ರಾಜ್ಯ

ಸರ್ಕಾರಿ ನೌಕರ ಪತಿಯ ವರದಕ್ಷಿಣೆ ಟಾರ್ಚರ್‌ : ನಾಲೆಗೆ ಹಾರಿದ ಮಹಿಳೆ

ಶಿವಮೊಗ್ಗ : ಪತಿ ಮತ್ತು ಆತನ ಮನೆಯವರ ವರದಕ್ಷಿಣೆ ಕಿರುಕುಳ ತಾಳಲಾರದೆ ಡೆತ್ನೋಟ್ ಬರೆದಿಟ್ಟು ಮಹಿಳೆಯೋರ್ವರು ಭದ್ರಾ ಬಲದಂಡೆ ನಾಲೆಗೆ ಹಾರಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಘಟನೆ ನಡೆದು ಮೂರು ದಿನಗಳಾಗಿದ್ದರೂ ನಾಲೆಗೆ ಹಾರಿರುವ ಮಹಿಳೆಯ ಪತ್ತೆ ಆಗಿಲ್ಲ. ಈ ಬಗ್ಗೆ ಸುದ್ದಿ ತಿಳಿಯುತ್ತಿದ್ದಂತೆ ಪತಿ ಮತ್ತು ಆತನ ಕುಟುಂಬಸ್ಥರು ಎಸ್ಕೇಪ್ ಆಗಿದ್ದಾರೆ. ಪತಿಯ ಮೊಬೈಲ್ ಸ್ವಿಚ್ ಆಫ್ ಆಗಿದೆ. ಹೊಳೆಹೊನ್ನೂರು ಪೊಲೀಸರು ಈ ಬಗ್ಗೆ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇದನ್ನು ಓದಿ : ಸೊಸೆಗೆ ವರದಕ್ಷಿಣೆ ಕಿರುಕುಳ ಆರೋಪ: ನಿರ್ದೇಶಕ ಎಸ್.ನಾರಾಯಣ್ ಹಾಗೂ ಕುಟುಂಬದ ವಿರುದ್ಧ ಎಫ್‌ಐಆರ್‌ ದಾಖಲು

ಘಟನೆ ವಿವರ :ಭದ್ರಾವತಿಯ ಡಿ.ಬಿ. ಹಳ್ಳಿಯ ಲತಾ ಮತ್ತು ಶಿಕಾರಿಪುರ ತಾಲೂಕಿನ ದಿಂಡಿನಹಳ್ಳಿ ಗ್ರಾಮದ ಗುರುರಾಜ್ ಮದುವೆ 2025ರ ಏಪ್ರಿಲ್ 14ರಂದು ನೆರವೇರಿತ್ತು. ಭದ್ರಾ ಡ್ಯಾಂನ ಕೆಪಿಸಿಎಲ್ನಲ್ಲಿ ಎಇಇ ಆಗಿ ಗುರುರಾಜ್ ಸೇವೆ ಸಲ್ಲಿಸುತ್ತಿದ್ದರು. ಸರಕಾರಿ ಅಧಿಕಾರಿ ಎನ್ನುವ ಕಾರಣಕ್ಕೆ ಭರ್ಜರಿ ವರದಕ್ಷಿಣೆ ಕೊಟ್ಟು ಲತಾ ಪೋಷಕರು ಮಗಳ ಮದುವೆ ಮಾಡಿದ್ದರು. 30 ಗ್ರಾಂ ಚಿನ್ನಾಭರಣ, 10 ಲಕ್ಷ ನಗದು ಸೇರಿ ಸಿಮಾರು 60 ಲಕ್ಷ ರೂ.ಗಳನ್ನ ಖರ್ಚು ಮಾಡಿದ್ದರು. ಇಷ್ಟೆಲ್ಲಾ ವರದಕ್ಷಣೆ, ವರೋಪಚಾರ ಪಡೆದ್ರೂ ಅವರ ದಾಹ ಕಡಿಮೆ ಆಗಿರಲಿಲ್ಲ. ಮದುವೆ ನಡೆದ ಒಂದೇ ತಿಂಗಳಿಗೆ ಪತಿ ಮನೆಯವರ ಬಣ್ಣ ಲತಾ ಎದುರು ಬಯಲಾಗಿದೆ. ವರದಕ್ಷಿಣೆಗಾಗಿ ಪತಿ ಗುರುರಾಜ್ ಜೊತೆ ಆತನ ಮನೆಯವರೂ ಪೀಡಿಸಿದ್ದಾರೆ.

