ರಾಜ್ಯ

ದೂತ-ಸಮೀರ್‌ ವೀಡಿಯೊ ಸಂಚಲನ ; ವೈರಲ್‌ ಬೆನ್ನಲ್ಲೇ SPಗಳಿಗೆ ADGP ಮಹತ್ವದ ಸೂಚನೆ

ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ವಿದ್ಯಾರ್ಥಿನಿ ಕುಮಾರಿ ಸೌಜನ್ಯ ಮೇಲೆ ಹದಿನಾಲ್ಕು ವರ್ಷಗಳ ಹಿಂದೆ ನಡೆದಿದ್ದ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದೆ.

ಯೂಟ್ಯೂಬರ್‌ ಸಮೀರ್‌ ಎಂಬಾತ ಮಾಡಿದ್ದ ವಿಡಿಯೋ ಭಾರಿ ಸಂಚಲನ ಸೃಷ್ಟಿಸಿದೆ. ಈ ಬೆನ್ನೆಲ್ಲೇ ಎಚ್ಚೆತ್ತ ರಾಜ್ಯ ಪೊಲೀಸ್‌ ಇಲಾಖೆ, ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ರಾಜ್ಯಾದ್ಯಂತ ನಿಗಾ ವಹಿಸುವಂತೆ ಸೂಚಿಸಿದೆ.

ಈ ಕುರಿತು ಬುಧವಾರ ರಾಜ್ಯಾ ಪೊಲೀಸ್‌ ಮಹಾನಿರ್ದೇಶಕರು ಫ್ಯಾಕ್ಸ್‌ ಮೂಲಕ ಎಲ್ಲಾ ಜಿಲ್ಲಾ ಕಮಿಷನರ್‌ ಹಾಗೂ ಎಸ್ಪಿ ಗಳಿಗೆ ಸಾಮಾಜಿಕ ಜಾಲತಾಣಗಳ ನಿಗಾ ಘಟಕಗಳನ್ನು ಚರುಕುಗೊಳಿಸುವಂತೆ ಸೂಚಿಸಿದ್ದಾರೆ.

ಈ ಹಿಂದೆ ಧರ್ಮಸ್ಥಳದಲ್ಲಿ ನಡೆದಿದ್ದ ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋವೊಂದು ಹರಿದಾಡುತ್ತಿದ್ದು, ಈ ವಿಷಯ ಮೇಲಾಧಿಕಾರಿಗಳ ಗಮನಕ್ಕೆ ತರುವಲ್ಲಿ ಘಟಕಾಧಿಕಾರಿಗಳು ವಿಫಲರಾಗಿರುತ್ತೀರಿ ಎಂದು ಬೇಸರ ವ್ಯಕ್ತಪಡಿಸಿರುವ ಅವರು, ಈ ವಿಷಯ ಕುರಿತಂತೆ ಸಾರ್ವಜನಿಕರಲ್ಲಿ ಪರ-ವಿರೋಧ ಅನಿಸಿಕೆಗಳು ಉದ್ಭವಿಸಿ ಸಮಾಜದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಂಭವವಿದೆ. ಆದ್ದರಿಂದ, ಘಟಕಾಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಿ ಸಾಮಾಜಿಕ ಮಾಧ್ಯಮ ಮೇಲ್ವಿಚಾರಣಾ ಸೆಲ್‌ಗಳನ್ನು ಚುರುಕುಗೊಳಿಸುವಂತೆ ನಿರ್ದೇಶಿಸಿದ್ದಾರೆ.

ಅದೇ ರೀತಿ, ಸಾಮಾಜಿಕ ಜಾಲತಾಣಗಳಲ್ಲಿ ಹಾಕುವ ಪೋಸ್ಟ್‌ಗಳ ಕುರಿತು ನಿಗಾ ವಹಿಸಬೇಕು. ಬಳಿಕ ಕ್ರಮದ ಬಗ್ಗೆ ಮಾಹಿತಿ ನೀಡುವಂತೆ ಸೂಚನೆ ಹೊರಡಿಸಲಾಗಿದೆ.

ಏನಿದು ಸಂಚಲನದ ವೀಡಿಯೊ…

Dhootha : Sameer MD ಎಂಬ ಯೂಟ್ಯೂಬ್‌ ಚಾನಲ್‌ನಲ್ಲಿ ಕಳೆದ ಏಳು ದಿನದ ಹಿಂದೆ ಸಮೀರ್‌, ಕುಮಾರಿ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಸಂಬಂಧ ವೀಡಿಯೊ ಮಾಡಿ ಬಿಟ್ಟಿದ್ದು, ಈ ವೀಡಿಯೊ 39 ನಿಮಿಷ 8 ಸೆಕೆಂಡ್‌ ಇದೆ.

