ರಾಜ್ಯ

ಸೊಸೆಗೆ ವರದಕ್ಷಿಣೆ ಕಿರುಕುಳ ಆರೋಪ: ನಿರ್ದೇಶಕ ಎಸ್.ನಾರಾಯಣ್ ಹಾಗೂ ಕುಟುಂಬದ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಕನ್ನಡ ಚಿತ್ರರಂಗದ ನಿರ್ದೇಶಕ ಎಸ್.ನಾರಾಯಣ್‌ ಹಾಗೂ ಅವರ ಕುಟುಂಬದ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಸೊಸೆಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪದ ಮೇರೆಗೆ ಬೆಂಗಳೂರಿನ ಜ್ಞಾನಭಾರತಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬಗ್ಗೆ ಎಸ್.ನಾರಾಯಣ್‌ ಸೊಸೆ ಪವಿತ್ರ ಗಂಭೀರ ಆರೋಪ ಮಾಡಿದ್ದಾರೆ. ಕಳೆದ 2021ರಲ್ಲಿ ಎಸ್‌.ನಾರಾಯಣ್‌ ಪುತ್ರ ಪವನ್‌ ಹಾಗೂ ಪವಿತ್ರ ಮದುವೆ ಆಗಿದ್ದರು.

ನನ್ನ ಮದುವೆ ಅವಧಿಯಲ್ಲಿ 1 ಲಕ್ಷದ ಉಂಗುರ ಹಾಗೂ ಖರ್ಚು ವೆಚ್ಚದ ಹಣ ಪಡೆದಿದ್ದಾರೆ. ನನ್ನ ಪತಿ ಪವನ್‌ ಓದಿರಲಿಲ್ಲ. ಎಲ್ಲಿಯೂ ಕೂಡ ಕೆಲಸ ಸಿಕ್ಕಿರಲಿಲ್ಲ. ನಾನೇ ಎಲ್ಲಾ ಕೆಲಸ ಮಾಡಿ ಮನೆಯ ಸಂಸಾರ ಸಾಗಿಸುತ್ತಿದ್ದೆ. ಇದರ ನಡುವೆ ಫಿಲ್ಮ್‌ ಇನ್ಸ್‌ಸ್ಟಿಟ್ಯೂಟ್‌ ಕೂಡ ಆರಂಭಿಸಲಾಗಿತ್ತು. ಇದನ್ನು ಶುರು ಮಾಡಲು ಪವನ್‌ ನಮ್ಮ ಬಳಿ ಹಣ ಕೇಳಿದ್ದರು. ಆಗ ನಾವು ಒಡವೆಗಳನ್ನು ಅಟ ಇಟ್ಟು ಹಣ ಕೊಟ್ಟಿದ್ದೆವು. ನಂತರ ಸಂಸ್ಥೆ ನಷ್ಟದಲ್ಲಿ ಮುಳುಗಿತು. ಆಗ ನಾವು 10 ಲಕ್ಷ ರೂ ಹಣವನ್ನು ಪವನ್‌ಗೆ ನೀಡಿದ್ದೆವು. ಇದಾದ ನಂತರವೂ ಪವನ್‌ ಹಾಗೂ ಅವರ ತಂದೆ, ತಾಯಿ ನನಗೆ ವರದಕ್ಷಿಣೆ ತರುವಂತೆ ಕಿರುಕುಳ ನೀಡಿದ್ದರು ಎಂದು ಪವಿತ್ರ ಗಂಭೀರ ಆರೋಪ ಮಾಡಿದ್ದಾರೆ.

ವರದಕ್ಷಿಣೆ ತರುವಂತೆ ನನ್ನನ್ನು ಮನೆಯಿಂದ ಹೊರಹಾಕಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಆರೋಪ ಪ್ರಕರಣದಲ್ಲಿ ಪವನ್‌ ಮೊದಲ ಆರೋಪಿಯಾಗಿದ್ದು, ಎಸ್.ನಾರಾಯಣ್‌ ಎರಡನೇ ಆರೋಪಿ ಆಗಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

10 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

10 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

10 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

10 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

10 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

13 hours ago