ರಾಜ್ಯ

ದೂತ-ಸಮೀರ್‌ ವೀಡಿಯೊ ಸಂಚಲನ ; ವೈರಲ್‌ ಬೆನ್ನಲ್ಲೇ SPಗಳಿಗೆ ADGP ಮಹತ್ವದ ಸೂಚನೆ

ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ವಿದ್ಯಾರ್ಥಿನಿ ಕುಮಾರಿ ಸೌಜನ್ಯ ಮೇಲೆ ಹದಿನಾಲ್ಕು ವರ್ಷಗಳ ಹಿಂದೆ ನಡೆದಿದ್ದ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದೆ.

ಯೂಟ್ಯೂಬರ್‌ ಸಮೀರ್‌ ಎಂಬಾತ ಮಾಡಿದ್ದ ವಿಡಿಯೋ ಭಾರಿ ಸಂಚಲನ ಸೃಷ್ಟಿಸಿದೆ. ಈ ಬೆನ್ನೆಲ್ಲೇ ಎಚ್ಚೆತ್ತ ರಾಜ್ಯ ಪೊಲೀಸ್‌ ಇಲಾಖೆ, ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ರಾಜ್ಯಾದ್ಯಂತ ನಿಗಾ ವಹಿಸುವಂತೆ ಸೂಚಿಸಿದೆ.

ಈ ಕುರಿತು ಬುಧವಾರ ರಾಜ್ಯಾ ಪೊಲೀಸ್‌ ಮಹಾನಿರ್ದೇಶಕರು ಫ್ಯಾಕ್ಸ್‌ ಮೂಲಕ ಎಲ್ಲಾ ಜಿಲ್ಲಾ ಕಮಿಷನರ್‌ ಹಾಗೂ ಎಸ್ಪಿ ಗಳಿಗೆ ಸಾಮಾಜಿಕ ಜಾಲತಾಣಗಳ ನಿಗಾ ಘಟಕಗಳನ್ನು ಚರುಕುಗೊಳಿಸುವಂತೆ ಸೂಚಿಸಿದ್ದಾರೆ.

ಈ ಹಿಂದೆ ಧರ್ಮಸ್ಥಳದಲ್ಲಿ ನಡೆದಿದ್ದ ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋವೊಂದು ಹರಿದಾಡುತ್ತಿದ್ದು, ಈ ವಿಷಯ ಮೇಲಾಧಿಕಾರಿಗಳ ಗಮನಕ್ಕೆ ತರುವಲ್ಲಿ ಘಟಕಾಧಿಕಾರಿಗಳು ವಿಫಲರಾಗಿರುತ್ತೀರಿ ಎಂದು ಬೇಸರ ವ್ಯಕ್ತಪಡಿಸಿರುವ ಅವರು, ಈ ವಿಷಯ ಕುರಿತಂತೆ ಸಾರ್ವಜನಿಕರಲ್ಲಿ ಪರ-ವಿರೋಧ ಅನಿಸಿಕೆಗಳು ಉದ್ಭವಿಸಿ ಸಮಾಜದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಂಭವವಿದೆ. ಆದ್ದರಿಂದ, ಘಟಕಾಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಿ ಸಾಮಾಜಿಕ ಮಾಧ್ಯಮ ಮೇಲ್ವಿಚಾರಣಾ ಸೆಲ್‌ಗಳನ್ನು ಚುರುಕುಗೊಳಿಸುವಂತೆ ನಿರ್ದೇಶಿಸಿದ್ದಾರೆ.

ಅದೇ ರೀತಿ, ಸಾಮಾಜಿಕ ಜಾಲತಾಣಗಳಲ್ಲಿ ಹಾಕುವ ಪೋಸ್ಟ್‌ಗಳ ಕುರಿತು ನಿಗಾ ವಹಿಸಬೇಕು. ಬಳಿಕ ಕ್ರಮದ ಬಗ್ಗೆ ಮಾಹಿತಿ ನೀಡುವಂತೆ ಸೂಚನೆ ಹೊರಡಿಸಲಾಗಿದೆ.

ಏನಿದು ಸಂಚಲನದ ವೀಡಿಯೊ…

Dhootha : Sameer MD ಎಂಬ ಯೂಟ್ಯೂಬ್‌ ಚಾನಲ್‌ನಲ್ಲಿ ಕಳೆದ ಏಳು ದಿನದ ಹಿಂದೆ ಸಮೀರ್‌, ಕುಮಾರಿ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಸಂಬಂಧ ವೀಡಿಯೊ ಮಾಡಿ ಬಿಟ್ಟಿದ್ದು, ಈ ವೀಡಿಯೊ 39 ನಿಮಿಷ 8 ಸೆಕೆಂಡ್‌ ಇದೆ.

ಮೊದಲ ನಾಲ್ಕು ದಿನ ನಿಧಾನಕ್ಕೆ ವೀಕ್ಷಣೆ ಪಡೆದುಕೊಂಡಿದ್ದ, ಈ ವೀಡಿಯೊ ಕಳೆದ ಮೂರು ದಿನಗಳಲ್ಲಿ ಸೋಷಿಯಲ್‌ ಮೀಡಿಯಾದಲ್ಲೇ ಸಂಚಲನ ಸೃಷ್ಟಿಸಿದೆ. ಅಕ್ಷರಶಃ ಭಾರಿ ವೈರಲ್‌ ಆಗಿದ್ದು, ಇದೀಗ ಗುರುವಾರ ಮಧ್ಯಾಹ್ನದ ವೇಳೆ ಬರೋಬ್ಬರಿ 14,194,233 ಕೋಟಿಗೂ ಹೆಚ್ಚು ವೀಕ್ಷಣೆ ಪಡೆದುಕೊಂಡಿದೆ. ಇದಕ್ಕೆ 47ಸಾವಿರಕ್ಕೂ ಹೆಚ್ಚು ಕಾಮೆಂಟ್‌ಗಳು ಬಂದಿದ್ದು, 1 ಮಿಲಿಯನ್‌ ಜನರು ಲೈಕ್‌ ಬಟನ್‌ ಒತ್ತಿದ್ದಾರೆ.

ಅಲ್ಲದೇ, ಈ ವೀಡಿಯೊ ಬೇರೆ ಬೇರೆ ಯೂಟ್ಯೂಬ್ ಚಾನಲ್‌ಗಳಲ್ಲಿಯೂ ಮರು ಪೋಸ್ಟ್‌ ಆಗಿ ವೀಕ್ಷಣೆ ಪಡೆಯುತ್ತಿದೆ. ಅದೇ ರೀತಿ, ಇನ್‌ಸ್ಟಾಗ್ರಾಮ್‌, ಫೇಸ್‌ಬುಕ್‌, ಎಕ್ಸ್‌ ಸೇರಿದಂತೆ ಇತರೆಡೆ ಈ ವೀಡಿಯೊ ಬಿಸಿ ಬಿಸಿ ಚರ್ಚೆ ಹುಟ್ಟುಹಾಕಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

1 day ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

1 day ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

1 day ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

1 day ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

1 day ago