ರಾಜ್ಯ

ಸೊಸೆಗೆ ವರದಕ್ಷಿಣೆ ಕಿರುಕುಳ ಆರೋಪ: ನಿರ್ದೇಶಕ ಎಸ್.ನಾರಾಯಣ್ ಹಾಗೂ ಕುಟುಂಬದ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಕನ್ನಡ ಚಿತ್ರರಂಗದ ನಿರ್ದೇಶಕ ಎಸ್.ನಾರಾಯಣ್‌ ಹಾಗೂ ಅವರ ಕುಟುಂಬದ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಸೊಸೆಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪದ ಮೇರೆಗೆ ಬೆಂಗಳೂರಿನ ಜ್ಞಾನಭಾರತಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬಗ್ಗೆ ಎಸ್.ನಾರಾಯಣ್‌ ಸೊಸೆ ಪವಿತ್ರ ಗಂಭೀರ ಆರೋಪ ಮಾಡಿದ್ದಾರೆ. ಕಳೆದ 2021ರಲ್ಲಿ ಎಸ್‌.ನಾರಾಯಣ್‌ ಪುತ್ರ ಪವನ್‌ ಹಾಗೂ ಪವಿತ್ರ ಮದುವೆ ಆಗಿದ್ದರು.

ನನ್ನ ಮದುವೆ ಅವಧಿಯಲ್ಲಿ 1 ಲಕ್ಷದ ಉಂಗುರ ಹಾಗೂ ಖರ್ಚು ವೆಚ್ಚದ ಹಣ ಪಡೆದಿದ್ದಾರೆ. ನನ್ನ ಪತಿ ಪವನ್‌ ಓದಿರಲಿಲ್ಲ. ಎಲ್ಲಿಯೂ ಕೂಡ ಕೆಲಸ ಸಿಕ್ಕಿರಲಿಲ್ಲ. ನಾನೇ ಎಲ್ಲಾ ಕೆಲಸ ಮಾಡಿ ಮನೆಯ ಸಂಸಾರ ಸಾಗಿಸುತ್ತಿದ್ದೆ. ಇದರ ನಡುವೆ ಫಿಲ್ಮ್‌ ಇನ್ಸ್‌ಸ್ಟಿಟ್ಯೂಟ್‌ ಕೂಡ ಆರಂಭಿಸಲಾಗಿತ್ತು. ಇದನ್ನು ಶುರು ಮಾಡಲು ಪವನ್‌ ನಮ್ಮ ಬಳಿ ಹಣ ಕೇಳಿದ್ದರು. ಆಗ ನಾವು ಒಡವೆಗಳನ್ನು ಅಟ ಇಟ್ಟು ಹಣ ಕೊಟ್ಟಿದ್ದೆವು. ನಂತರ ಸಂಸ್ಥೆ ನಷ್ಟದಲ್ಲಿ ಮುಳುಗಿತು. ಆಗ ನಾವು 10 ಲಕ್ಷ ರೂ ಹಣವನ್ನು ಪವನ್‌ಗೆ ನೀಡಿದ್ದೆವು. ಇದಾದ ನಂತರವೂ ಪವನ್‌ ಹಾಗೂ ಅವರ ತಂದೆ, ತಾಯಿ ನನಗೆ ವರದಕ್ಷಿಣೆ ತರುವಂತೆ ಕಿರುಕುಳ ನೀಡಿದ್ದರು ಎಂದು ಪವಿತ್ರ ಗಂಭೀರ ಆರೋಪ ಮಾಡಿದ್ದಾರೆ.