ಮೊದಲ ನಾಲ್ಕು ದಿನ ನಿಧಾನಕ್ಕೆ ವೀಕ್ಷಣೆ ಪಡೆದುಕೊಂಡಿದ್ದ, ಈ ವೀಡಿಯೊ ಕಳೆದ ಮೂರು ದಿನಗಳಲ್ಲಿ ಸೋಷಿಯಲ್‌ ಮೀಡಿಯಾದಲ್ಲೇ ಸಂಚಲನ ಸೃಷ್ಟಿಸಿದೆ. ಅಕ್ಷರಶಃ ಭಾರಿ ವೈರಲ್‌ ಆಗಿದ್ದು, ಇದೀಗ ಗುರುವಾರ ಮಧ್ಯಾಹ್ನದ ವೇಳೆ ಬರೋಬ್ಬರಿ 14,194,233 ಕೋಟಿಗೂ ಹೆಚ್ಚು ವೀಕ್ಷಣೆ ಪಡೆದುಕೊಂಡಿದೆ. ಇದಕ್ಕೆ 47ಸಾವಿರಕ್ಕೂ ಹೆಚ್ಚು ಕಾಮೆಂಟ್‌ಗಳು ಬಂದಿದ್ದು, 1 ಮಿಲಿಯನ್‌ ಜನರು ಲೈಕ್‌ ಬಟನ್‌ ಒತ್ತಿದ್ದಾರೆ.

ಅಲ್ಲದೇ, ಈ ವೀಡಿಯೊ ಬೇರೆ ಬೇರೆ ಯೂಟ್ಯೂಬ್ ಚಾನಲ್‌ಗಳಲ್ಲಿಯೂ ಮರು ಪೋಸ್ಟ್‌ ಆಗಿ ವೀಕ್ಷಣೆ ಪಡೆಯುತ್ತಿದೆ. ಅದೇ ರೀತಿ, ಇನ್‌ಸ್ಟಾಗ್ರಾಮ್‌, ಫೇಸ್‌ಬುಕ್‌, ಎಕ್ಸ್‌ ಸೇರಿದಂತೆ ಇತರೆಡೆ ಈ ವೀಡಿಯೊ ಬಿಸಿ ಬಿಸಿ ಚರ್ಚೆ ಹುಟ್ಟುಹಾಕಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪಿಯುಸಿ : ಸರ್ಕಾರಿ ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಳದ ನಿರೀಕ್ಷೆ

ಮಕ್ಕಳೊಂದಿಗೆ ಸರ್ಕಾರಿ ಕಾಲೇಜುಗಳತ್ತ ಮುಖ ಮಾಡಿದ ಪೋಷಕರು ಗಿರೀಶ್‌ ಹುಣಸೂರು ಮೈಸೂರು : ೨೦೨೫-೨೬ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ…

45 mins ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ : ಕರ್ನಾಟಕದ ಮೇಲೆ ಬಿಜೆಪಿಯ ರಾಷ್ಟ್ರೀಯ ನಾಯಕರ ಕಣ್ಣು

ದಕ್ಷಿಣದ ರಾಜ್ಯಗಳಲ್ಲಿ ತನ್ನ ಪಾರುಪತ್ಯ ಭದ್ರಗೊಳಿಸಲು ಬಿಜೆಪಿಗೆ ಕರ್ನಾಟಕ ಅವಶ್ಯ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ…

1 hour ago

ತಮಿಳುನಾಡು ಸಿಎಂ ವಿಜಯ್ ಮುಂದೆ ಸವಾಲುಗಳ ಬೆಟ್ಟ

ತಮಿಳುನಾಡಿನ ಮುಖ್ಯಮಂತ್ರಿಯಾಗಿ ಜೋಸೆಫ್ ವಿಜಯ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆ ಮೂಲಕ ತಮಿಳುನಾಡಿನಲ್ಲಿ ವಿಜಯ್ ನೇತೃತ್ವದ ಟಿವಿಕೆ ಮಿತ್ರ ಪಕ್ಷಗಳ…

2 hours ago

ಲ್ಯಾನ್ಸ್‌ಡೌನ್‌ ಕಟ್ಟಡಕ್ಕಿಲ್ಲ ಮುಕ್ತಿ : ಚರ್ಚೆಯಲ್ಲೇ ಕಾಲಹರಣ

ಕಟ್ಟಡವನ್ನು ಜೀರ್ಣೋದ್ಧಾರ ಮಾಡಬೇಕೋ? ನೆಲಸಮಗೊಳಿಸಿ ಹೊಸದಾಗಿ ನಿರ್ಮಿಸಬೇಕೋ? ಸುಪ್ರೀಂ ತೀರ್ಪು ಎದುರು ನೋಡುತ್ತಿರುವ ಪಾಲಿಕೆ ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು :…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.11 ಸೋಮವಾರ

2 hours ago

ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್‌ ಪತ್ನಿ, ಮಕ್ಕಳು ಗೈರು

ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…

13 hours ago