಿಂದ ಎಚ್‌ಎಂಪಿವಿ ವೈರಸ್‌ ವಿಶ್ವದಾದ್ಯಂತ ಇದೆ. ಈ ವೈರಸ್‌ನಿಂದ ಜೀವಕ್ಕೆ ಯಾವುದೇ ಅಪಾಯವಿಲ್ಲ ಎಂದು ಹೇಳಿದರು.

ದೇಶದಲ್ಲಿ ಎಚ್‌ಎಂಪಿವಿ ವೈರಸ್‌ ರೀತಿ ನೂರಾರು ರೀತಿಯ ವೈರಸ್‌ಗಳಿವೆ. ಯಾರು ಇದರ ಬಗ್ಗೆ ಭಯ ಪಡುವ ಆಗತ್ಯವಿಲ್ಲ. ಕಳೆದ 2001ರಲ್ಲಿ ಮೊದಲ ಬಾರಿಗೆ ಈ ವೈರಸನ್ನು ಪತ್ತೆ ಹಚ್ಚಲಾಗಿದೆ. ಈ ವೈರಸ್‌ನಿಂದ ಜನರು ಆತಂಕದಲ್ಲಿದ್ದಾರೆ. ಚಳಿಗಾಲದಲ್ಲಿ ಸಹಜವಾಗಿ ಕೆಮ್ಮು, ಕಫ ಇದ್ದೇ ಇರುತ್ತದೆ. ಆದರೆ ಇಂತಹ ಲಕ್ಷಣಗಳು ಎಚ್‌ಎಂಪಿವಿ ಪ್ರಕರಣವಲ್ಲ ಎಂದು ಸ್ಪಷ್ಟಪಡಿಸಿದರು.

ಇನ್ನು ನೆರೆಯ ದೇಶ ಚೀನಾದಲ್ಲಿನ ಈ ವೈರಸ್‌ ಹರಡುವಿಕೆ ಕುರಿತಾದ ಮಾಹಿತಿಯ ಬಗ್ಗೆ ಕೇಂದ್ರ ಸರ್ಕಾರ ಎಚ್ಚರ ವಹಿಸಬೇಕು. ಈಗಾಗಲೇ ದೇಶದಲ್ಲಿ ಗುಜರಾತ್‌, ಪುದುಚೇರಿಯಲ್ಲಿ ಎಚ್‌ಎಂಪಿವಿ ವೈರಸ್‌ ಪ್ರಕರಣ ದಾಖಲಾಗಿವೆ. ಇದರಿಂದ ಮಕ್ಕಳು ಭಯ ಪಡಬೇಕಾಗಿಲ್ಲ. ಕೇಂದ್ರ ಸರ್ಕಾರದಿಂದ ಯಾವುದೇ ಸೂಚನೆ ಬಂದಿಲ್ಲ. ಲಾಕ್‌ಡೌನ್‌ ಹಾಗೂ ಮಾಸ್ಕ್‌ ಸೇರಿದಂತೆ ಯಾವುದು ಇಲ್ಲ. ಯಾರೂ ಕೂಡ ಭಯಪಡಬೇಡಿ ಎಂದು ಹೇಳಿದರು.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

4 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

4 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

4 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

4 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

4 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

7 hours ago