ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ವಿದ್ಯಾರ್ಥಿನಿ ಕುಮಾರಿ ಸೌಜನ್ಯ ಮೇಲೆ ಹದಿನಾಲ್ಕು ವರ್ಷಗಳ ಹಿಂದೆ ನಡೆದಿದ್ದ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದೆ.
ಯೂಟ್ಯೂಬರ್ ಸಮೀರ್ ಎಂಬಾತ ಮಾಡಿದ್ದ ವಿಡಿಯೋ ಭಾರಿ ಸಂಚಲನ ಸೃಷ್ಟಿಸಿದೆ. ಈ ಬೆನ್ನೆಲ್ಲೇ ಎಚ್ಚೆತ್ತ ರಾಜ್ಯ ಪೊಲೀಸ್ ಇಲಾಖೆ, ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ರಾಜ್ಯಾದ್ಯಂತ ನಿಗಾ ವಹಿಸುವಂತೆ ಸೂಚಿಸಿದೆ.
ಈ ಕುರಿತು ಬುಧವಾರ ರಾಜ್ಯಾ ಪೊಲೀಸ್ ಮಹಾನಿರ್ದೇಶಕರು ಫ್ಯಾಕ್ಸ್ ಮೂಲಕ ಎಲ್ಲಾ ಜಿಲ್ಲಾ ಕಮಿಷನರ್ ಹಾಗೂ ಎಸ್ಪಿ ಗಳಿಗೆ ಸಾಮಾಜಿಕ ಜಾಲತಾಣಗಳ ನಿಗಾ ಘಟಕಗಳನ್ನು ಚರುಕುಗೊಳಿಸುವಂತೆ ಸೂಚಿಸಿದ್ದಾರೆ.
ಈ ಹಿಂದೆ ಧರ್ಮಸ್ಥಳದಲ್ಲಿ ನಡೆದಿದ್ದ ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋವೊಂದು ಹರಿದಾಡುತ್ತಿದ್ದು, ಈ ವಿಷಯ ಮೇಲಾಧಿಕಾರಿಗಳ ಗಮನಕ್ಕೆ ತರುವಲ್ಲಿ ಘಟಕಾಧಿಕಾರಿಗಳು ವಿಫಲರಾಗಿರುತ್ತೀರಿ ಎಂದು ಬೇಸರ ವ್ಯಕ್ತಪಡಿಸಿರುವ ಅವರು, ಈ ವಿಷಯ ಕುರಿತಂತೆ ಸಾರ್ವಜನಿಕರಲ್ಲಿ ಪರ-ವಿರೋಧ ಅನಿಸಿಕೆಗಳು ಉದ್ಭವಿಸಿ ಸಮಾಜದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಂಭವವಿದೆ. ಆದ್ದರಿಂದ, ಘಟಕಾಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಿ ಸಾಮಾಜಿಕ ಮಾಧ್ಯಮ ಮೇಲ್ವಿಚಾರಣಾ ಸೆಲ್ಗಳನ್ನು ಚುರುಕುಗೊಳಿಸುವಂತೆ ನಿರ್ದೇಶಿಸಿದ್ದಾರೆ.
ಅದೇ ರೀತಿ, ಸಾಮಾಜಿಕ ಜಾಲತಾಣಗಳಲ್ಲಿ ಹಾಕುವ ಪೋಸ್ಟ್ಗಳ ಕುರಿತು ನಿಗಾ ವಹಿಸಬೇಕು. ಬಳಿಕ ಕ್ರಮದ ಬಗ್ಗೆ ಮಾಹಿತಿ ನೀಡುವಂತೆ ಸೂಚನೆ ಹೊರಡಿಸಲಾಗಿದೆ.
ಏನಿದು ಸಂಚಲನದ ವೀಡಿಯೊ…
Dhootha : Sameer MD ಎಂಬ ಯೂಟ್ಯೂಬ್ ಚಾನಲ್ನಲ್ಲಿ ಕಳೆದ ಏಳು ದಿನದ ಹಿಂದೆ ಸಮೀರ್, ಕುಮಾರಿ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಸಂಬಂಧ ವೀಡಿಯೊ ಮಾಡಿ ಬಿಟ್ಟಿದ್ದು, ಈ ವೀಡಿಯೊ 39 ನಿಮಿಷ 8 ಸೆಕೆಂಡ್ ಇದೆ.