ಒಂದೇ ಒಂದು ದಿನವೂ ಲತಾರನ್ನು ಚೆನ್ನಾಗಿ ನೋಡಿಕೊಳ್ಳದ ಗುರುರಾಜ್, ಪದೇ ಪದೇ ಕಿರುಕುಳ ನೀಡುತ್ತಿದ್ದ. ಪತ್ನಿ ಮುಂದೆಯೇ ಅಕ್ಕನ ಮಗಳ ಜೊತೆ ಸಲಿಗೆಯಿಂದ ಇರುತ್ತಿದ್ದ. ಅಲ್ಲದೆ ಇನ್ನೊಂದು ಯುವತಿಯ ಜೊತೆಗೂ ಚಾಟಿಂಗ್ ನಡೆಸುತ್ತಿದ್ದ. ಈ ಎಲ್ಲ ವಿಷಯವನ್ನೂ ಲತಾ ಡೆತ್ನೋಟ್ನಲ್ಲಿ ಉಲ್ಲೇಖಿಸಿದ್ದಾರೆ. ಆಷಾಡಕ್ಕೆಂದು ಭದ್ರಾವತಿ ತಾಲೂಕಿನ ಡಿ.ಬಿ. ಹಳ್ಳಿಯ ತವರು ಮನೆಗೆ ಲತಾ ಬಂದಿದ್ದರು. ಆದ್ರೆ ಆಷಾಡ ಮುಗಿದ್ರೂ ಪತ್ನಿಯನ್ನು ಮನೆಗೆ ಕರೆದುಕೊಂಡು ಹೋಗಲು ಗುರುರಾಜ್ ಬಂದಿರಲೇ ಇಲ್ಲ. ಈ ಎಲ್ಲ ಘಟನೆಗಳಿಂದಾಗಿ ಲತಾ ಮಾನಸಿಕವಾಗಿ ನೊಂದಿದ್ದರು. ಹೀಗಾಗಿ ತನ್ನ ಸಾವಿಗೆ ಪತಿಯ ಅಕ್ಕಂದಿರಾದ ನಾಗರತ್ನಾ, ರಾಜೇಶ್ವರಿ, ಅತ್ತೆ ಶಾರದಮ್ಮ, ಪತಿಯ ಅಕ್ಕನ ಗಂಡ ಕೃಷ್ಣಪ್ಪ ಹಾಗೂ ಪತಿ ಗುರುರಾಜ್ ಕಾರಣ ಎಂದು ಲತಾ ಡೆತ್ನೋಟ್ನಲ್ಲಿ ಆರೋಪಿಸಿದ್ದಾರೆ.

ನವೆಂಬರ್ 23ರಂದು ಭದ್ರಾವತಿಯ ತಾಲೂಕಿನ ಹಂಚಿನ ಸಿದ್ದಾಪುರ ಗ್ರಾಮದ ಬಳಿ ಇರುವ ಭದ್ರಾ ಬಲದಂಡೆ ನಾಲೆಗೆ ಹಾರಿದ್ದಾರೆ. ಸಾಯುವ ಮೊದಲು ನಾಲೆಯ ಬಳಿ ಇರುವ ದೇಗುಲ ಬಳಿ ಬಳೆ ಹಾಗೂ ಮೊಬೈಲ್ ಇಟ್ಟು ಹೊಗಿದ್ದಾರೆ. ಮಗಳ ನಿರ್ಧಾರದಿಂದ ಪೋಷಕರು ಕಂಗಾಲಾಗಿದ್ದು, ನಾಲೆ ಬಳಿ ಗ್ರಾಮಸ್ಥರು ಮತ್ತು ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

20 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

20 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

20 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

20 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

20 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

20 hours ago