ರಾಜ್ಯ

ಸರ್ಕಾರಿ ನೌಕರ ಪತಿಯ ವರದಕ್ಷಿಣೆ ಟಾರ್ಚರ್‌ : ನಾಲೆಗೆ ಹಾರಿದ ಮಹಿಳೆ

ಶಿವಮೊಗ್ಗ : ಪತಿ ಮತ್ತು ಆತನ ಮನೆಯವರ ವರದಕ್ಷಿಣೆ ಕಿರುಕುಳ ತಾಳಲಾರದೆ ಡೆತ್ನೋಟ್ ಬರೆದಿಟ್ಟು ಮಹಿಳೆಯೋರ್ವರು ಭದ್ರಾ ಬಲದಂಡೆ ನಾಲೆಗೆ ಹಾರಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಘಟನೆ ನಡೆದು ಮೂರು ದಿನಗಳಾಗಿದ್ದರೂ ನಾಲೆಗೆ ಹಾರಿರುವ ಮಹಿಳೆಯ ಪತ್ತೆ ಆಗಿಲ್ಲ. ಈ ಬಗ್ಗೆ ಸುದ್ದಿ ತಿಳಿಯುತ್ತಿದ್ದಂತೆ ಪತಿ ಮತ್ತು ಆತನ ಕುಟುಂಬಸ್ಥರು ಎಸ್ಕೇಪ್ ಆಗಿದ್ದಾರೆ. ಪತಿಯ ಮೊಬೈಲ್ ಸ್ವಿಚ್ ಆಫ್ ಆಗಿದೆ. ಹೊಳೆಹೊನ್ನೂರು ಪೊಲೀಸರು ಈ ಬಗ್ಗೆ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇದನ್ನು ಓದಿ : ಸೊಸೆಗೆ ವರದಕ್ಷಿಣೆ ಕಿರುಕುಳ ಆರೋಪ: ನಿರ್ದೇಶಕ ಎಸ್.ನಾರಾಯಣ್ ಹಾಗೂ ಕುಟುಂಬದ ವಿರುದ್ಧ ಎಫ್‌ಐಆರ್‌ ದಾಖಲು

ಘಟನೆ ವಿವರ :ಭದ್ರಾವತಿಯ ಡಿ.ಬಿ. ಹಳ್ಳಿಯ ಲತಾ ಮತ್ತು ಶಿಕಾರಿಪುರ ತಾಲೂಕಿನ ದಿಂಡಿನಹಳ್ಳಿ ಗ್ರಾಮದ ಗುರುರಾಜ್ ಮದುವೆ 2025ರ ಏಪ್ರಿಲ್ 14ರಂದು ನೆರವೇರಿತ್ತು. ಭದ್ರಾ ಡ್ಯಾಂನ ಕೆಪಿಸಿಎಲ್ನಲ್ಲಿ ಎಇಇ ಆಗಿ ಗುರುರಾಜ್ ಸೇವೆ ಸಲ್ಲಿಸುತ್ತಿದ್ದರು. ಸರಕಾರಿ ಅಧಿಕಾರಿ ಎನ್ನುವ ಕಾರಣಕ್ಕೆ ಭರ್ಜರಿ ವರದಕ್ಷಿಣೆ ಕೊಟ್ಟು ಲತಾ ಪೋಷಕರು ಮಗಳ ಮದುವೆ ಮಾಡಿದ್ದರು. 30 ಗ್ರಾಂ ಚಿನ್ನಾಭರಣ, 10 ಲಕ್ಷ ನಗದು ಸೇರಿ ಸಿಮಾರು 60 ಲಕ್ಷ ರೂ.ಗಳನ್ನ ಖರ್ಚು ಮಾಡಿದ್ದರು. ಇಷ್ಟೆಲ್ಲಾ ವರದಕ್ಷಣೆ, ವರೋಪಚಾರ ಪಡೆದ್ರೂ ಅವರ ದಾಹ ಕಡಿಮೆ ಆಗಿರಲಿಲ್ಲ. ಮದುವೆ ನಡೆದ ಒಂದೇ ತಿಂಗಳಿಗೆ ಪತಿ ಮನೆಯವರ ಬಣ್ಣ ಲತಾ ಎದುರು ಬಯಲಾಗಿದೆ. ವರದಕ್ಷಿಣೆಗಾಗಿ ಪತಿ ಗುರುರಾಜ್ ಜೊತೆ ಆತನ ಮನೆಯವರೂ ಪೀಡಿಸಿದ್ದಾರೆ.