ಮೊದಲ ನಾಲ್ಕು ದಿನ ನಿಧಾನಕ್ಕೆ ವೀಕ್ಷಣೆ ಪಡೆದುಕೊಂಡಿದ್ದ, ಈ ವೀಡಿಯೊ ಕಳೆದ ಮೂರು ದಿನಗಳಲ್ಲಿ ಸೋಷಿಯಲ್ ಮೀಡಿಯಾದಲ್ಲೇ ಸಂಚಲನ ಸೃಷ್ಟಿಸಿದೆ. ಅಕ್ಷರಶಃ ಭಾರಿ ವೈರಲ್ ಆಗಿದ್ದು, ಇದೀಗ ಗುರುವಾರ ಮಧ್ಯಾಹ್ನದ ವೇಳೆ ಬರೋಬ್ಬರಿ 14,194,233 ಕೋಟಿಗೂ ಹೆಚ್ಚು ವೀಕ್ಷಣೆ ಪಡೆದುಕೊಂಡಿದೆ. ಇದಕ್ಕೆ 47ಸಾವಿರಕ್ಕೂ ಹೆಚ್ಚು ಕಾಮೆಂಟ್ಗಳು ಬಂದಿದ್ದು, 1 ಮಿಲಿಯನ್ ಜನರು ಲೈಕ್ ಬಟನ್ ಒತ್ತಿದ್ದಾರೆ.
ಅಲ್ಲದೇ, ಈ ವೀಡಿಯೊ ಬೇರೆ ಬೇರೆ ಯೂಟ್ಯೂಬ್ ಚಾನಲ್ಗಳಲ್ಲಿಯೂ ಮರು ಪೋಸ್ಟ್ ಆಗಿ ವೀಕ್ಷಣೆ ಪಡೆಯುತ್ತಿದೆ. ಅದೇ ರೀತಿ, ಇನ್ಸ್ಟಾಗ್ರಾಮ್, ಫೇಸ್ಬುಕ್, ಎಕ್ಸ್ ಸೇರಿದಂತೆ ಇತರೆಡೆ ಈ ವೀಡಿಯೊ ಬಿಸಿ ಬಿಸಿ ಚರ್ಚೆ ಹುಟ್ಟುಹಾಕಿದೆ.
ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…
ಮೈಸೂರು : ಸುಧಾರಣೆ ನೆಪದಲ್ಲಿ ಕ್ರೌರ್ಯ ನಡೆಯುತ್ತಿದೆ. ಜೈಲಲ್ಲಿರುವ ಕೈದಿಗಳಿಗೆ ಕನಸು ಕಾಣುವ ಸ್ವಾತಂತ್ರ್ಯವೂ ಇಲ್ಲದಾಗಿದೆ. ಆರ್ಥಿಕ, ಅಧಿಕಾರ ಮತ್ತು…
ಜೆರುಸಲೆಮ್ : ಪಶ್ಚಿಮ ಏಷ್ಯಾದ ಸಂಘರ್ಷ ದಿನೇ ದಿನೇ ಹೆಚ್ಚುತ್ತಿದೆ. ಈ ವೇಳೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು…
ಹನೂರು : ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಕೆರೆಗಳನ್ನು ಅಭಿವೃದ್ಧಿಪಡಿಸಿ ನೀರಾವರಿ ವ್ಯವಸ್ಥೆ ಕಲ್ಪಿಸುವುದರ ಮೂಲಕ ರೈತರಿಗೆ ವ್ಯವಸಾಯಕ್ಕೆ ಹೆಚ್ಚಿನ…
ಹನೂರು : ಮಳೆಗಾಲದ ಸಂದರ್ಭದಲ್ಲಿ ರೈತರು ಹಾಗೂ ನೆರೆಯ ತಮಿಳುನಾಡಿಗೆ ತರಕಾರಿ ತೆಗೆದುಕೊಂಡು ಹೋಗುತ್ತಿದ್ದ ವಾಹನ ಸವಾರರಿಗೆ ತೊಂದರೆಯಾಗುತ್ತಿದ್ದ ಹಿನ್ನೆಲೆ,…
ಬೆಂಗಳೂರು : ಭಾರತೀಯ ಚುನಾವಣಾ ಆಯೋಗವು(ಇಸಿಐ) ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಾಂಕವನ್ನು ಭಾನುವಾರ ಪ್ರಕಟಿಸಿದೆ. ಈ ಕುರಿತು…