ರಾಜ್ಯ

ರಾಜ್ಯದಲ್ಲಿ ಮಂಕಿ ಫಾಕ್ಸ್ ಆತಂಕ ಬೇಡ: ಸಚಿವ ಶರಣಪ್ರಕಾಶ್‌ ಪಾಟೀಲ್‌

ವಿಮಾನ ನಿಲ್ದಾಣ, ಬಂದರು ಸೇರಿದಂತೆ ಮತ್ತಿತರ ಕಡೆ ಬಿಗಿಕ್ರಮ

ಬೆಂಗಳೂರು: ಆಫ್ರಿಕಾ ಖಂಡದಲ್ಲಿ ಆತಂಕ ಮೂಡಿಸಿರುವ ಮಂಕಿಫಾಕ್ಸ್ ಬಗ್ಗೆ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ ಎಂದು ವಿಶ್ವ ಆರೋಗ್ಯಸಂಸ್ಥೆ ಘೋಷಿಸಿದ್ದರೂ ಈ ಸೋಂಕು ಭಾರತದಲ್ಲಿ ಹರಡುವ ಅಪಾಯ ಕಡಿಮೆ. ಹೀಗಾಗಿ ಯಾರೊಬ್ಬರು ಆತಂಕಕ್ಕೆ ಒಳಗಾಗಬಾರದೆಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್‌ ಪಾಟಿಲ್‌ ರಾಜ್ಯದ ಜನತೆಗೆ ಅಭಯ ನೀಡಿದ್ದಾರೆ.

ಶುಕ್ರವಾರ ವಿಕಾಸಸೌಧದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಮಂಕಿಫಾಕ್ಸ್ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆ ನಡೆಸಿ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು

ಕಳೆದ ಆ.14ರಂದು ವಿಶ್ವ ಆರೋಗ್ಯ ಸಂಸ್ಥೆ ಮಂಕಿಫಾಕ್ಸ ಅನ್ನು ಜಾಗತಿಕ ಆರೋಗ್ಯ ತುರ್ತುಸ್ಥಿತಿಯಾಗಿ ಘೋಷಿಸಿದೆ. ಆಫ್ರಿಕಾದಲ್ಲಿ ಹರಡಿರುವ ಸೋಂಕು ಕಾಣಿಸಿಕೊಂಡಿರುವ ಸೋಂಕನ್ನು ಎದುರಿಸಲು ರಾಜ್ಯ ಸರ್ಕಾರ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದರು.

ಈ ಸೋಂಕು ಇಲ್ಲಿಯವರೆಗೆ ಭಾರತದಲ್ಲಿ ಕಂಡು ಬಂದಿಲ್ಲ. ಈ ಹಿನ್ನೆಲೆ ಯಾವುದೇ ಆತಂಕ ಬೇಡ. ಎನ್‌ಸಿಡಿಸಿ ಜಂಟಿ ನಿರ್ವಹಣೆ ಸಂಸ್ಥೆ ಇದರ ಹರಡುವಿಕೆ ಅಪಾಯದ ಮೌಲ್ಯಮಾಪನ ನಡೆಸುತ್ತಿದೆ. ಒಂದು ವೇಳೆ ಪ್ರಕರಣಗಳಿದ್ದರೆ ಪ್ರವೇಶ ಹಂತದಲ್ಲೇ ಎಚ್ಚರಿಸಲಾಗುವುದು ಎಂದು ಪಾಟೀಲ್‌ ಮಾಹಿತಿ ನೀಡಿದರು.

“ಸರ್ಕಾರದ ಮಾರ್ಗಸೂಚಿ ಪ್ರಕಾರ ಅಗತ್ಯ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲಾಗಿದೆ. ಮಂಕಿಫಾಕ್ಸ ಬಗ್ಗೆ ಬಹಳಷ್ಟು ಸುದ್ದಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಸಂಬಂಧ ಅಧಿಕಾರಿಗಳ ಸಭೆ ನಡೆಸಿ ಸೂಕ್ತ ನಿರ್ದೇಶನ ನೀಡಲಾಗಿದೆ. ನಮ ರಾಜ್ಯದಲ್ಲಿ ಮಂಕಿಫಾಕ್ಸ ಒಂದು ಪ್ರಕರಣವೂ ಕಂಡು ಬಂದಿಲ್ಲ. ಇದರಿಂದ ರಾಜ್ಯದ ಜನರು ಆತಂಕಕ್ಕೆ ಒಳಗಾಗುವುದು ಬೇಡ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇದರ ಟೆಸ್ಟ್‌ ಮಾಡುವ ಸೌಲಭ್ಯವಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಆಸ್ಪತ್ರೆಯಲ್ಲಿ ಬೆಡ್‌ಗಳ ವ್ಯವಸ್ಥೆಯನ್ನು ಮಾಡಲಾಗಿದೆ” ಎಂದು ಸಚಿವರು ಹೇಳಿದರು.

ಇದು ವೈರಲ್‌ ಇನ್ಫೆಕ್ಷನ್ ಆಗಿರಲಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರೋಗ ಪರೀಕ್ಷೆ ಉಚಿತವಾಗಿರುತ್ತದೆ. ಸದ್ಯಕ್ಕೆ 50 ಹಾಸಿಗೆಯ ಐದು ಐಸಿಯು ವ್ಯವಸ್ಥೆ ಮಾಡಲಾಗಿದೆ. ಇಲ್ಲಿಯವರೆಗೂ ಒಂದೇ ಒಂದು ಕೇಸ್‌‍ ಪತ್ತೆಯಾಗಿಲ್ಲದಿದ್ದರೂ ಏಕಾಏಕಿ ಕಂಡುಬಂದರೆ ಸಮಸ್ಯೆಯಾಗದಿರಲಿ ಎಂಬ ಉದ್ದೇಶದಿಂದ ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲಾ ರೀತಿಯ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಪಾಟೀಲ್ ತಿಳಿಸಿದರು.

ಈ ಸಂಬಂಧ ಆರೋಗ್ಯ ಇಲಾಖೆ ಜೊತೆಗೂ ಚರ್ಚೆ ನಡೆಸಲಾಗಿದೆ. ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಕ್ರೀನಿಂಗ್‌ ಮಾಡುವ ಬಗ್ಗೆ ಆರೋಗ್ಯಇಲಾಖೆಗೆ ಕೇಂದ್ರ ಸರ್ಕಾರ ಸೂಚನೆ ನೀಡುತ್ತದೆ ಎಂದು ಸಚಿವರು ತಿಳಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

2 hours ago

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

2 hours ago

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

4 hours ago

ಚಾ.ನಗರ | ಸಿದ್ದಲಿಂಗಪುರ ಬಳಿ ಹುಲಿ ದಾಳಿ ; 4 ಮೇಕೆಗಳು ಸಾವು

ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…

5 hours ago

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…

8 hours ago

ಇದು ಕೇವಲ ಆರಂಭ: ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕೈಗೊಂಡಿರುವ ಕೈಗೊಂಡಿರುವ ಬೃಹತ್‌ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್‌ ಕುಮಾರಸ್ವಾಮಿ ಇದು ಕೇವಲ…

8 hours ago