ಒಂದೇ ಒಂದು ದಿನವೂ ಲತಾರನ್ನು ಚೆನ್ನಾಗಿ ನೋಡಿಕೊಳ್ಳದ ಗುರುರಾಜ್, ಪದೇ ಪದೇ ಕಿರುಕುಳ ನೀಡುತ್ತಿದ್ದ. ಪತ್ನಿ ಮುಂದೆಯೇ ಅಕ್ಕನ ಮಗಳ ಜೊತೆ ಸಲಿಗೆಯಿಂದ ಇರುತ್ತಿದ್ದ. ಅಲ್ಲದೆ ಇನ್ನೊಂದು ಯುವತಿಯ ಜೊತೆಗೂ ಚಾಟಿಂಗ್ ನಡೆಸುತ್ತಿದ್ದ. ಈ ಎಲ್ಲ ವಿಷಯವನ್ನೂ ಲತಾ ಡೆತ್ನೋಟ್ನಲ್ಲಿ ಉಲ್ಲೇಖಿಸಿದ್ದಾರೆ. ಆಷಾಡಕ್ಕೆಂದು ಭದ್ರಾವತಿ ತಾಲೂಕಿನ ಡಿ.ಬಿ. ಹಳ್ಳಿಯ ತವರು ಮನೆಗೆ ಲತಾ ಬಂದಿದ್ದರು. ಆದ್ರೆ ಆಷಾಡ ಮುಗಿದ್ರೂ ಪತ್ನಿಯನ್ನು ಮನೆಗೆ ಕರೆದುಕೊಂಡು ಹೋಗಲು ಗುರುರಾಜ್ ಬಂದಿರಲೇ ಇಲ್ಲ. ಈ ಎಲ್ಲ ಘಟನೆಗಳಿಂದಾಗಿ ಲತಾ ಮಾನಸಿಕವಾಗಿ ನೊಂದಿದ್ದರು. ಹೀಗಾಗಿ ತನ್ನ ಸಾವಿಗೆ ಪತಿಯ ಅಕ್ಕಂದಿರಾದ ನಾಗರತ್ನಾ, ರಾಜೇಶ್ವರಿ, ಅತ್ತೆ ಶಾರದಮ್ಮ, ಪತಿಯ ಅಕ್ಕನ ಗಂಡ ಕೃಷ್ಣಪ್ಪ ಹಾಗೂ ಪತಿ ಗುರುರಾಜ್ ಕಾರಣ ಎಂದು ಲತಾ ಡೆತ್ನೋಟ್ನಲ್ಲಿ ಆರೋಪಿಸಿದ್ದಾರೆ.

ನವೆಂಬರ್ 23ರಂದು ಭದ್ರಾವತಿಯ ತಾಲೂಕಿನ ಹಂಚಿನ ಸಿದ್ದಾಪುರ ಗ್ರಾಮದ ಬಳಿ ಇರುವ ಭದ್ರಾ ಬಲದಂಡೆ ನಾಲೆಗೆ ಹಾರಿದ್ದಾರೆ. ಸಾಯುವ ಮೊದಲು ನಾಲೆಯ ಬಳಿ ಇರುವ ದೇಗುಲ ಬಳಿ ಬಳೆ ಹಾಗೂ ಮೊಬೈಲ್ ಇಟ್ಟು ಹೊಗಿದ್ದಾರೆ. ಮಗಳ ನಿರ್ಧಾರದಿಂದ ಪೋಷಕರು ಕಂಗಾಲಾಗಿದ್ದು, ನಾಲೆ ಬಳಿ ಗ್ರಾಮಸ್ಥರು ಮತ್ತು ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