ವರದಕ್ಷಿಣೆ ತರುವಂತೆ ನನ್ನನ್ನು ಮನೆಯಿಂದ ಹೊರಹಾಕಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಆರೋಪ ಪ್ರಕರಣದಲ್ಲಿ ಪವನ್‌ ಮೊದಲ ಆರೋಪಿಯಾಗಿದ್ದು, ಎಸ್.ನಾರಾಯಣ್‌ ಎರಡನೇ ಆರೋಪಿ ಆಗಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಒಡಿಶಾ: ಉಚಿತ ಶಿಕ್ಷಣ ಶ್ಲಾಘನೀಯ

ಒಡಿಶಾ ರಾಜ್ಯದ ಮುಖ್ಯಮಂತ್ರಿ ಮೋಹನ ಚರಣ ಮಾಂಝಿ ಅವರು ಎಲ್‌ಕೆಜಿಯಿಂದ ಸ್ನಾತಕೋತ್ತರ ಪದವಿಯವರೆಗೆ ( ವೈದ್ಯಕೀಯ, ಇಂಜಿನಿಯರಿಂಗ್, ಫಾರ್ಮಸಿ, ಕೃಷಿ,…

2 hours ago

ಓದುಗರ ಪತ್ರ: ನಾಯಿ ಕಡಿತಕ್ಕೆ ಲಸಿಕೆ ಸರಬರಾಜು ಮಾಡಿ

ಮೈಸೂರು ನಗರದಲ್ಲಿ ಬೀದಿ ನಾಯಿಗಳ ಉಪಟಳ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿದಿನ ನಾಯಿ ಕಡಿತದ ನೂರಾರು ಪ್ರಕರಣಗಳು ವರದಿಯಾಗುತ್ತಿವೆ. ಮೈಸೂರು…

2 hours ago

ಓದುಗರ ಪತ್ರ: ಕಸಾಪ ಭ್ರಷ್ಟರ ಕೈಗೆ ಸಿಗದಂತಾಗಲಿ

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆದಿದೆ ಎನ್ನಲಾದ ಎರಡು ಕೋಟಿ ರೂ.ಗಳಿಗೂ ಅಧಿಕ ಅನುದಾನ ದುರ್ಬಳಕೆಯ ಹಗರಣ ಕನ್ನಡಿಗರ ಸಾಂಸ್ಕೃತಿಕ ಅಸ್ಮಿತೆಗೆ…

2 hours ago

ಓದುಗರ ಪತ್ರ: ಸ್ವಾಗತಾರ್ಹ ಸದಾಶಯ!

ಪಂಚ ಗ್ಯಾರಂಟಿಗಳ ಪೈಕಿ ‘ಗೃಹಲಕ್ಷ್ಮಿ’, ‘ಗೃಹಜ್ಯೋತಿ’ ಯೋಜನೆಗಳು ದುರುಪಯೋಗ ಆಗುತ್ತಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇವುಗಳ ಪರಿಷ್ಕರಣೆಗೆ ಸರ್ಕಾರ ಮುಂದಾಗಿರುವುದು…

2 hours ago

ಗ್ರಾಮೀಣ ಪ್ರತಿಭೆ ನಿತಿಲ್ ಈಗ ಚಲನಚಿತ್ರ ನಾಯಕ ನಟ

ಮಂಜು ಕೋಟೆ ಕೋಟೆ: ಯುವಕನ ಪ್ರತಿಭೆ ಗುರುತಿಸಿ ಅವಕಾಶ ನೀಡಿರುವ ಕಾಲಘಟ್ಟ ಚಿತ್ರತಂಡ; ಜೂ.೧೯ರಂದು ಚಿತ್ರ ಬಿಡುಗಡೆ  ಎಚ್.ಡಿ.ಕೋಟೆ: ತಾಲ್ಲೂಕಿನ…

2 hours ago

ಕೈಕೊಟ್ಟ ಮಳೆ; ಬಾಡಿದ ಸೂರ್ಯಕಾಂತಿ ಬೆಳೆ

ಮಹೇಂದ್ರ ಹಸಗೂಲಿ ನಷ್ಟ ಹೊಂದಿದ ರೈತರಿಗೆ ಬೆಳೆ ವಿಮೆ ನೋಂದಣಿ ಜೊತೆಗೆ ಎಕರೆಗೆ ೫೦ ಸಾವಿರ ರೂ. ಪರಿಹಾರ ಭರಿಸಲು…

2 hours ago