ರಾಮನಗರ: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ತಮ್ಮ ಪರವಾಗಿ ಪ್ರಚಾರ ಮಾಡಿದ ಕಾರ್ಯಕರ್ತರ ಮೇಲಿನ ಹಲ್ಲೆಯನ್ನು ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಡಾ.ಸಿ.ಎನ್ ಮಂಜುನಾಥ್ ಖಂಡಿಸಿದ್ದಾರೆ.
ಚನ್ನಪಟ್ಟಣ ತಲೂಕಿನ ಹೊಂಗನೂರಿನಲ್ಲಿ ಮಾತನಾಡಿರುವ ಅವರು, ಇದು ನಮ್ಮ ಸಂಸ್ಕೃತಿಯಲ್ಲ. ಚುನಾವಣೆ ಏನಿದ್ದರು ನಮ್ಮ ತತ್ವ ಸಿದ್ದಾಂತದ ಮೇಲೆ ನಡೆಯಬೇಕು ಚುನಾವಣೆ ಅವರ ವಿರುದ್ಧವಾಗಿ ಸಾಗುತ್ತಿದೆ ಎಂಬ ಹತಾಶೆಯಿಂದ ಈ ರೀತಿಯ ಕೃತ್ಯ ಮಾಡಿರಬೇಕು. ಚುನಾವಣೆಯಲ್ಲಿ ಸಿದ್ದಾಂತದ ಮೇಲೆ ಎದುರಿಸಬೇಕು ಕೃತ್ಯಗಳ ಮೂಲಕವಲ್ಲ ಎಂದು ಕಿಡಿಕಾರಿದ್ದಾರೆ.
ನಮ್ಮ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಈಗಾಗಲೇ ಡಿಐಜಿ ಜೊತೆ ಚರ್ಚಿಸಿದ್ದೇನೆ. ಚುನಾವಣೆಯನ್ನು ಆರೋಗ್ಯಕರವಾಗಿ ಎದುರಿಸುವುದು ಬಿಟ್ಟು ಈ ರೀತಿ ಅಡ್ಡದಾರಿ ಹಿಡಿಯಬಾರದು ಎಂದು ಬೇಸರ ವ್ಯಕ್ತಪಡಿಸಿದರು.
ಇನ್ನು ಡಾಕ್ಟರ್ ವರ್ಸ್ ಡಾಕು ಎಂಬ ಪದ ಬಳಕೆ ಬಗ್ಗೆಯೂ ಬೇಸರ ವ್ಯಕ್ತಪಡಿಸಿರುವ ಅವರು, ವಯಕ್ತಿಕ ಟೀಕೆಗಳನ್ನು ಚುನಾವಣೆಯಲ್ಲಿ ಮಾಡುವುದು ಸರಿಯಲ್ಲ. ನಮ್ಮ ಸಿದ್ಧಾಂತದ ಆಧಾರದಲ್ಲಿ ಪ್ರಚಾರ ಮಾಡಿ ಎಂದು ಮನವಿ ಮಾಡಿದರು.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…