IPL 2026 | ಕಂಗೆಟ್ಟ ಕ್ಯಾಪಿಟಲ್ಸ್‌ ; ಡೆಲ್ಲಿ ವಿರುದ್ಧ ಆರ್‌ಸಿಬಿಗೆ ಸುಲಭ ಜಯ

ನವದೆಹಲಿ : ಹ್ಯಾಜಲ್‌ವುಡ್‌, ಭುವನೇಶ್ವರ್ ಬೌಲಿಂಗ್‌ ಅಬ್ಬರ, ಸಂಘಟಿತ ಫೀಲ್ಡಿಂಗ್‌ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು…

3 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಮೈಸೂರು : ಕೆ-ಸೆಟ್‌ ಮತ್ತು ಯುಜಿಸಿ-ನೆಟ್‌, ಜೆಆರ್‌ಎಫ್‌ ಅರ್ಹತಾ ಪರೀಕ್ಷೆ ಬರೆಯುವವರಿಗೆ 45 ದಿನಗಳ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕ…

4 hours ago

ಹಾಸನ | ಮೆದುಳಿನಲ್ಲಿ ತೀವ್ರ ರಕ್ತಸ್ರಾವ ; 25 ವರ್ಷದ ಸಾಫ್ಟ್‌ವೇರ್‌ ಇಂಜಿನಿಯರ್‌ ಯುವತಿ ಸಾವು

ಹಾಸನ : ಹಠಾತ್ ಕುಸಿದು ಬಿದ್ದು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಯುವತಿ ಚಿಕಿತ್ಸೆ ಫಲಿಸದೆ…

4 hours ago

ಚೆಲುವಾಂಬ ಆಸ್ಪತ್ರೆ | 15 ತಿಂಗಳಲ್ಲಿ 421 ಶಿಶು ಮರಣ ; ದಾಖಲೆ ಬಿಡುಗಡೆ ಮಾಡಿದ ಮಾಜಿ ಶಾಸಕ ನಾಗೇಂದ್ರ

ಮೈಸೂರು : ಮೈಸೂರು ಪ್ರಾಂತ್ಯದಲ್ಲೇ ಪ್ರಸೂತಿ, ಸ್ತ್ರೀರೋಗ ಮತ್ತು ಮಕ್ಕಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಲ್ಲಿ ಹೆಸರುವಾಸಿಯಾಗಿದ್ದ ಮೈಸೂರಿನ ಚೆಲುವಾಂಬ ಆಸ್ಪತ್ರೆಯ…

5 hours ago

ಪಶ್ಚಿಮ ಬಂಗಾಳ ಎರಡನೇ ಹಂತದ ಚುನಾವಣೆ : ಏ.29ರಂದು ಮತದಾನ ; ಭಾರೀ ಬಿಗಿ ಭದ್ರತೆ

ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಚುನಾವಣೆ ಸೋಮವಾರ ಅಂತ್ಯವಾಗಿದೆ. ಏ.29ರಂದು ಮತದಾನ ನಡೆಯಲಿದ್ದು,…

6 hours ago

ಅರಳುಮರಳು ಮಾತು, ಕ್ಷಮಿಸಿಬಿಡೋಣ : ಎಚ್.ವಿಶ್ವನಾಥ್ ಹೇಳಿಕೆಗೆ ಸಚಿವ ಮಧು ಬಂಗಾರಪ್ಪ ತಿರುಗೇಟು

ಶಿವಮೊಗ್ಗ : ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ‘ಕಾಪಿ ಹೊಡೆಸಿ ಶೇ.94.1 ಫಲಿತಾಂಶ ತಂದಿದ್ದಾರೆ’ ಎಂಬ ಬಿಜೆಪಿ ಎಂಎಲ್‌ಸಿ ಎಚ್.ವಿಶ್ವನಾಥ್ ಅವರ ಹೇಳಿಕೆಗೆ…

6 hours ago